ಗಗನಕ್ಕೇರಿದ ಟೊಮೆಟೋ ಬೆಲೆ: ತಲೆ ಮೇಲೆ ಕೈ ಹೊತ್ತ ಜನ
ನವದೆಹಲಿ, ಜೂ. 2: ದೆಹಲಿ ಪ್ರದೇಶ ಹೊರತುಪಡಿಸಿ ಪ್ರಮುಖ ಮೆಟ್ರೋ ನಗರಗಳಲ್ಲಿ ಟೊಮೆಟೋ ಚಿಲ್ಲರೆ ಬೆಲೆ ಪ್ರತಿ ಕೆಜಿಗೆ 77 ರುಪಾಯಿಗಳ ಗರಿಷ್ಠ ಮಟ್ಟವನ್ನು ತಲುಪಿದೆ. ಸರ್ಕಾರದ ಅಂಕಿ ಅಂಶಗಳ ಪ್ರಕಾರ ಸರಕುಗಳ ಮಿತವಾದ ಪೂರೈಕೆಯಿಂದಾಗಿ ಬೆಲೆಗಳು ಒಂದು ತಿಂಗಳ ಹಿಂದಿನ ಅವಧಿಗಿಂತ ಹೆಚ್ಚಾಗಿದ್ದು, ಸಾಮಾನ್ಯ ಜನರು ಖರೀದಿ ಮಾಡಲು ಹಿಂದೇಟು ಹಾಕಿ ತಲೆ ಮೇಲೆ ಕೈಹೊತ್ತಿದ್ದಾರೆ.
ಆದಾಗ್ಯೂ ಎಲ್ಲಾ ಪ್ರಮುಖ ಟೊಮೆಟೋ ಬೆಳೆಯುವ ಪ್ರದೇಶಗಳಲ್ಲಿ ಮಾರುಕಟ್ಟೆಗೆ ಪ್ರವೇಶಿಸಿದ ನಂತರ ಜುಲೈನಲ್ಲಿ ಟೊಮೆಟೋ ಬೆಲೆಗಳು ತೀವ್ರ ಕುಸಿತವನ್ನು ಕಾಣುವ ನಿರೀಕ್ಷೆಯಿದೆ. ಗ್ರಾಹಕ ವ್ಯವಹಾರಗಳ ದತ್ತಾಂಶ ಇಲಾಖೆಯ ವರದಿಗಳ ಪ್ರಕಾರ ಪ್ರಮುಖ ನಗರಗಳಲ್ಲಿ ಟೊಮೆಟೊ ಸರಾಸರಿ ಬೆಲೆಗಳು ಕೆಜಿಗೆ 55 ರಿಂದ 60 ರೂ. ಆಗಿದೆ. ಕೃಷಿ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಹಿಂದಿನ ವರ್ಷಕ್ಕೆ ಹೋಲಿಸಿದರೆ 2021-22 ಬೆಳೆ ವರ್ಷದಲ್ಲಿ (ಜುಲೈ-ಜೂನ್) 20.3 ಮಿಲಿಯನ್ ಟನ್ಗಳಿಗೆ (ಎಂಟಿ) ಟೊಮೆಟೋ ಉತ್ಪಾದನೆಯು 4% ಕ್ಕಿಂತ ಹೆಚ್ಚು ಕುಸಿಯುವ ನಿರೀಕ್ಷೆಯಿದೆ ಎಂದು ಅಂದಾಜಿಸಲಾಗಿದೆ.
ವಿವಿಧ ನಗರಗಳಲ್ಲಿ ಟೊಮೆಟೋ ದರ ಹೀಗಿದೆ:
ಕೋಲ್ಕತ್ತಾ: ಗ್ರಾಹಕ ವ್ಯವಹಾರಗಳ ಸಚಿವಾಲಯವು ನೀಡಿದ ಅಂಕಿ ಅಂಶಗಳ ಪ್ರಕಾರ, ಏಪ್ರಿಲ್ 30 ರಂದು ಪ್ರತಿ ಕೆಜಿಗೆ 25 ರೂಪಾಯಿ ಇದ್ದ ಟೊಮೆಟೋ ಚಿಲ್ಲರೆ ಬೆಲೆ ಜೂನ್ 1ರಂದು ಕೆಜಿಗೆ 77 ರೂ. ಆಗಿದೆ.

ಮುಂಬೈ: ಮುಂಬೈನಲ್ಲಿ ಚಿಲ್ಲರೆ ಟೊಮೆಟೋ ದರವು ಮೇ 1 ರಂದು ಕೆಜಿಗೆ 36 ರೂಪಾಯಿಯಿಂದ ಜೂನ್ 1 ರಂದು 74 ರೂಪಾಯಿಗಳಿಗೆ ಏರಿದೆ.
ಚೆನ್ನೈ: ಚಿಲ್ಲರೆ ಟೊಮೆಟೋ ದರ ಚೆನ್ನೈನಲ್ಲಿ ಪ್ರತಿ ಕೆಜಿಗೆ 47 ರಿಂದ 62 ರೂ.ಗೆ ಏರಿಕೆಯಾಗಿದೆ ಎಂದು ಅಂಕಿ ಅಂಶಗಳು ಹೇಳಿವೆ.
ದೆಹಲಿ: ಆದಾಗ್ಯೂ ದೆಹಲಿಯಲ್ಲಿ ಚಿಲ್ಲರೆ ಟೊಮೆಟೋ ದರವು ಪ್ರತಿ ಕೆಜಿಗೆ ರೂ. 39 ರಷ್ಟಿದೆ. ಈ ಅವಧಿಯಲ್ಲಿ ಪ್ರತಿ ಕೆಜಿಗೆ ರೂ 30 ರಷ್ಟಿತ್ತು.
ಇತರೆ ನಗರಗಳು: ಪೋರ್ಟ್ ಬ್ಲೇರ್, ಶಿಲ್ಲಾಂಗ್, ಕೊಟ್ಟಾಯಂ, ಪತ್ತನಂತಿಟ್ಟಾ - ನಾಲ್ಕು ನಗರಗಳಲ್ಲಿ ಬುಧವಾರ ಟೊಮೆಟೊ ಚಿಲ್ಲರೆ ಬೆಲೆ ಕೆಜಿಗೆ 100 ರೂ. ಏರಿಕೆ ಕಂಡು ಬಂದಿದೆ.

ಹಠಾತ್ ಬೆಲೆ ಏರಿಕೆ ಏಕೆ?: ಪ್ರಮುಖ ಉತ್ಪಾದನಾ ರಾಜ್ಯಗಳಾದ ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಚಿಲ್ಲರೆ ಬೆಲೆಗಳು ಗಮನಾರ್ಹವಾಗಿ ಏರಿವೆ. ಮಾಹಿತಿ ಪ್ರಕಾರ ವಿವಿಧ ನಗರಗಳಲ್ಲಿ ಕೆಜಿಗೆ 50 ರಿಂದ 100 ರೂ. ಆಂಧ್ರಪ್ರದೇಶ ಮತ್ತು ಕರ್ನಾಟಕದಂತಹ ಪ್ರಮುಖ ಬೆಳೆಯುತ್ತಿರುವ ರಾಜ್ಯಗಳಿಂದ ಪೂರೈಕೆ ಮಿತವಾಗಿರುವುದೇ ಚಿಲ್ಲರೆ ಬೆಲೆಗಳ ಏರಿಕೆಗೆ ಕಾರಣ ಎಂದು ವ್ಯಾಪಾರಿಗಳು ಮತ್ತು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಟೊಮೇಟೊದ ಸರಾಸರಿ ಅಖಿಲ ಭಾರತ ಚಿಲ್ಲರೆ ಬೆಲೆಯು ತಿಂಗಳ ಹಿಂದಿನ ಅವಧಿಯಲ್ಲಿ ಪ್ರತಿ ಕೆಜಿಗೆ ರೂ 29.5 ರಿಂದ ಬುಧವಾರದಂದು ಪ್ರತಿ ಕೆಜಿಗೆ ರೂ 52.30 ಕ್ಕೆ 77 ರಷ್ಟು ಹೆಚ್ಚಳ ಕಂಡು ಬಂದಿದೆ.
(ಒನ್ಇಂಡಿಯಾ ಸುದ್ದಿ)
-
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications