ಬ್ಯಾಂಕ್ಗಳಲ್ಲಿ ಪ್ರವರ್ತಕರು ಶೇ. 26ರಷ್ಟು ಷೇರುಗಳನ್ನು ಹೊಂದಲು ಸಿಗಲಿದೆ ಅವಕಾಶ?
ನವದೆಹಲಿ, ನವೆಂಬರ್ 21: ದೇಶದ ಖಾಸಗಿ ಬ್ಯಾಂಕ್ಗಳಲ್ಲಿ ಪ್ರವರ್ತಕರು(Promoters) ಗರಿಷ್ಠ ಶೇಕಡಾ 26ರವರೆಗೆ ಷೇರುಗಳನ್ನು ಹೊಂದಲು ಅವಕಾಶ ಕೊಡಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ಆಂತರಿಕ ಕಾರ್ಯಕಾರಿ ಸಮಿತಿಯೊಂದು ಪ್ರಸ್ತಾವ ಸಲ್ಲಿಸಿದೆ. ಇದರ ಜೊತೆಗೆ ದೊಡ್ಡ ಬ್ಯಾಂಕೇತರ ಹಣಕಾಸು ಕಂಪನಿಗಳನ್ನು(ಎನ್ಬಿಎಫ್ಸಿ) ಬ್ಯಾಂಕುಗಳಾಗಿ ಪರಿವರ್ತಿಸಲು ಸಮಿತಿ ಸೂಚಿಸಿದೆ.
ಈಗಿರುವ ನಿಯಮಗಳ ಪ್ರಕಾರ ಖಾಸಗಿ ಬ್ಯಾಂಕುಗಳಲ್ಲಿ ಪ್ರವರ್ತಕರು ಶೇ.15ರಷ್ಟು ಷೇರುಗಳನ್ನು ಹೊಂದಬಹುದು. ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹೊಂದಲು ಅವಕಾಶವಿಲ್ಲ. ಆದರೆ ಈಗಿರುವ ಮಿತಿಯನ್ನು ಮುಂದಿನ 15 ವರ್ಷಗಳ ಅವಧಿಯಲ್ಲಿ ಶೇ. 26ಕ್ಕೆ ಹೆಚ್ಚಿಸಬಹುದು ಎಂದು ಸಮಿತಿಯು ಸಲಹೆಯನ್ನು ನೀಡಿದೆ.
ಆರ್ಬಿಐ ಶುಕ್ರವಾರ ಸಮಿತಿಯ ವರದಿಯನ್ನು ಬಿಡುಗಡೆ ಮಾಡಿದ್ದು, ದೇಶದ ಖಾಸಗಿ ಬ್ಯಾಂಕುಗಳ ಮಾಲೀಕತ್ವದ ವಿಚಾರವಾಗಿ ಈಗಿರುವ ನಿಯಮಗಳು ಹೇಗಿದೆ ಎಂದು ಪರಿಶೀಲಿಸಲು ಜೂನ್ನಲ್ಲಿ ಆರ್ಬಿಐ ಈ ಸಮಿತಿಯನ್ನು ರಚಿಸಿತ್ತು.

ಇನ್ನು ಚೆನ್ನಾಗಿ ನಡೆಯುತ್ತಿರುವ ಬ್ಯಾಂಕೇತರ ಹಣಕಾಸು ಸಂಸ್ಥೆಗಳ ಆಸ್ತಿಯ ಒಟ್ಟು ಮೊತ್ತವು 50 ಸಾವಿರ ಕೋಟಿಗಿಂತ ಹೆಚ್ಚಿದ್ದರೆ, ಅವುಗಳನ್ನು ಬ್ಯಾಂಕ್ ಆಗಿ ಪರಿವರ್ತಿಸಬಹುದು ಎಂಬ ಸಲಹೆಯನ್ನು ಕೊಟ್ಟಿದೆ. ಕಾರ್ಪೋರೇಟ್ ಕಂಪನಿಗಳು ನಡೆಸುತ್ತಿರುವ ಎನ್ಬಿಎಫ್ಸಿಗಳನ್ನು ಬ್ಯಾಂಕ್ ಆಗಿ ಪರಿವರ್ತಿಸಲು ಪರಿಗಣಿಸಬಹುದು. ಆದರೆ ಅವು ಕನಿಷ್ಠ 10 ವರ್ಷಗಳಿಂದ ವಹಿವಾಟು ನಡೆಸುತ್ತಿರಬೇಕು ಎಂದಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications