ಚೀನಿ ಆ್ಯಪ್ ಗಳನ್ನು ಕೊಲ್ಲುವ ಈ ಆ್ಯಪ್ ಹೆಚ್ಚು ಡೌನ್ಲೋಡ್ ಆಗ್ತಿದೆ
ಸದ್ಯ ಭಾರತ-ಚೀನಾ ಗಡಿಯಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಕೊರೊನಾವೈರಸ್ ಹರಡುವುದಕ್ಕೆ ಚೀನಾ ಮುಖ್ಯ ಕಾರಣ ಎಂದು ಜನರು ಕಿಡಿ ಕಾರುತ್ತಿದ್ದಾರೆ. ಚೀನಾ ವಸ್ತುಗಳನ್ನು ಬಳಸಬೇಡಿ ಎಂದು ಸೋಶಿಯಲ್ ಮೀಡಿಯಾಗಳಲ್ಲಿ ದೊಡ್ಡ ಪ್ರಚಾರವೇ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ನಿಮ್ಮ ಮೊಬೈಲ್ನಲ್ಲಿರುವ ಚೀನಾ ಆ್ಯಪ್ಗಳನ್ನೆಲ್ಲಾ ಡಿಲೀಟ್ ಮಾಡಿ ಹಾಕುತ್ತೆ ಈ ಒಂದು ಆ್ಯಪ್.
ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಭ್ಯವಿರುವ ಈ ಅಪ್ಲಿಕೇಶನ್ ಹೆಸರು "Remove China Apps". ಮೇ 17 ರಂದು ಬಿಡುಗಡೆಯಾಗಿರುವ ಈ ಆ್ಯಪ್ ಸದ್ಯ ಗೂಗಲ್ ಪ್ಲೇ ಸ್ಟೋರ್ ನ ಟಾಪ್ ಫ್ರೀ ಆ್ಯಪ್ಗಳ ಪಟ್ಟಿಗೆ ಸೇರಿದೆ. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಈ ಆ್ಯಪ್ 1 ಮಿಲಿಯನ್ ಅಂದರೆ 10 ಲಕ್ಷ ಬಳಕೆದಾರರನ್ನು ತನ್ನತ್ತ ಸೆಳೆಯಲು ಯಶಸ್ವಿಯಾಗಿದೆ.

Remove China Apps ಪ್ರಸ್ತುತ ಆ್ಯಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ. 3.5 MB ಗಾತ್ರದ ಈ ಅಪ್ಲಿಕೇಶನ್ ಇಂಟರ್ಫೆಸ್ ತುಂಬಾ ಸುಲಭವಾಗಿದೆ. ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಿದ ನಂತರ ಬಳಕೆದಾರರು ಒಮ್ಮೆ ಸ್ಕ್ಯಾನ್ ಬಟನ್ ಅನ್ನು ಕ್ಲಿಕ್ಕಿಸಬೇಕು. ನಂತರ ಈ ಆಪ್ ನಿಮ್ಮ ಮೊಬೈಲ್ ಅನ್ನು ಸ್ಕ್ಯಾನ್ ಮಾಡಿ ನಿಮ್ಮ ಮೊಬೈಲ್ ನಲ್ಲಿ ಯಾವ ಯಾವ ಚೈನೀಸ್ ಆ್ಯಪ್ಗಳಿವೆ ಎಂಬುದನ್ನು ನಿಮಗೆ ತಿಳಿಸಲಿದೆ. ಒಂದು ವೇಳೆ ಆ ಎಲ್ಲ ಆ್ಯಪ್ಗಳನ್ನು ಡಿಲೀಟ್ ಮಾಡಲು ನೀವು ಅನುಮತಿ ನೀಡಿದರೆ, ಅದು ನಿಮ್ಮ ಮೊಬೈಲ್ ನಿಂದ ಎಲ್ಲಾ ಚೈನೀಸ್ ಆಪ್ ಗಳನ್ನು ತೆಗೆದುಹಾಕಲಿದೆ.
Remove China Apps ಪ್ರಸ್ತುತ ಗೂಗಲ್ ಪ್ಲೇ ಸ್ಟೋರ್ ನಲ್ಲಿ 4.8 ಬಳಕೆದಾರರ ರೇಟಿಂಗ್ ಪಡೆದಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications