ಸ್ಪೆಕ್ಟ್ರಮ್ ಬಳಕೆ: ಏರ್ಟೆಲ್ನೊಂದಿಗೆ ರಿಲಯನ್ಸ್ ಜಿಯೋ ಒಪ್ಪಂದ
ಮುಂಬೈ, ಏಪ್ರಿಲ್ 7: ಸ್ಪೆಕ್ಟ್ರಮ್ ಟ್ರೇಡಿಂಗ್ ಮೂಲಕ ಆಂಧ್ರಪ್ರದೇಶ, ದೆಹಲಿ ಮತ್ತು ಮುಂಬೈ ಸರ್ಕಲ್ಗಳಲ್ಲಿನ 800 ಮೆಗಾಹರ್ಟ್ಸ್ ಬ್ಯಾಂಡ್ನಲ್ಲಿ ಸ್ಪೆಕ್ಟ್ರಮ್ ಬಳಸುವ ಹಕ್ಕನ್ನು ಪಡೆದುಕೊಳ್ಳಲು ಭಾರ್ತಿ ಏರ್ಟೆಲ್ ಲಿಮಿಟೆಡ್ನೊಂದಿಗೆ ಒಪ್ಪಂದ ಮಾಡಿಕೊಂಡಿರುವುದಾಗಿ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್ (RJIL) ಪ್ರಕಟಿಸಿದೆ.
ಈ ಒಪ್ಪಂದವು ದೂರಸಂಪರ್ಕ ಇಲಾಖೆ ಪ್ರಕಟಿಸಿರುವ ಸ್ಪೆಕ್ಟ್ರಮ್ ಟ್ರೇಡಿಂಗ್ ಮಾರ್ಗಸೂಚಿಗಳಿಗೆ ಅನುಸಾರವಾಗಿದೆ ಹಾಗೂ ಇದು ಅಗತ್ಯ ನಿಯಂತ್ರಣ ಮತ್ತು ಶಾಸನಬದ್ಧ ಅನುಮೋದನೆಗಳಿಗೆ ಒಳಪಟ್ಟಿರುತ್ತದೆ.
ಈ ಸ್ಪೆಕ್ಟ್ರಮ್ ಬಳಸುವ ಹಕ್ಕಿನ ಒಟ್ಟು ಮೌಲ್ಯ ರೂ. 1,497 ಕೋಟಿಗಳಾಗಿದ್ದು, ಯಾವುದೇ ವಹಿವಾಟು ಸಂಬಂಧಿ ಹೊಂದಾಣಿಕೆಗಳಿಗೆ ಒಳಪಟ್ಟಂತೆ ರೂ. 459 ಕೋಟಿಗಳ ಸಂಬಂಧಿತ ಮುಂದೂಡಲ್ಪಟ್ಟ ಪಾವತಿ ಹೊಣೆಗಾರಿಕೆಯ (deferred payment liability) ಪ್ರಸ್ತುತ ಮೌಲ್ಯವನ್ನೂ ಒಳಗೊಂಡಿದೆ.

ಸ್ಪೆಕ್ಟ್ರಮ್ ಬಳಸುವ ಹಕ್ಕಿನ ಈ ಟ್ರೇಡಿಂಗ್ನೊಂದಿಗೆ, ಆರ್ಜೆಐಎಲ್ ಮುಂಬೈ ಸರ್ಕಲ್ನ 800 ಮೆಗಾಹರ್ಟ್ಸ್ ಬ್ಯಾಂಡ್ನಲ್ಲಿ 2X15 ಮೆಗಾಹರ್ಟ್ಸ್ ಸ್ಪೆಕ್ಟ್ರಮ್ ಹಾಗೂ ಆಂಧ್ರಪ್ರದೇಶ ಮತ್ತು ದೆಹಲಿ ಸರ್ಕಲ್ಗಳಲ್ಲಿನ 800 ಮೆಗಾಹರ್ಟ್ಸ್ ಬ್ಯಾಂಡ್ನಲ್ಲಿ 2X10 ಮೆಗಾಹರ್ಟ್ಸ್ ಸ್ಪೆಕ್ಟ್ರಮ್ ಅನ್ನು ಪಡೆದುಕೊಂಡಂತಾಗಿದೆ.
ಆ ಮೂಲಕ ಈ ವಲಯಗಳಲ್ಲಿ ಆರ್ಜೆಐಎಲ್ ತನ್ನ ಸ್ಪೆಕ್ಟ್ರಮ್ ಹೆಜ್ಜೆಗುರುತನ್ನು ಬಲಪಡಿಸಿಕೊಂಡಿದೆ. ವರ್ಧಿತ ಸ್ಪೆಕ್ಟ್ರಮ್ ಫುಟ್ಪ್ರಿಂಟ್, ಅದರಲ್ಲೂ ವಿಶೇಷವಾಗಿ ಪಕ್ಕಪಕ್ಕದಲ್ಲಿರುವ (contiguous) ಸ್ಪೆಕ್ಟ್ರಮ್, ಹಾಗೂ ಉತ್ತಮ ಮೂಲಸೌಕರ್ಯಗಳ ನಿಯೋಜನೆಯಿಂದಾಗಿ, ಆರ್ಜೆಐಎಲ್ ನೆಟ್ವರ್ಕ್ ಸಾಮರ್ಥ್ಯದಲ್ಲಿ ಮತ್ತಷ್ಟು ಹೆಚ್ಚಳವಾಗಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications