ಪಾನ್ ಮಸಾಲ ಮೇಲಿನ ಜಿಎಸ್ಟಿ ತಗ್ಗಿಸಲು ಕರ್ನಾಟಕ ಬಿಜೆಪಿ ಒತ್ತಾಯ!
ನವದೆಹಲಿ, ಆಗಸ್ಟ್ 10: ಪಾನ್ ಮಸಾಲಾದ ಮೇಲಿನ ಜಿಎಸ್ಟಿಯನ್ನು ಈಗಿರುವ ಶೇ.18ರಿಂದ ಶೇ.5ಕ್ಕೆ ಇಳಿಸಬೇಕೆಂದು ಹಾಗೂ ಅಡಿಕೆಯ ಆಮದಿನ ಗರಿಷ್ಠ ಬೆಲೆಯನ್ನು ಕೆಜಿಗೆ 300 ರೂ.ಗಳಿಗೆ ಏರಿಸಬೇಕೆಂದು ಕರ್ನಾಟಕ ಬಿಜೆಪಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.
ಅಡಿಕೆಯನ್ನು ಪಾನ್ ಮಸಾಲಾಗೆ ಬಳಸಲಾಗುತ್ತದೆ. ಆದರೆ, ಇದರ ಮೇಲೆ ಶೇ.18ರ ತೆರಿಗೆ ಹೇರಲಾಗುತ್ತಿದೆ. ಪಾನ್ ಮಸಾಲಾವನ್ನು ಸಣ್ಣ ಉದ್ಯಮಗಳೇ ಉತ್ಪಾದಿಸುವುದರಿಂದ ಇದರ ಮೇಲಿನ ಜಿಎಸ್ಟಿಯನ್ನು ಶೇ.5ಕ್ಕೆ ಇಳಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಅಡಿಕೆ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಈ ಒತ್ತಾಯ ಮಾಡಲಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಕೆಜಿಗೆ 280 ರೂ.ಗಳವರೆಗೆ ಕುಸಿದಿದೆ. ಕಳೆದ ವರ್ಷ ಅಡಿಕೆ ಬೆಲೆ ಕೆಜಿಗೆ 380 ರೂ.ಗಳವರೆಗೆ ತಲುಪಿತ್ತು. ಕಡಿಮೆ ಬೆಲೆಯ ಹಾಗೂ ಕಳಪೆ ಗುಣಮಟ್ಟದ ಅಡಿಕೆಯನ್ನು ಶ್ರೀಲಂಕಾ ಹಾಗೂ ಇತರೆ ದೇಶಗಳಿಂದ ಆಮದು ಮಾಡಿಕೊಳ್ಳುತ್ತಿರುವುದೇ ಬೆಲೆ ಕುಸಿತಕ್ಕೆ ಕಾರಣವಾಗಿದೆ ಎಂದು ರಾಜ್ಯ ಬಿಜೆಪಿ ತಿಳಿಸಿದೆ.

ರಾಜ್ಯ ಬಿಜೆಪಿ ಅಡಿಕೆ ಬೆಳೆಗಾರರ ಮೋರ್ಚಾ ಅಧ್ಯಕ್ಷ ಹಾಗೂ ಶಾಸಕ ಆರಗ ಜ್ಞಾನೇಂದ್ರ ಅವರು ಈ ಬಗ್ಗೆ ಕೃಷಿ, ಹಣಕಾಸು ಹಾಗೂ ವಾಣಿಜ್ಯ ಸಚಿವರಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿದ್ದಾರೆ.
ಬೆಲೆ ಕುಸಿತದಿಂದಾಗಿ ಅಡಿಕೆ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಕಡಿಮೆ ಬೆಲೆಯ ಆಮದಿಗೆ ತಡೆ ಹಾಕಬೇಕಿದೆ ಮತ್ತು ಅಡಿಕೆಯ ಮೌಲ್ಯವರ್ಧನೆಗೆ ಒತ್ತು ನೀಡಬೇಕಿದೆ ಎಂದು ಪತ್ರಕರ್ತರೊಂದಿಗೆ ಮಾತನಾಡಿದ ಜ್ಞಾನೇಂದ್ರ
ತಿಳಿಸಿದ್ದಾರೆ.
ಇದರ ಜೊತೆಗೆ ಅಡಿಕೆಯ ಕನಿಷ್ಠ ಆಮದುಬೆಲೆಯನ್ನು ಕೆಜಿಗೆ 300 ರೂ.ಗಳಿಗೆ ಹೆಚ್ಚಿಸಬೇಕು. ಪ್ರಸಕ್ತ ಕನಿಷ್ಠ ಆಮದು ಬೆಲೆ 251 ರೂ.ಗಳಾಗಿದೆ. ಇದರಿಂದಾಗಿ ಕಡಿಮೆ ಗುಣ ಮಟ್ಟದ ಸರಕು ಬರುವುದನ್ನು ತಡೆದಂತಾಗುತ್ತದೆ ಎಂದು ಜ್ಞಾನೇಂದ್ರ ಹೇಳಿದ್ದಾರೆ. ಕಡಿಮೆ ಬೆಲೆ ನಮೂದಿಸಿ ಅಡಿಕೆ ಆಮದು ಮಾಡಿಕೊಳ್ಳುವ ಪ್ರಕರಣಗಳೂ ಸಹ ನಡೆಯುತ್ತಿವೆ.
ಹೀಗಾಗಿ ಈ ಬಗ್ಗೆ ತೀವ್ರ ನಿಗಾ ವಹಿಸಬೇಕು. ಆಮದಿಗೆ ಮುಂಚೆ ಅಡಿಕೆಯ ಗುಣಮಟ್ಟ ಸಹ ಪರಿಶೀಲಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ದಕ್ಷಿಣ ಏಷಿಯಾ ಮುಕ್ತ ವ್ಯಾಪಾರಿ ಪ್ರದೇಶ (ಸಾಫ್ಟಾ) ನಿಯಮಗಳ ನೆರವಿನಿಂದ ಶ್ರೀಲಂಕಾ ಕಡಿಮೆ ಬೆಲೆಯ ಅಡಿಕೆ ಪೂರೈಸುತ್ತಿದೆ. ಅಡಿಕೆ ಆಮದಿನ ಕನಿಷ್ಠ ಬೆಲೆ ಈ ಹಿಂದೆ ಕೆಜಿಗೆ 162 ರೂ. ಆಗಿತ್ತು. ಅದನ್ನು ಇತ್ತೀಚೆಗೆ ಕೇಂದ್ರ ಸರ್ಕಾರ 251 ರೂ.ಗಳಿಗೆ ಹೆಚ್ಚಿಸಿತ್ತು.
ದೇಶದಲ್ಲಿ ಪ್ರತಿವರ್ಷ 5 ಲಕ್ಷ ಟನ್ ಅಡಿಕೆ ಉತ್ಪಾದನೆಯಾಗುತ್ತದೆ. ಇದರಲ್ಲಿ ಶೇ.60ರಷ್ಟು ಕರ್ನಾಟಕ, ತಮಿಳುನಾಡು, ಗೋವಾ ಹಾಗೂ ಅಸ್ಸಾಂಗಳಿಂದ ಬರುತ್ತದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications