ರೆಪೋ ದರ ಇಳಿಕೆ: ಗೃಹಸಾಲ, ವಾಹನ ಸಾಲ ಬಡ್ಡಿದರ ಇಳಿಕೆ ?
ಮುಂಬೈ, ಜೂ. 02: ಅರ್ಥ ವ್ಯವಸ್ಥೆಯ ಉತ್ತೇಜನ, ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಸ್ಥಿರತೆ, ಹಣದುಬ್ಬರ ನಿಯಂತ್ರಣ ಹಿನ್ನೆಲೆಯಲ್ಲಿ ಆರ್ ಬಿಐ ಗವರ್ನರ್ ರಘುರಾಮ್ ಜಿ ರಾಜನ್ ಅವರು ಹೊಸ ಹಣಕಾಸು ನೀತಿಯನ್ನು ಮಂಗಳವಾರ ಪ್ರಕಟಿಸಿದ್ದಾರೆ. ಆರ್ ಬಿಐ ಬಡ್ಡಿದರ 25 ಅಂಶಗಳಷ್ಟು ಇಳಿಕೆ ಸ್ಥಿರವಾಗಿದ್ದು, ಗೃಹಸಾಲ, ವಾಹನ ಸಾಲ ಕಡಿಮೆ ಮಾಡುವಂತೆ ಬ್ಯಾಂಕುಗಳಿಗೆ ತಾಕೀತು ಮಾಡಿದ್ದಾರೆ.
ಈ ಹಿಂದೆ ಶೇ 8ರಷ್ಟಿದ್ದ ರೆಪೋ ದರದಲ್ಲಿ 25 ಮೂಲಾಂಶ (bps) ತಗ್ಗಿಸಿ ಶೇ 7.75ಕ್ಕೆ ಇಳಿಕೆ ಮಾಡಲಾಗಿತ್ತು. ಈಗ ಶೇ 7.25ಕ್ಕೆ ಇಳಿಸಲಾಗಿದೆ. ಈ ವರ್ಷ ಮೂರನೇ ಬಾರಿಗೆ ರೆಪೋ ದರದಲ್ಲಿ ಇಳಿಕೆ ಕಂಡು ಬಂದಿದೆ. [ಸಾಲ ಮಾಡಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ]
ನಗದು ಮೀಸಲು ಅನುಪಾತ (ಸಿಆರ್ ಆರ್) ಶೇ.4ರ ಪ್ರಮಾಣದಲ್ಲೇ ಇದೆ ಯಾವುದೇ ಬದಲಾವಣೆ ಮಾಡಿಲ್ಲ. ಅದರೆ, ಈಗ ಸಿಆರ್ ಅರ್ ದರ 50 ಮೂಲಾಂಶ ದರದಂತೆ ಇಳಿಕೆಯಾಗಲಿದೆ ಎಂಬ ನಿರೀಕ್ಷೆಯೂ ಇದೆ. [ಆರ್ ಬಿಐ ನೀತಿ ಪ್ರಕಟ: ಬ್ಯಾಂಕಿಂಗ್ ಷೇರುಗಳು ಕುಸಿತ]

ರಿವರ್ಸ್ ರೆಪೋ ದರ ಎಲ್ ಎಎಫ್ (ಏನಿದು?) ನಂತೆ ಶೇ 6.25ಕ್ಕೆ ಸರಿ ಹೊಂದಿಸಲಾಗಿದೆ. ಮಾರ್ಜಿನಲ್ ಸ್ಟ್ಯಾಂಡಿಂಗ್ ಫೆಸಿಲಿಟಿ(ಎಂಎಸ್ ಎಫ್) ಹಾಗೂ ಬ್ಯಾಂಕ್ ದರ ಶೇ 8.25 ನಷ್ಟಿದೆ. ಏಪ್ರಿಲ್ ನಲ್ಲಿ ಹೋಲ್ ಸೇಲ್ ದರ ಪಟ್ಟಿ ಆಧಾರದಲ್ಲಿ ಹಣದುಬ್ಬರ ಮೈನಸ್ 2.65%ನಷ್ಟಿದ್ದು, ಇನ್ನೂ ಮುಂದುವರೆಯಲಿದೆ.
Policy repo rate reduced under (LAF) by 25 basis points from 7.5 per cent to 7.25 per cent with immediate effect: RBI
— ANI (@ANI_news) June 2, 2015 ಬ್ಯಾಂಕುಗಳ ಗೃಹ ಹಾಗೂ ಕಾರು ಸಾಲ ಕೈಗುಟುಕುವಂತಾಗಲಿದೆ. ಆದರೆ, ಎಸ್ ಬಿಐ ಹಾಗೂ ಎಚ್ ಡಿಎಫ್ ಸಿ ಸೇರಿದಂತೆ ಪ್ರಮುಖ ಬ್ಯಾಂಕ್ ಗಳು ಸಾಲ ಬಡ್ಡಿದರ ಬಗ್ಗೆ ಯಾವುದೇ ಪ್ರತಿಕ್ರಿಯೆ ತಕ್ಷಣಕ್ಕೆ ನೀಡಿಲ್ಲ. [ಮನೆಸಾಲ, ವಾಹನ ಸಾಲ, ಆಸಾಲ ಈಸಾಲದ ಬಡ್ಡಿ ಇಳಿಕೆ]
ಆರ್ ಬಿಐ ರೆಪೋ ದರ ಬಡ್ಡಿದರ ಇಳಿಕೆ ಮಾಡಿದ ಕೂಡಲೇ ಬ್ಯಾಂಕ್ ಗಳು ವಿವಿಧ ಸಾಲಕ್ಕೆ ನೀಡಿದ ಬಡ್ಡಿದರ ಇಳಿಕೆ ಮಾಡಲೇಬೇಕೆಂಬ ನಿಯಮವೇನೂ ಇಲ್ಲ. ಆದರೆ, ಕ್ರೆಡಿಟ್ ಆಫ್ ಟೇಕ್ ಪ್ರಬಲವಾಗಿಲ್ಲದ ಕಾರಣ ಬ್ಯಾಂಕುಗಳು ಅನಿವಾರ್ಯವಾಗಿ ಬಡ್ಡಿ ದರ ಇಳಿಕೆ ಮಾಡಿ ಗ್ರಾಹಕರನ್ನು ಆಕರ್ಷಿಸಲು ತೊಡಗಿವೆ. [ಯಾವ ಯಾವ ಬ್ಯಾಂಕಿನಿಂದ ಇಳಿಕೆ]
ಸಾಲದ ಮೇಲಿನ ಬಡ್ಡಿದರ ಇಳಿಕೆಯಿಂದಾಗಿ ಬ್ಯಾಂಕಿನಿಂದ ಸಾಲ ಪಡೆಯುವವರಿಗೆ ಹಾಗೂ ಇಎಂಐ ಬಯಸುವವರಿಗೆ ಹಿತಕರ ಸುದ್ದಿ ಸಿಕ್ಕಿದೆ. ಅದರೆ, ಸಣ್ಣ ಮಟ್ಟದ ಹೂಡಿಕೆ ಹಾಗೂ ಪಿಂಚಣಿದಾರರಿಗೆ ಠೇವಣಿ ದರ ಹೆಚ್ಚಳದಿಂದ ಭಾರಿ ತೊಂದರೆಯಾಗುವ ಸಾಧ್ಯತೆಯಿದೆ.
ಸಿಆರ್ ಅರ್: ಬ್ಯಾಂಕುಗಳಲ್ಲಿರುವ ಠೇವಣಿಗೆ ಅನುಗುಣವಾಗಿ ಆರ್ ಬಿಐ ನಲ್ಲಿ ಇಡಬೇಕಾದ ಹಣದ ಮೊತ್ತ.
ರೆಪೋ ದರ: ಆರ್ ಬಿಐನಿಂದ ಬ್ಯಾಂಕುಗಳ ಹಣ ಪಡೆಯುವ ದರ. (ಒನ್ ಇಂಡಿಯಾ ಸುದ್ದಿ)
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications