ರೆಪೋ ದರದಲ್ಲಿ ಬದಲಾವಣೆ ಇಲ್ಲ: ಆರ್ಬಿಐನ ಪ್ರಮುಖ ನಿರ್ಧಾರಗಳು ಇಲ್ಲಿದೆ
ನವದೆಹಲಿ, ಡಿಸೆಂಬರ್ 04: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಶುಕ್ರವಾರ ತನ್ನ ದ್ವೈಮಾಸಿಕ ಹಣಕಾಸು ನೀತಿ ಪರಿಶೀಲನೆ ಮಾಡಿದ್ದು ರೆಪೋ ದರವನ್ನು ಬದಲಾಯಿಸದೇ ಇರಲು ನಿರ್ಧರಿಸಿದೆ. ಹೀಗಾಗಿ ರೆಪೋ ದರದಲ್ಲಿ ಸದ್ಯ ಇರುವ ಶೇಕಡಾ 4ರಷ್ಟು ದರವನ್ನು ಮುಂದುವರಿಸಿದೆ.
ವಿತ್ತೀಯ ನೀತಿ ಸಮಿತಿ (ಎಂಪಿಸಿ) ಸಭೆ ಡಿಸೆಂಬರ್ 2 ರಂದು ಪ್ರಾರಂಭವಾಯಿತು, ಸುದೀರ್ಘ ಪರಿಶೀಲನೆ ಬಳಿಕ ಇಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಪತ್ರಿಕಾಗೋಷ್ಠಿ ರೆಪೋ ದರದ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರ ಪ್ರಕಾರ ಎಂಪಿಸಿಯ ಎಲ್ಲ ಸದಸ್ಯರು ಯಥಾಸ್ಥಿತಿಯನ್ನು ರೆಪೊ ದರದಲ್ಲಿ ಇರಿಸಲು ಪರವಾಗಿದ್ದರು.
ರೆಪೊ ದರ ಯಥಾಸ್ಥಿತಿ ಮುಂದುವರೆದರ ಪರಿಣಾಮ ಬ್ಯಾಂಕುಗಳು ತಮ್ಮ ಬಡ್ಡಿದರಗಳನ್ನು ಬದಲಾಯಿಸುವುದಿಲ್ಲ ಎಂದು ಸಾಮಾನ್ಯವಾಗಿ ನಂಬಲಾಗಿದೆ. ಅಂದರೆ, ಸಾಲದ ಬಡ್ಡಿದರಗಳು ಇನ್ನು ಮುಂದೆ ವೇಗವಾಗಿ ಕುಸಿಯುವ ನಿರೀಕ್ಷೆಯಿಲ್ಲ.

ರೆಪೊ ದರವು ಆರ್ಬಿಐ ಬ್ಯಾಂಕುಗಳಿಗೆ ಸಾಲ ನೀಡುವ ದರವಾಗಿದೆ. ಈ ಸಾಲದೊಂದಿಗೆ ಬ್ಯಾಂಕುಗಳು ಗ್ರಾಹಕರಿಗೆ ಸಾಲವನ್ನು ನೀಡುತ್ತವೆ. ಕಡಿಮೆಯಾದ ರೆಪೊ ದರ ಎಂದರೆ ಗೃಹ ಸಾಲಗಳು, ವಾಹನ ಸಾಲಗಳು ಸೇರಿದಂತೆ ಅನೇಕ ರೀತಿಯ ಸಾಲಗಳು ಅನೇಕ ಬ್ಯಾಂಕಿನಿಂದ ಅಗ್ಗವಾಗುತ್ತವೆ.
ರೆಪೋ ದರದ ಜೊತೆಗೆ ರಿವರ್ಸ್ ರೆಪೋ ದರದಲ್ಲೂ(3.35) ಆರ್ಬಿಐ ಯಾವುದೇ ಬದಲಾವಣೆ ಮಾಡಿಲ್ಲ. ಅದರ ಹೆಸರೇ ಸೂಚಿಸುವಂತೆ, ಇದು ರೆಪೊ ದರದ ಹಿಮ್ಮುಖವಾಗಿದೆ. ಬ್ಯಾಂಕುಗಳು ತಮ್ಮ ಪರವಾಗಿ ಆರ್ಬಿಐನಲ್ಲಿ ಠೇವಣಿ ಇರಿಸಿದ ಹಣಕ್ಕೆ ಬಡ್ಡಿಯನ್ನು ಪಡೆಯುವ ದರ ಇದು.
ಮಾರುಕಟ್ಟೆಗಳಲ್ಲಿ ಹಣದ ದ್ರವ್ಯತೆಯನ್ನು ನಿಯಂತ್ರಿಸಲು ರಿವರ್ಸ್ ರೆಪೊ ದರವನ್ನು ಬಳಸಲಾಗುತ್ತದೆ. ಮಾರುಕಟ್ಟೆಯಲ್ಲಿ ಹೆಚ್ಚು ಹಣವಿದ್ದಾಗಲೆಲ್ಲಾ, ಆರ್ಬಿಐ ರಿವರ್ಸ್ ರೆಪೊ ದರವನ್ನು ಹೆಚ್ಚಿಸುತ್ತದೆ, ಇದರಿಂದಾಗಿ ಹೆಚ್ಚಿನ ಬಡ್ಡಿ ಗಳಿಸಲು ಬ್ಯಾಂಕ್ ತನ್ನ ಹಣವನ್ನು ಆರ್ಬಿಐನಲ್ಲಿ ಠೇವಣಿ ಇಡುತ್ತದೆ.
ಇನ್ನು ಹೆಚ್ಚಿನ ವಲಯಗಳು ಚೇತರಿಕೆಯ ಹಾದಿಯಲ್ಲಿ ಸಾಗುತ್ತಿರುವುದರಿಂದ ಆರ್ಥಿಕತೆಯು ವೇಗವಾಗಿ ಚೇತರಿಸಿಕೊಳ್ಳುತ್ತಿದೆ ಎಂದು ಶಕ್ತಿಕಾಂತ ದಾಸ್ ಹೇಳಿದರು. 2021 ರ ನೈಜ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಬೆಳವಣಿಗೆಯನ್ನು ಶೇಕಡಾ ಮೈನಸ್ 7.5 ರಷ್ಟು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.
ಕ್ಯೂ 3 ರ ಜಿಡಿಪಿ ಬೆಳವಣಿಗೆಯನ್ನು ಶೇ. + 0.1ರಷ್ಟು ಮತ್ತು ಕ್ಯೂ 4 ಶೇಕಡಾ + 0.7ರಷ್ಟು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಯೋಜಿಸುತ್ತಿದೆ ಎಂದು ಅವರು ಹೇಳಿದರು. ಸೆಂಟ್ರಲ್ ಬ್ಯಾಂಕ್ ಮಾರ್ಚ್ ಅಂತ್ಯದಿಂದ ರೆಪೊ ದರವನ್ನು 115 ಬೇಸಿಸ್ ಪಾಯಿಂಟ್ಗಳಿಂದ ಕಡಿತಗೊಳಿಸಿ ಬೆಳವಣಿಗೆಯನ್ನು ಬೆಂಬಲಿಸಿತು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications