ರಿಲಯನ್ಸ್ ಫೌಂಡೇಷನ್ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ: 5100 ವಿದ್ಯಾರ್ಥಿಗಳಿಗೆ ಅವಕಾಶ
ರಿಲಯನ್ಸ್ ಫೌಂಡೇಷನ್ನ ವಾರ್ಷಿಕ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳು ಮತ್ತೊಮ್ಮೆ ತೆರೆದಿವೆ. 2025-26ರ ಶೈಕ್ಷಣಿಕ ವರ್ಷಕ್ಕೆ ರಿಲಯನ್ಸ್ ಫೌಂಡೇಷನ್ 5100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸುತ್ತದೆ. ಪ್ರಥಮ ವರ್ಷದ ಪೂರ್ಣಾವಧಿ ಪದವಿ ಮತ್ತು ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳು ಮಾತ್ರ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಭಾರತದಲ್ಲಿ ಉನ್ನತ ಶಿಕ್ಷಣಕ್ಕಾಗಿ ಈ ಅತಿದೊಡ್ಡ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 4, 2025 ಆಗಿದೆ. 2022ನೇ ಇಸವಿಯಲ್ಲಿ ರಿಲಯನ್ಸ್ ಫೌಂಡೇಷನ್ ಅಧ್ಯಕ್ಷೆ ನೀತಾ ಅಂಬಾನಿ ಅವರು ಧೀರೂಭಾಯಿ ಅಂಬಾನಿ ಅವರ 90ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ 10 ವರ್ಷಗಳಲ್ಲಿ 50,000 ವಿದ್ಯಾರ್ಥಿವೇತನಗಳನ್ನು ಘೋಷಿಸಿದ್ದರು.

ರಿಲಯನ್ಸ್ ಫೌಂಡೇಷನ್ ಪದವಿ ಮಟ್ಟದಲ್ಲಿ 5,000 ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವೀಧರರಿಗೆ 100 ವಿದ್ಯಾರ್ಥಿವೇತನಗಳನ್ನು ಒದಗಿಸುತ್ತದೆ. ಪದವೀಧರರಿಗೆ 2 ಲಕ್ಷ ರೂ.ಗಳವರೆಗೆ ಅನುದಾನ ನೀಡಲಾಗುತ್ತದೆ. ವಿದ್ಯಾರ್ಥಿವೇತನಕ್ಕಾಗಿ ವಿದ್ಯಾರ್ಥಿಗಳ ಆಯ್ಕೆಯು ಅವರ ಶೈಕ್ಷಣಿಕ ಅರ್ಹತೆ ಮತ್ತು ಆರ್ಥಿಕ ಸ್ಥಿತಿಯನ್ನು ಆಧರಿಸಿರುತ್ತದೆ.
ಮತ್ತೊಂದೆಡೆ, ಸ್ನಾತಕೋತ್ತರ ವಿದ್ಯಾರ್ಥಿವೇತನಗಳು ಎಂಜಿನಿಯರಿಂಗ್, ತಂತ್ರಜ್ಞಾನ, ಇಂಧನ ಮತ್ತು ಜೀವ ವಿಜ್ಞಾನಗಳ ಆಯ್ದ ಕ್ಷೇತ್ರಗಳಲ್ಲಿ ಭಾರತದ ಅತ್ಯಂತ ಪ್ರತಿಭಾನ್ವಿತ 100 ವಿದ್ಯಾರ್ಥಿಗಳಿಗೆ ಹೋಗುತ್ತವೆ. ರಾಷ್ಟ್ರೀಯ ಅಭಿವೃದ್ಧಿ ಮತ್ತು ಜಾಗತಿಕ ಪ್ರಗತಿಗೆ ನಿರ್ಣಾಯಕ ಕ್ಷೇತ್ರಗಳಲ್ಲಿ ಮುಂದುವರಿದ ಅಧ್ಯಯನ ಮತ್ತು ಸಂಶೋಧನೆಗಾಗಿ ವಿದ್ಯಾರ್ಥಿಗಳು 6 ಲಕ್ಷ ರೂ.ಗಳವರೆಗೆ ಅನುದಾನವನ್ನು ಪಡೆಯುತ್ತಾರೆ. ಸಾಮಾಜಿಕವಾಗಿ, ಪರಿಸರ ದೃಷ್ಟಿಯಿಂದ ಮತ್ತು ಡಿಜಿಟಲ್ ವಿಚಾರದ ಆಲೋಚನೆ ಇರುವವರು ಹಾಗೂ ಭಾರತಕ್ಕಾಗಿ ದೊಡ್ಡದಾಗಿ ಯೋಚಿಸಬಲ್ಲ ಭವಿಷ್ಯದ ನಾಯಕರ ಗುಂಪನ್ನು ಬೆಳೆಸುವುದು ವಿದ್ಯಾರ್ಥಿವೇತನದ ಗುರಿಯಾಗಿದೆ.
ರಿಲಯನ್ಸ್ 29 ವರ್ಷಗಳಿಗೂ ಹೆಚ್ಚು ಕಾಲ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುತ್ತಿದೆ. ರಿಲಯನ್ಸ್ ಇಲ್ಲಿಯವರೆಗೆ ವಿವಿಧ ಮಾರ್ಗಗಳ ಮೂಲಕ 28,000 ಕ್ಕೂ ಹೆಚ್ಚು ವಿದ್ಯಾರ್ಥಿವೇತನಗಳನ್ನು ನೀಡಿದೆ. ಫೌಂಡೇಷನ್ ಪ್ರಕಾರ, ವಿದ್ಯಾರ್ಥಿವೇತನ ಪಡೆದ ಹೆಚ್ಚಿನ ವಿದ್ಯಾರ್ಥಿಗಳು ಇಂದು ವೃತ್ತಿಪರ ಜೀವನದಲ್ಲಿ ಉತ್ತಮ ಹೆಸರು ಗಳಿಸುತ್ತಿದ್ದಾರೆ ಮತ್ತು ಭಾರತದ ಪ್ರಗತಿಗೆ ಕೊಡುಗೆ ನೀಡುತ್ತಿದ್ದಾರೆ. ವಿದ್ಯಾರ್ಥಿವೇತನಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಮತ್ತು ಅರ್ಜಿ ಸಲ್ಲಿಸಲು scholarships.reliancefoundation.org ಗೆ ಭೇಟಿ ನೀಡಿ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications