3.92 ಲಕ್ಷ ಕೋಟಿ ಸ್ಪೆಕ್ಟ್ರಂ ಹರಾಜು: ಏರ್ಟೆಲ್, ಜಿಯೋ, ವೊಡಾಫೋನ್ ಐಡಿಯಾದಿಂದ ಅರ್ಜಿ ಸಲ್ಲಿಕೆ
ನವದೆಹಲಿ, ಫೆಬ್ರವರಿ 10: ಮುಂಬರುವ ತಿಂಗಳಿನಲ್ಲಿ ನಡೆಯಲಿರುವ ಬಹುಕೋಟಿ 3.92 ಲಕ್ಷ ಕೋಟಿ ಸ್ಪೆಕ್ಟ್ರಂ ಹರಾಜಿಗೆ ದೇಶದ ಪ್ರಮುಖ ಟೆಲಿಕಾಂ ಕಂಪನಿಗಳಾದ ಭಾರ್ತಿ ಏರ್ಟೆಲ್, ರಿಲಯನ್ಸ್ ಜಿಯೋ, ವೊಡಾಫೋನ್ ಐಡಿಯಾ ಅರ್ಜಿ ಸಲ್ಲಿಸಿವೆ ಎಂದು ಮೂಲಗಳು ತಿಳಿಸಿವೆ.
ಮಾರ್ಚ್ 1ರಿಂದ ಪ್ರಾರಂಭಗೊಳ್ಳಲಿರುವ 3.92 ಲಕ್ಷ ಕೋಟಿ ಸ್ಪೆಕ್ಟ್ರಂ ಹರಾಜಿನಲ್ಲಿ ಈ ಟೆಲಿಕಾಂ ಕಂಪನಿಗಳು ಭಾಗಿಯಾಗಲಿದ್ದು, 700 Mhz, 800 Mhz, 900 Mhz, 1800 Mhz 2100 Mhz, 2300 Mhz ಮತ್ತು 2500 Mhz ಸೇರಿದಂತೆ ಏಳು ಆವರ್ತನ ಬ್ಯಾಂಡ್ಗಳಲ್ಲಿ ಹರಾಜು ನಡೆಯಲಿದೆ.
''ಭಾರ್ತಿ ಏರ್ಟೆಲ್, ರಿಲಯನ್ಸ್ ಜಿಯೋ ಮತ್ತು ವೊಡಾಫೋನ್ ಐಡಿಯಾ ಸ್ಪೆಕ್ಟ್ರಂ ಹರಾಜಿಗೆ ಅರ್ಜಿ ಸಲ್ಲಿಸಿವೆ'' ಎಂದು ಅಧಿಕೃತ ಮೂಲಗಳು ಪಿಟಿಐಗೆ ತಿಳಿಸಿವೆ.

ಭಾರ್ತಿ ಏರ್ಟೆಲ್ನ 900 ಮೆಗಾಹರ್ಟ್ಸ್ ಬ್ಯಾಂಡ್ನಲ್ಲಿ 12.4 ಮೆಗಾಹರ್ಟ್ಸ್ ಸ್ಪೆಕ್ಟ್ರಮ್ , ರಿಲಯನ್ಸ್ ಕಮ್ಯುನಿಕೇಷನ್ಸ್ 800 ಮೆಗಾಹರ್ಟ್ಸ್ ಬ್ಯಾಂಡ್ನಲ್ಲಿ 44 ಮೆಗಾಹರ್ಟ್ಸ್ ಸ್ಪೆಕ್ಟ್ರಮ್ ಅಡಿಯಲ್ಲಿ ನವೀಕರಣಕ್ಕೆ ಬರಲಿದೆ. ಕೆಲವು ವಲಯಗಳಲ್ಲಿ ಸ್ಪೆಕ್ಟ್ರಮ್ ನವೀಕರಣಕ್ಕಾಗಿ ಹರಾಜಿನಲ್ಲಿ ನಷ್ಟ ಅನುಭವಿಸುವ ಕಾರಣದಿಂದ ವೊಡಾಫೋನ್ ಐಡಿಯಾ ಭಾಗವಹಿಸದಿರಬಹದು ಎನ್ನಲಾಗಿದೆ.
ಟೆಲಿಕಾಂ ಆಪರೇಟರ್ಗಳು 900 ಮೆಗಾಹರ್ಟ್ಸ್ ಬ್ಯಾಂಡ್ನಲ್ಲಿ ಸ್ಪೆಕ್ಟ್ರಮ್ ಪಡೆಯುವ ಮೂಲಕ ಇದನ್ನು 4 ಜಿ ಸೇವೆಗಳಿಗೆ ಬಳಸಲಾಗುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications