ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಟೈಮಲ್ಲಿ ವಿಜಯ್ ಮಲ್ಯಗೂ ಸಿಕ್ಕಿದೆ ಗುಡ್ ಟೈಮ್

|
Google Oneindia Kannada News

ಲಂಡನ್, ಏಪ್ರಿಲ್ 10: ಉದ್ದೇಶಪೂರ್ವಕ ಸುಸ್ತಿದಾರ, ದೇಶಭ್ರಷ್ಟ ಆರ್ಥಿಕ ಅಪರಾಧಿ ಎನಿಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯಗೆ ಕೊರೊನಾವೈರಸ್ ಭೀತಿಯ ನಡುವೆ ಒಳ್ಳೆ ಸುದ್ದಿ ಸಿಕ್ಕಿದೆ. ಇಂದು ಲಂಡನ್ ಹೈಕೋರ್ಟ್ ಮಲ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ದಿವಾಳಿತನ ಪ್ರಕರಣ ಕುರಿತಂತೆ ಆದೇಶವನ್ನು ಮುಂದೂಡಲಾಗಿದೆ.

ಸಾಲ ಮರುಪಾವತಿಗೂ, ಹಸ್ತಾಂತರ ಪ್ರಕರಣಕ್ಕೂ ಸಂಬಂಧವಿಲ್ಲ : ಮಲ್ಯಸಾಲ ಮರುಪಾವತಿಗೂ, ಹಸ್ತಾಂತರ ಪ್ರಕರಣಕ್ಕೂ ಸಂಬಂಧವಿಲ್ಲ : ಮಲ್ಯ

ಎಸ್ ಬಿಐ ನೇತೃತ್ವದ ಭಾರತೀಯ ಬ್ಯಾಂಕುಗಳ ಒಕ್ಕೂಟದ ಮಾಡಿಕೊಂಡಿರುವ ಮನವಿಯನ್ನು ಪುರಸ್ಕರಿಸಿ ವಿಚಾರಣೆ ನಡೆಸಿದ ಲಂಡನ್ ಹೈಕೋರ್ಟ್, ಮಲ್ಯ ವಿರುದ್ಧದ ದಿವಾಳಿತನದ ಆದೇಶವನ್ನು ಮುಂದೂಡಿದೆ.

ಹೈಕೋರ್ಟ್ ನ ಜಡ್ಜ್ ಮೈಕೆಲ್ ಬ್ರಿಗ್ಸ್ ಅವರು ತಮ್ಮ ಆದೇಶದಲ್ಲಿ ಮಲ್ಯಗೆ ಸಾಲ ಮರುಪಾವತಿಗೆ ಇನ್ನಷ್ಟು ಕಾಲಾವಕಾಶ ನೀಡಬೇಕು ಎಂದು ತಿಳಿಸಿದ್ದಾರೆ. ಭಾರತದ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅರ್ಜಿ ಮತ್ತು ಕರ್ನಾಟಕ ಹೈಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿರುವ ಅರ್ಜಿಗಳ ಇತ್ಯರ್ಥವಾಗುವ ತನಕ ಮಲ್ಯಗೆ ಕಾಲಾವಕಾಶ ಸಿಕ್ಕಿದೆ.

ಅರಣ್ಯವೆಲ್ಲ ಹೊತ್ತಿ ಉರಿಯುತ್ತಿದೆ, ಆ ದೇಶದ ಪ್ರಧಾನಿ ಭಾರತಕ್ಕೆ ಬರಲ್ಲಅರಣ್ಯವೆಲ್ಲ ಹೊತ್ತಿ ಉರಿಯುತ್ತಿದೆ, ಆ ದೇಶದ ಪ್ರಧಾನಿ ಭಾರತಕ್ಕೆ ಬರಲ್ಲ

ವಿಜಯ್ ಮಲ್ಯ ಅವರಿಂದ 1, 145 ಬಿಲಿಯನ್ ಗ್ರೇಟ್ ಬ್ರಿಟನ್ ಪೌಂಡ್(1 GBP = 94.7784 INR) ಸಾಲದ ಮೊತ್ತ ಹಿಂಪಡೆಯಲು ಎಸ್ಬಿಐ ನೇತೃತ್ವದ ಭಾರತೀಯ ಬ್ಯಾಂಕುಗಳ ಒಕ್ಕೂಟ ಯತ್ನಿಸುತ್ತಿದೆ. ಸದ್ಯ ಜಾಮೀನಿನ ಮೇಲೆ ಹೊರಗಿರುವ ಮಲ್ಯರನ್ನು ಭಾರತಕ್ಕೆ ಕರೆ ತಂದು ವಿಚಾರಣೆ ನಡೆಸಲು ಅನುಮತಿ ಕೋರಿ ಜಾರಿ ನಿರ್ದೇಶನಾಲಯ, ಸಿಬಿಐ ಮನವಿ ಸಲ್ಲಿಸಿವೆ. ಸುಮಾರು 9,000 ಕೋಟಿ ಮನಿಲಾಂಡ್ರಿಂಗ್ ಪ್ರಕರಣದಲ್ಲಿ ಮಲ್ಯ ಪ್ರಮುಖ ಆರೋಪಿಯಾಗಿದ್ದಾರೆ.

ಮಲ್ಯ ಪರ ವಕೀಲ ಫಿಲೀಫ್ ಮಾರ್ಷಲ್ ಪ್ರತಿಕ್ರಿಯೆ

ಮಲ್ಯ ಪರ ವಕೀಲ ಫಿಲೀಫ್ ಮಾರ್ಷಲ್ ಪ್ರತಿಕ್ರಿಯೆ

ಆದರೆ, ಮಲ್ಯ ಪರ ವಕೀಲ ಫಿಲೀಫ್ ಮಾರ್ಷಲ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ನನ್ನ ಕಕ್ಷಿದಾರರನ್ನು ಬೇಕಂತಲೇ ದಿವಾಳಿ ಎಂದು ಘೋಷಿಸಿ, ಆಸ್ತಿಯನ್ನು ವಶಪಡಿಸಿಕೊಳ್ಳಲು ಯತ್ನಿಸಲಾಗುತ್ತಿದೆ. ಭಾರತ ಹಾಗೂ ಯುಕೆಯಲ್ಲಿ ಸರಿಯಾಗಿ ವಿಚಾರಣೆ ನಡೆಸಬೇಕಿದೆ. ಬ್ಯಾಂಕ್ ಸಾಲ ಮರುಪಾವತಿ ಪ್ರಕ್ರಿಯೆ ಆರಂಭಿಸಲಾಗಿದ್ದು, ಆದರೆ, ಒಂದೇ ಸಾರಿ ಎಲ್ಲವನ್ನು ತೀರಿಸುವ ನಮ್ಮ ಆಫರ್ ಗೆ ಬ್ಯಾಂಕುಗಳು ಒಪ್ಪಿಲ್ಲ. ಜೊತೆಗೆ ಜಾರಿ ನಿರ್ದೇಶನಾಲಯದ ಪ್ರವೇಶದಿಂದ ಈಗ ಸಾಲ ಮರು ಪಾವತಿ ಕಷ್ಟಸಾಧ್ಯವಾಗಿದೆ ಎಂದಿದ್ದಾರೆ.

ಮಲ್ಯ ವಿರುದ್ಧ ಯಾವ ಯಾವ ಬ್ಯಾಂಕ್ ನಿಂದ ಅರ್ಜಿ

ಮಲ್ಯ ವಿರುದ್ಧ ಯಾವ ಯಾವ ಬ್ಯಾಂಕ್ ನಿಂದ ಅರ್ಜಿ

ವಿಜಯ್ ಮಲ್ಯ ಅವರನ್ನು ದಿವಾಳಿ ಎಂದು ಘೋಷಣೆ ಮಾಡುವಂತೆ ಬ್ಯಾಂಕ್ ಆಫ್ ಬರೋಡ, ಕಾರ್ಪೋರೇಶನ್ ಬ್ಯಾಂಕ್, ಫೆಡರಲ್ ಬ್ಯಾಂಕ್, ಐಡಿಬಿಐ ಬ್ಯಾಂಕ್, ಇಂಡಿಯನ್ ಓವರ್ ಸೀಸ್ ಬ್ಯಾಂಕ್, ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್, ಪಂಜಾಬ್ ನ್ಯಾಶನಲ್ ಬ್ಯಾಂಕ್, ಯುಕೋ ಬ್ಯಾಂಕ್, ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ ಬ್ರಟನ್ ಹೈಕೋರ್ಟ್ ಗೆ ಮನವಿ ಮಾಡಿವೆ. ವಿಜಯ್ ಮಲ್ಯ ಈ ಹಿಂದೆ ತಮ್ಮ ಮಾಲೀಕತ್ವದ ಕಿಂಗ್ ಫಿಶರ್ ಸಂಸ್ಥೆಯ ಸಾಲವನ್ನು ಬ್ಯಾಂಕ್ ಗಳಿಗೆ ಮರು ಪಾವತಿ ಮಾಡಲಾಗದೆ, ಭಾರತೀಯ ಬ್ಯಾಂಕ್ ಗಳಿಗೆ ವಂಚಿಸಿದ್ದಾರೆ. ಅವರ ವಿರುದ್ದ ವಂಚನೆ ಮತ್ತು ಅಕ್ರಮ ಹಣ ಹಣ ವರ್ಗಾವಣೆ ಆರೋಪವಿದೆ.

ಕಿಂಗ್ ಫಿಷರ್ To ಲಂಡನ್: ಮಲ್ಯ ಪ್ರಕರಣ ನಡೆದು ಬಂದ ಹಾದಿಕಿಂಗ್ ಫಿಷರ್ To ಲಂಡನ್: ಮಲ್ಯ ಪ್ರಕರಣ ನಡೆದು ಬಂದ ಹಾದಿ

2016ರಿಂದ ಮಲ್ಯ ಭಾರತದಲ್ಲಿಲ್ಲ

2016ರಿಂದ ಮಲ್ಯ ಭಾರತದಲ್ಲಿಲ್ಲ

13,700 ಕೋಟಿ ರೂಪಾಯಿ ಸಾಲ ಪಡೆದು ಮರಳಿಸದೆಯೇ 2016ರಿಂದ ಲಂಡನ್‌ಗೆ ತೆರಳಿ ಆಶ್ರಯ ಪಡೆದಿರುವ ವಿಜಯ್ ಮಲ್ಯ ಅವರನ್ನು ಗಡಿಪಾರು ಮಾಡುವಂತೆ ಲಂಡನ್‌ನ ವೆಸ್ಟ್ ಮಿನಿಸ್ಟರ್ ಕೋರ್ಟ್ ಆದೇಶಿಸಿತ್ತು. ಈ ಆದೇಶಕ್ಕೆ ಬ್ರಿಟನ್ ಕಾರ್ಯದರ್ಶಿ ಸಹಿ ಹಾಕಿದ್ದರು. ಇದನ್ನು ವಿಜಯ್ ಮಲ್ಯ ಮೇಲಿನ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಈ ನಡುವೆ ಮಲ್ಯರನ್ನು ದಿವಾಳಿ ಎಂದು ಘೋಷಿಸಿ, ಸಾಲದ ಮೊತ್ತಕ್ಕೆ ಮಲ್ಯ ಅವರ ವಿದೇಶಿ ಆಸ್ತಿಗಳನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಜಾರಿ ನಿರ್ದೇಶನಾಲಯ ಮುಂದಾಗಿದೆ.

ದಿವಾಳಿತನ ಕಾಯ್ದೆಗೆ ಮೋದಿ ಸರ್ಕಾರ ತಿದ್ದುಪಡಿ

ದಿವಾಳಿತನ ಕಾಯ್ದೆಗೆ ಮೋದಿ ಸರ್ಕಾರ ತಿದ್ದುಪಡಿ

1934 ರ ವಿಮಾನಯಾನ ಕಾನೂನನ್ನು ಉಲ್ಲಂಘನೆ ಮಾಡುವ ವಿಮಾನಯಾನ ಸಂಸ್ಥೆಗಳಿಗೆ ದೊಡ್ಡ ಮೊತ್ತದ ದಂಡವನ್ನು ವಿಧಿಸಲು ನಿರ್ಧಾರ ಕೈಗೊಳ್ಳಲಾಯಿತು. ದಂಡ ವಿಧಿಸಲು ಅನುವು ಮಾಡಿಕೊಡುವ ಕೆಲವು ಬದಲಾವಣೆಗಳ ತಿದ್ದುಪಡಿ ಮಸೂದೆ ಮಂಡಿಸಲು ಮೋದಿಯವರ ಸಂಪುಟ ಸಭೆ ಸಮ್ಮತಿ ನೀಡಿದೆ. ವಿಮಾನಯಾನ ಕಾನೂನು ಉಲ್ಲಂಘನೆ ಮಾಡಿದಾಗ ವಿಧಿಸಲಾಗುತ್ತಿದ್ದ ದಂಡದ ಮೊತ್ತ 10 ಲಕ್ಷ ರೂಪಾಯಿಗಳು. ಈಗ ಅದನ್ನು 1 ಕೋಟಿ ರೂಪಾಯಿಗೆ ಏರಿಸಲು ತಿದ್ದುಪಡಿ ಮಸೂದೆ ಅವಕಾಶ ನೀಡುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದಲ್ಲದೆ ದೇಶಭ್ರಷ್ಟ ಆರ್ಥಿಕ ಅಪರಾಧಿ, ದಿವಾಳಿ ಎಂದು ಘೋಷಿಸುವ ಕಾಯ್ದೆಯನ್ನು ತಿದ್ದುಪಡಿ ಮಾಡಲಾಗಿದೆ.

ಮಲ್ಯಗೆ ವರವಾಗಿರುವ ಎಂಎಲ್ ಎ ಟಿ ಒಪ್ಪಂದ

ಮಲ್ಯಗೆ ವರವಾಗಿರುವ ಎಂಎಲ್ ಎ ಟಿ ಒಪ್ಪಂದ

A mutual legal assistance treaty (MLAT) ಎಂದು ಕರೆಯುವ ಒಪ್ಪಂದಕ್ಕೆ ಭಾರತ ಮತ್ತು ಇಂಗ್ಲೆಂಡ್ 1995ರಲ್ಲಿ ಸಹಿ ಮಾಡಿವೆ. ಈ ಪರಸ್ಪರ ಕಾನೂನು ಸಹಕಾರ ಒಪ್ಪಂದದ ಪ್ರಕಾರ ಎರಡು ದೇಶಕ್ಕೆ ಬೇಕಾದ ವ್ಯಕ್ತಿಯನ್ನು ಪರಸ್ಪರ ಹಸ್ತಾಂತರ ಮಾಡಿಕೊಳ್ಳಲು ಅವಕಾಶ ಇದೆ. ಇಲ್ಲಿ ತನಕ ಈ ಒಪ್ಪಂದ ಬಳಸಿಕೊಂಡು ಒಬ್ಬರನ್ನು ಮಾತ್ರ ಇಂಗ್ಲೆಂಡಿನಿಂದ ಭಾರತಕ್ಕೆ ಕರೆಸಿಕೊಳ್ಳಲಾಗಿದೆ. ವಿನುಭಾಯಿ ಪಟೇಲ್ ಅವರು ಗಡಿಪಾರು ಮಾಡಿದರೂ ನನ್ನ ಅಭ್ಯಂತರವಿಲ್ಲ ಎಂದಿದ್ದರಿಂದ ಕೆಲಸ ಸುಲಭವಾಗಿತ್ತು. ಉದ್ಯಮಿ ವಿಜಯ್ ಮಲ್ಯರನ್ನು ಭಾರತಕ್ಕೆ ಕರೆ ತರಲು ಇಲ್ಲಿನ ತನಿಖಾ ಸಂಸ್ಥೆಗಳಿಗೆ ಕನಿಷ್ಟ 10 ರಿಂದ 15 ವರ್ಷಗಳಾದರೂ ಬೇಕು ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

English summary
In a relief to liquor baron Vijay Mallya, the High Court in London has deferred hearings on a plea by the SBI-led consortium of Indian banks, seeking the indebted tycoon be declared bankrupt to enable them to recover a loan of around GBP 1.145 billion from him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X