ಮೈಸೂರು ಸೇರಿ 5 ನಗರಗಳಲ್ಲಿ 10 ರು ಪ್ಲಾಸ್ಟಿಕ್ ನೋಟು

ಕೊಚ್ಚಿ, ಮೈಸೂರು, ಜೈಪುರ, ಶಿಮ್ಲಾ ಹಾಗೂ ಭುವನೇಶ್ವರ ನಗರಗಳಲ್ಲಿ ಮೊದಲ ಬಾರಿಗೆ 10 ರು ಮುಖಬೆಲೆಯ 1 ಕೋಟಿಗೂ ಅಧಿಕ ಪ್ಲಾಸ್ಟಿಕ್ ನೋಟುಗಳು ಚಲಾವಣೆಯಾಗಲಿದೆ. ಇದು ಪ್ರಾಯೋಗಿಕ ಹಂತವಾಗಿ ಜಾರಿಗೆ ಬರಲಿದ್ದು, ಸಾರ್ವಜನಿಕರ ಪ್ರತಿಕ್ರಿಯೆ ನೋಡಿಕೊಂಡು ಇನ್ನುಳಿದ ನಗರಗಳಿಗೆ ವಿಸ್ತರಿಸಲಾಗುವುದು.
2014ರ ಎರಡನೇ ಅವಧಿಯಲ್ಲಿ ಈ ಪ್ಲಾಸ್ಟಿಕ್ ನೋಟುಗಳು ಜನರ ಕೈ ಸೇರಲಿದೆ.ಆಸ್ಟ್ರೇಲಿಯಾದಲ್ಲಿ ಮೊದಲ ಬಾರಿಗೆ ನಕಲಿ ನೋಟುಗಳನ್ನು ತಡೆಯಲು ಪ್ಲಾಸ್ಟಿಕ್ ನೋಟುಗಳನ್ನು ಪರಿಚಯಿಸಲಾಗಿತ್ತು. ಹಲವು ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಪ್ಲಾಸ್ಟಿಕ್ ನೋಟುಗಳನ್ನು ಬಿಡುಗಡೆ ಮಾಡಲಾಗಿದೆ. ಎಂದು ಸಚಿವ ಮೀನಾ ಹೇಳಿದ್ದಾರೆ.
ಕಾರ್ಪೊರೇಟ್ ತೆರಿಗೆ ಬಾಕಿ : ಕಾರ್ಪೊರೇಟ್ ಸಂಸ್ಥೆಗಳ ತೆರಿಗೆ ಬಾಕಿ ವಸೂಲಿಗಾಗಿ ಆರು ಅಂಶಗಳ ಯೋಜನೆ ಹಾಕಿಕೊಳ್ಳಲಾಗಿದೆ. ಡಿಸೆಂಬರ್ 31, 2013ರ ಗಣತಿಯಂತೆ ಒಟ್ಟಾರೆ ಕಾರ್ಪೊರೇಟ್ ಸಂಸ್ಥೆಗಳು ಸುಮಾರು 2.46 ಲಕ್ಷ ಕೋಟಿ ರು ಬಾಕಿ ಉಳಿಸಿಕೊಂಡಿವೆ. ಸುಮಾರು 45 ಕಾರ್ಪೊರೇಟ್ ಸಂಸ್ಥೆಗಳ ಮೇಲೆ 500 ಕೋಟಿ ರು ಮೌಲ್ಯದ ನೇರ ತೆರಿಗೆ ಪ್ರಕರಣಗಳು ವಿಚಾರಣೆ ಹಂತದಲ್ಲಿದೆ ಎಂದು ಸಚಿವ ಜೆಡಿ ಸೀಲಂ ಹೇಳಿದರು.
ಕಪ್ಪು ಹಣ ಹಾಗೂ ನಕಲಿ ನೋಟ್ ಹಾವಳಿಗಳ ನಿಯಂತ್ರಣಕ್ಕೆ ಆರ್ ಬಿಐ ಮಹತ್ವದ ಹೆಜ್ಜೆಯಿಟ್ಟಿದೆ. 500 ಹಾಗೂ 1,000 ರೂಪಾಯಿಗಳ ಕರೆನ್ಸಿ ನೋಟ್ ಗಳು ಸೇರಿದಂತೆ 2005ಕ್ಕಿಂತ ಮೊದಲು ಮುದ್ರಣಗೊಂಡಿರುವ ಎಲ್ಲಾ ಕರೆನ್ಸಿನೋಟ್ ಗಳ ಚಲಾವಣೆಯನ್ನು ಹಿಂಪಡೆಯುವ ನಿರ್ಧಾರಕ್ಕೆ ಆರ್ ಬಿಐ ಬಂದಿತ್ತು. ಮಾರ್ಚ್ 31,2014ರ ಬಳಿಕ ಈ ಕಾರ್ಯವನ್ನು ಆರಂಭಿಸಲಾಗುತ್ತದೆ. [ಹೆಚ್ಚಿನ ಮಾಹಿತಿ ಇಲ್ಲಿ ಓದಿ]
2014ರ ಜನವರಿ 1 ರಿಂದ ಬ್ಯಾಂಕ್ ಗಳಲ್ಲಿ ಈ ರೀತಿ ಅಡ್ಜೆಸ್ಟ್ ಮೆಂಟ್ ನಡೆಯುವುದಿಲ್ಲ. ಪೆನ್ನು ಹಾಗೂ ಇತರೆ ಶಾಹಿಯಾ ಲೇಖನಿಗಳಿಂದ ಬರೆದ, ಗೀಚಿದ ನೋಟುಗಳನ್ನು ಸ್ವೀಕರಿಸದಂತೆ ಆರ್ ಬಿಐ ನಿರ್ದೇಶನ ನೀಡಿದೆ. ಇಂಥ ನೋಟುಗಳನ್ನು ತ್ಯಜಿಸುವಂತೆ ಈಗಾಗಲೇ ಭಾರತೀಯ ರಿಸರ್ವ್ ಬ್ಯಾಂಕ್ ಕಟ್ಟಾಜ್ಞೆ ಹೊರಡಿಸಿದೆ. [ಹೆಚ್ಚಿನ ಮಾಹಿತಿ ಓದಿ]
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications