ನೋಟು ಮುದ್ರಣ ಹೆಚ್ಚಳ: ಕ್ಯಾಶ್ಲೆಸ್ ಇಂಡಿಯಾ ಕಥೆಯೇನು?
ನವದೆಹಲಿ, ಆಗಸ್ಟ್ 30: ಅಪನಗದೀಕರಣದ ಬಳಿಕ ಹಿಂದಿಗಿಂತಲೂ ಅಧಿಕ ಪ್ರಮಾಣದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ನೋಟುಗಳನ್ನು ಮುದ್ರಿಸಿದೆ.
ಡಿಜಿಟಲ್ ಇಂಡಿಯಾದ ಗುರಿಯಲ್ಲಿ 'ನಗದು ರಹಿತ' ಭಾರತದ ನಿರ್ಮಾಣದ ಮೋದಿ ಸರ್ಕಾರದ ಉದ್ದೇಶಕ್ಕೆ ವ್ಯತಿರಿಕ್ತವಾದ ಸನ್ನಿವೇಶ ಕಂಡುಬಂದಿದೆ.
ಅಪನಗದೀಪಕರಣ ಬಳಿಕದ ಎರಡು ವರ್ಷಗಳಲ್ಲಿ ಹೊಸ ನೋಟ್ಗಳ ಪ್ರಮಾಣ ಮತ್ತು ಮುದ್ರಣ ಮೌಲ್ಯಗಳಲ್ಲಿ ಗಣನೀಯ ಹೆಚ್ಚಳವಾಗಿದೆ. 2016ರ ನವೆಂಬರ್ 8ರಂದು ಅಪನಗದೀಕರಣದ ಘೋಷಣೆ ಮಾಡಲಾಗಿತ್ತು. ಅದಕ್ಕೂ ಹಿಂದಿನ ಸನ್ನಿವೇಶಕ್ಕೆ ಹೋಲಿಸಿದರೆ ಕಳೆದ ಎರಡು ವರ್ಷಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ನೋಟುಗಳನ್ನು ಮುದ್ರಿಸಲಾಗಿದೆ.

ಎರಡು ನೋಟು ಮುದ್ರಣ ಕಂಪೆನಿಗಳಾದ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಪ್ರೈವೇಟ್ ಲಿ (ಬಿಆರ್ಬಿಎನ್ಎಂಪಿಎಲ್) ಮತ್ತು ಸೆಕ್ಯುಟಿರಿ & ಮಿಂಟಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿ. (ಎಸ್ಪಿಎಂಸಿಐಎಲ್) 2018-19ನೇ ಸಾಲಿನಲ್ಲಿ 2,919.1 ಕೋಟಿ ನೋಟುಗಳನ್ನು ಮುದ್ರಿಸಿವೆ. ಇದು 2016-17 ಹಾಗೂ ಅದಕ್ಕೂ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಅಧಿಕ ಸಂಖ್ಯೆಯ ನೋಟುಗಳ ಪೂರೈಕೆಯಾಗಿದೆ.
2016-17ನೇ ಸಾಲಿನಲ್ಲಿ 13.39 ಲಕ್ಷ ಕೋಟಿ ರೂ. ಒಟ್ಟುಮುಖಬೆಲೆಯ ಹೊಸ ನೋಟುಗಳನ್ನು ಪೂರೈಸಿದೆ. 2016-17ರಲ್ಲಿ ಇದು 7.26 ಲಕ್ಷ ಕೋಟಿ ರೂ. ಇತ್ತು.
ಈ ಎರಡೂ ಕಂಪೆನಿಗಳು ಪೂರೈಕೆ ಮಾಡುತ್ತಿರುವ ಹೊಸ ನೋಟುಗಳ ಮೌಲ್ಯ ಶೇ 16.1ರಷ್ಟು ಹೆಚ್ಚಾಗಿದೆ. ಇದು ಭಾರತದ ಜಿಡಿಪಿಯ ಶೇ 11.2ರಷ್ಟು ಹೆಚ್ಚು. ನೋಟು ಅಪನಗದೀಕರಣದ ಬಳಿಕ 2016-17ರಲ್ಲಿ ತನ್ನ ಆದಾಯ ಶೇ 23.56ರಷ್ಟು ಕುಸಿತವಾಗಿದ್ದರೆ, ವೆಚ್ಚ ಶೇ 107.84ರಷ್ಟು ಅಧಿಕವಾಗಿತ್ತು ಎಂದು ಆರ್ಬಿಐ ತಿಳಿಸಿತ್ತು.
2000 ರೂ. ಮುಖಬೆಲೆಯ ನೋಟುಗಳ ಚಲಾವಣೆಯ ಪ್ರಮಾಣ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಆರ್ಬಿಐ ಹಿಂದೆಂದಿಗಿಂತಲೂ ಅಧಿಕ ಪ್ರಮಾಣದಲ್ಲಿ ನೋಟುಗಳನ್ನು ಮುದ್ರಿಸುತ್ತಿದೆ. ನಗದು ರಹಿತ ಭಾರತದ ಕನಸು ಬಿತ್ತಿರುವ ಮೋದಿ ಸರ್ಕಾರದ ಆಶಯ ಇಲ್ಲಿ ನೆರವೇರುವ ಸೂಚನೆ ಕಾಣಿಸುತ್ತಿಲ್ಲ. ಹೆಚ್ಚಿನ ಕಡೆ ಡಿಜಿಟಲ್ ವಹಿವಾಟು ನಡೆಯುತ್ತಿದ್ದರೂ ಅಧಿಕ ಪ್ರಮಾಣದಲ್ಲಿ ನೋಟುಗಳು ಚಲಾವಣೆಗೆ ಬರುತ್ತಿವೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications