ತೀವ್ರ ನಷ್ಟದಲ್ಲಿ ರಿಲಯನ್ಸ್: ಕೆಲವೇ ದಿನಗಳಲ್ಲಿ ಸೇವೆ ಸ್ಥಗಿತ
ನವದೆಹಲಿ, ನ 5: ಸಾವಿರಾರು ಕೋಟಿ ರೂಪಾಯಿ ನಷ್ಟದಲ್ಲಿರುವ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಕಮ್ಯೂನಿಕೇಶನ್ 2G ಕರೆಸೇವೆಯನ್ನು, ಕರ್ನಾಟಕವೂ ಸೇರಿದಂತೆ ಇದೇ ಡಿಸೆಂಬರ್ ಒಂದರಿಂದ ಅನ್ವಯವಾಗುವಂತೆ ಸ್ಥಗಿತಗೊಳಿಸಲಿದೆ.
ಟ್ರಾಯ್(ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ) ಈ ಸಂಬಂಧ ಎಲ್ಲಾ ಮೊಬೈಲ್ ಸೇವಾ ಸಂಸ್ಥೆಗಳಿಗೆ ಸೂಚನೆ ನೀಡಿದ್ದು, ರಿಲಯನ್ಸ್ ಗ್ರಾಹಕರು ನಂಬರ್ ಪೋರ್ಟಿಂಗಿಗೆ ಅರ್ಜಿ ಹಾಕಿದರೆ ಮನವಿಯನ್ನು ಸ್ವೀಕರಿಸುವಂತೆ ಸೂಚಿಸಿದೆ.

ರಿಲಯನ್ಸ್ ತನ್ನ 2G ಸೇವೆಯನ್ನು ಮಾತ್ರ ಸ್ಥಗಿತಗೊಳಿಸಲಿದ್ದು, 4G ಸೇವೆ ಅಬಾಧಿತವಾಗಲಿದೆ ಎಂದು ರಿಲಯನ್ಸ್ ತನ್ನ ಪ್ರಕಟಣೆಯನ್ನು ತಿಳಿಸಿದೆ. 46 ಸಾವಿರ ಕೋಟಿ ರೂಪಾಯಿ ನಷ್ಟದಲ್ಲಿರುವ ರಿಲಯನ್ಸ್ ಕಮ್ಯೂನಿಕೇಶನ್, ಇತ್ತೀಚೆಗೆ ಏರ್ಸೆಲ್ ಸಂಸ್ಥೆಯನ್ನು ಖರೀದಿಸುವ ಪ್ರಯತ್ನದಲ್ಲಿ ಯಶಸ್ವಿಯಾಗಿರಲಿಲ್ಲ.
ಸದ್ಯ, ಆಂಧ್ರಪ್ರದೇಶ, ಹರ್ಯಾಣ, ಮಹಾರಾಷ್ಟ್ರ, ಉತ್ತರಪ್ರದೇಶ (ಪಶ್ಚಿಮ ಮತ್ತು ಪೂರ್ವ), ತಮಿಳುನಾಡು, ಕರ್ನಾಟಕ ಮತ್ತು ಕೇರಳದ ಎಂಟು ಟೆಲಿಕಾಂ ಸರ್ಕಲ್ ಗಳಲ್ಲಿ 2G ಮತ್ತು 4G ಎರಡೂ ಸೇವೆಯನ್ನು ನೀಡುತ್ತಿರುವುದಾಗಿ ಟ್ರಾಯ್ ಗೆ ಲಿಖಿತರೂಪದಲ್ಲಿ ತಿಳಿಸಿದ್ದು, ಈ ಎಲ್ಲಾ ಸರ್ಕಲ್ ಗಳಲ್ಲಿ 2G ಸೇವೆ, ಡಿಸೆಂಬರ್ ಒಂದರಿಂದ ಸ್ಥಗಿತಗೊಳ್ಳಲಿದೆ.
ದೆಹಲಿ, ರಾಜಸ್ಥಾನ, ಉತ್ತರಪ್ರದೇಶ (ಪಶ್ಚಿಮ), ತಮಿಳುನಾಡು, ಕೇರಳ, ಕರ್ನಾಟಕ, ಪಶ್ಚಿಮ ಬಂಗಾಳ, ಗುಜರಾತ್ ಮತ್ತು ಕೊಲ್ಕತ್ತಾ ನಗರಗಳಲ್ಲಿ ಸಿಡಿಎಂಎ ಟೆಕ್ನಾಲಜಿ ಮೂಲಕ 4G ಸೇವೆಯನ್ನು ಮೇಲ್ದದರ್ಜೇಗೇರಿಸಲು ಕ್ರಮ ತೆಗೆದುಕೊಳ್ಳುವುದಾಗಿ ರಿಲಯನ್ಸ್, ಟ್ರಾಯ್ ಗೆ ತಿಳಿಸಿದೆ.
ರಿಲಯನ್ಸ್ ಗ್ರಾಹಕರು ಡಿಸೆಂಬರ್ 31ರ ತನಕ ತಮ್ಮ ನಂಬರುಗಳನ್ನು ಪೊರ್ಟಬಿಲಿಟಿ ಮಾಡಿಕೊಳ್ಳಬಹುದಾಗಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications