RBI ಮಹತ್ವದ ನಿರ್ಧಾರ: ಕರೆನ್ಸಿ ನೋಟಿನಲ್ಲಿ ಗಾಂಧಿ ಜೊತೆ ಮತ್ತಿಬ್ಬರ ಚಿತ್ರ?
ನವದೆಹಲಿ/ಮುಂಬೈ, ಜೂನ್ 5: ಭಾರತೀಯ ರಿಸರ್ವ್ ಬ್ಯಾಂಕ್ ಕರೆನ್ಸಿ ನೋಟಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯ ಚಿತ್ರದ ಜೊತೆಗೆ, ಮತ್ತಿಬ್ಬರು ದೇಶದ ಗಣ್ಯರ ಚಿತ್ರವನ್ನೂ ಹಾಕಲು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.
ಕರೆನ್ಸಿ ನೋಟುಗಳಲ್ಲಿ ಬಹು ಅಂಕಿಗಳ ವಾಟರ್ ಮಾರ್ಕ್ ಬಳಸುವ ಉದ್ದೇಶದಿಂದ ಗಾಂಧೀಜಿ ಜೊತೆಗೆ ರವೀಂದ್ರನಾಥ ಟ್ಯಾಗೋರ್ ಮತ್ತು ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ಚಿತ್ರವೂ ಮುಂದಿನ ದಿನಗಳಲ್ಲಿ ಕರೆನ್ಸಿ ನೋಟಿನಲ್ಲಿ ಬರುವ ಸಾಧ್ಯತೆಯಿದೆ.
ಕೇಂದ್ರ ಹಣಕಾಸು ಸಚಿವಾಲಯ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (RBI ) ಕೆಲವು ಮುಖಬೆಲೆಯ ಹೊಸ ಸರಣಿಯ ಬ್ಯಾಂಕ್ ನೋಟುಗಳಲ್ಲಿ ಟ್ಯಾಗೋರ್ ಮತ್ತು ಅಬ್ದುಲ್ ಕಲಾಂ ಅವರ ವಾಟರ್ ಮಾರ್ಕ್ ಚಿತ್ರವನ್ನು ಬಳಸಲು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.

ಕೇಂದ್ರ ವಿತ್ತ ಖಾತೆಯ ಅಧೀನದಲ್ಲಿರುವ ಸೆಕ್ಯೂರಿಟಿ ಪ್ರಿಂಟಿಂಗ್ ಆಂಡ್ ಮಿಂಟಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ, ಮೂವರು ಮಹನೀಯರ ಚಿತ್ರವಿರುವ ಎರಡು ಸೆಟ್ ಕರೆನ್ಸಿ ನೋಟನ್ನು ದೆಹಲಿಯ ಐಐಟಿ ಪ್ರಾಧ್ಯಾಪಕ ದಿಲೀಪ್ ಶಹಾನಿ ಅವರಿಗೆ ಪರಿಶೀಲನೆಗಾಗಿ ಕಳುಹಿಸಿಕೊಟ್ಟಿದೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿ ಮಾಡಿದೆ.
ಎರಡು ವಿಭಿನ್ನ ಸೆಟ್ ಕರೆನ್ಸಿ ನೋಟುಗಳ ಪೈಕಿ ಒಂದನ್ನು ಅಂತಿಮಗೊಳಿಸಿ ಕೇಂದ್ರ ವಿತ್ತ ಸಚಿವಾಲಯಕ್ಕೆ ಕಳುಹಿಸಿಕೊಡುವಂತೆ ಐಐಟಿ ಪ್ರಾಧ್ಯಾಪಕ ಶಹಾನಿ ಅವರಿಗೆ ಸೂಚಿಸಲಾಗಿದೆ. ಉನ್ನತ ಮಟ್ಟದ ಸಭೆಯ ನಂತರ ಈ ಬಗ್ಗೆ ಅಂತಿಮ ನಿರ್ಧಾರವನ್ನು ಕ್ಯಾಬಿನೆಟ್ನಲ್ಲಿ ತೆಗೆದುಕೊಳ್ಳಲಾಗುವುದು.

ರಿಸರ್ವ್ ಬ್ಯಾಂಕಿನ ಆಂತರಿಕ ಸಮಿತಿಯು ಎರಡು ವರ್ಷದ ಕೆಳಗೆಯೇ ಗಾಂಧಿ ಜೊತೆ ಟ್ಯಾಗೋರ್ ಮತ್ತು ಕಲಾಂ ಅವರ ಚಿತ್ರವನ್ನು ಸೇರಿಸುವಂತೆ ಪ್ರಸ್ತಾವಿಸಿತ್ತು. ಈ ಹಿನ್ನಲೆಯಲ್ಲಿ ವಿನ್ಯಾಸವನ್ನು ಸಿದ್ದ ಪಡಿಸುವಂತೆ ಮೈಸೂರು ಮತ್ತು ಹೊಶಂಗಾಬಾದ್ ನಲ್ಲಿರುವ ಕರೆನ್ಸಿ ನೋಟ್ ಮುದ್ರಣಾಲಯಕ್ಕೆ ಸೂಚನೆ ನೀಡಲಾಗಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications