ಎಟಿಎಂನಲ್ಲಿ 2,000 ರು ಮಿತಿ ಅಂದ್ರೆ ಏನ್ ನಮ್ ಗತಿ?
ಬೆಂಗಳೂರು, ನವೆಂಬರ್ 09: ಪ್ರಧಾನಿ ನರೇಂದ್ರ ಮೋದಿ ಅವರು ಕಪ್ಪು ಹಣ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಆದೇಶಕ್ಕೆ ಎಲ್ಲೆಡೆಯಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ, ದೇಶದೆಲ್ಲೆಡೆ ಎಟಿಎಂಗಳಲ್ಲಿ ನೂಕುನುಗ್ಗಲು, ಗೊಂದಲ ಮುಂದುವರೆದಿದೆ. ಈ ನಡುವೆ ದಿನವೊಂದಕ್ಕೆ ಕೇವಲ 2,000 ಮಾತ್ರ ಎಟಿಎಂ ಕಾರ್ಡಿನಿಂದ ವಿಥ್ ಡ್ರಾ ಮಾಡಬಹುದು ಎಂಬ ತಾತ್ಕಾಲಿಕ ಆದೇಶ ಜನ ಸಾಮಾನ್ಯರನ್ನು ಚಿಂತೆಗೀಡು ಮಾಡಿದೆ.
500 ಹಾಗೂ 1,000 ರು ಮುಖಬೆಲೆಯ ಕರೆನ್ಸಿ ನೋಟುಗಳು ಮಂಗಳವಾರ (ನವೆಂಬರ್ 08) ಮಧ್ಯರಾತ್ರಿಯಿಂದ ಮಾನ್ಯತೆ ಕಳೆದುಕೊಂಡಿವೆ. 500 ರು ಹಾಗೂ 2,000 ರು ಹೊಸ ನೋಟುಗಳು ನವೆಂಬರ್ 10ರಿಂದ ಜನರ ಕೈ ಸೇರಲಿದೆ. [ದೇಶದೆಲ್ಲೆಡೆ ಎಟಿಎಂಗಳಲ್ಲಿ ನೂಕು ನುಗ್ಗಲು]
ಅಲ್ಲಿ ತನಕ ಈ ಗೊಂದಲ ಮುಂದುವರೆಯಲಿದೆ. ನವೆಂಬರ್ 9 ಹಾಗೂ 10ರಂದು ಯಾವುದೇ ಎಟಿಎಂ ಕಾರ್ಯ ನಿರ್ವಹಿಸುವುದಿಲ್ಲ. ಗ್ರಾಹಕರಿಗೆ ಚೆಕ್, ಡಿಡಿ, ಮೊಬೈಲ್, ಆನ್ ಲೈನ್ ಬ್ಯಾಂಕಿಂಗ್ ವ್ಯವಹಾರಕ್ಕೆ ಯಾವುದೇ ತೊಂದರೆ ಇರುವುದಿಲ್ಲ.[ನೋಟಿಗೆ ಕಡಿವಾಣ : ಎಲ್ಲರೂ ತಿಳಿಯಬೇಕಾಗಿರುವುದೇನು?]

ತಾತ್ಕಾಲಿಕ ಮಿತಿ
ಪ್ರತಿ ದಿನ ಎಟಿಎಂನಿಂದ ವಿಥ್ ಡ್ರಾ ಮಾಡುವ ಮಿತಿಯನ್ನು ಪ್ರತಿ ಕಾರ್ಡಿಗೆ 2,000 ರು ಗಳಿಗೆ ಸೀಮಿತಗೊಳಿಸಲಾಗಿದೆ. ಈ ಕ್ರಮ ಕೆಲ ದಿನಗಳ ಮಟ್ಟಿಗೆ ಜಾರಿಯಲ್ಲಿರಲಿದೆ. ನಂತರ ಈ ಮಿತಿಯನ್ನು 4,000 ರು ಗಳಿಗೆ ಏರಿಸಲಾಗುತ್ತದೆ ಎಂದು ಆರ್ ಬಿಐ ಮೂಲಗಳು ಹೇಳಿವೆ.

ಪ್ರತಿ ದಿನ ವಿಥ್ ಡ್ರಾ ಮಿತಿ
ಇದರ ಜೊತೆಗೆ ಪ್ರತಿ ದಿನ ವಿಥ್ ಡ್ರಾ ಮಿತಿಯನ್ನು 10,000 ರು ಗಳಿಗೆ ಸೀಮಿತಗೊಳಿಸಲಾಗಿದೆ. ಪ್ರತಿ ವಾರದ ಮಿತಿ 20,000 ರು ತನಕ ಇದೆ. ಇದನ್ನು ಮುಂಬರುವ ದಿನಗಳಲ್ಲಿ ಹೆಚ್ಚಿಸಲಾಗುತ್ತದೆ.

ನೋಟುಗಳನ್ನು ಬದಲಾಯಿಸಿಕೊಳ್ಳಬಹುದು
ಮುಂದಿನ 72ಗಂಟೆಗಳಲ್ಲಿ ಈ ಕೆಳಕಂಡಲ್ಲಿ ನೋಟುಗಳನ್ನು ಬದಲಾಯಿಸಿಕೊಳ್ಳಬಹುದು
* ಸರ್ಕಾರಿ ಆಸ್ಪತ್ರೆ, ರೈಲು, ವಿಮಾನ, ಬಸ್ ಟಿಕೆಟ್ ಬುಕ್ಕಿಂಗ್ ಕೌಂಟರ್,
* ಎಟಿಎಂ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಬಂಕ್
* ಸರ್ಕಾರಿ ಸ್ವಾಮ್ಯದ ರೀಟೆಲ್ ಮಳಿಗೆ
* ಚಿತಾಗಾರ ಹಾಗೂ ಸ್ಮಶಾನ.

ಗುರುತಿನ ಚೀಟಿ ನೀಡಿ
ನವೆಂಬರ್ 10 ರಿಂದ ಡಿಸೆಂಬರ್ 30 ರ ತನಕ ಯಾವುದೇ ಮಿತಿ ಇಲ್ಲದೆ ಬ್ಯಾಂಕ್ ಅಥವಾ ಅಂಚೆ ಕಚೇರಿಗಳಲ್ಲಿ ಹಳೆ ನೋಟುಗಳನ್ನು ನೀಡಿ ಹೊಸ ನೋಟು ಪಡೆಯಬಹುದು. ನಂತರ ಗುರುತಿನ ಚೀಟಿ ನೀಡಿ ಮಾರ್ಚ್ 2017ರ ತನಕ ನೋಟುಗಳನ್ನು ಬದಲಾಯಿಸಿಕೊಳ್ಳಬಹುದಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications