ಕೆಲವು ಪೆಟ್ರೋಲ್ ಬಂಕ್ ಗಳಲ್ಲಿ 500, 1,000 ತಗೊಳ್ತಿಲ್ಲ
ಪೆಟ್ರೋಲ್ ಬಂಕ್ ಗಳಲ್ಲಂತೂ ವಿಪರೀತ ಸಂಖ್ಯೆಯಲ್ಲಿ ಜನ ಸೇರುತ್ತಿದ್ದಾರೆ. ಇಡೀ ದೇಶದಲ್ಲೇ ಇಂಥ ಸ್ಥಿತಿ ಇದೆ. ಇನ್ನು ಲೆಕ್ಕಾಚಾರದಲ್ಲಿ ಹಣ ಖರ್ಚು ಮಾಡುವ, ಅಗತ್ಯ ಕಂಡಾಗ ಮಾತ್ರ ಎಟಿಎಂನಿಂದ ಹಣ ಡ್ರಾ ಮಾಡುವ ವೇತನದಾರರು ಕಂಗಾಲಾಗಿದ್ದಾರೆ.
ಬೆಂಗಳೂರು, ನವೆಂಬರ್ 9: ಬಹುತೇಕ ಕಡೆ ಒಂದೇ ಥರದ ವಾತಾವರಣ. ಸಣ್ಣ ವಾಗ್ವಾದ, ಮಾತುಕತೆ, ಹೀಗೆ ಮಾಡಿದರೆ ಹೇಗೆ ಎಂಬ ಸಿಟ್ಟು..ಈ ದೃಶ್ಯಗಳ ಸ್ಥಳದ ಬದಲಾವಣೆ ಅದರೂ ಮಾತುಕತೆ, ಸಿಟ್ಟು, ಸೆಡವು ಮಾತ್ರ ಒಂದೇ ಥರ ಕಾಣುತ್ತಿದೆ. ನಿಮ್ಮ ಊಹೆ ನಿಜ. 500, 1000ದ ನೋಟು ತಗೊಳ್ತಾನೆ ಇಲ್ಲ ಅನ್ನೋದು ಎಲ್ಲ ಕಡೆ ಕೇಳಿ ಬರುತ್ತಿರುವ ಆರೋಪ.
ಪೆಟ್ರೋಲ್ ಬಂಕ್ ಗಳಲ್ಲಂತೂ ವಿಪರೀತ ಸಂಖ್ಯೆಯಲ್ಲಿ ಜನ ಸೇರುತ್ತಿದ್ದಾರೆ. ಇಡೀ ದೇಶದಲ್ಲೇ ಇಂಥ ಸ್ಥಿತಿ ಇದೆ. ಇನ್ನು ಲೆಕ್ಕಾಚಾರದಲ್ಲಿ ಹಣ ಖರ್ಚು ಮಾಡುವ, ತುಂಬ ಅಗತ್ಯ ಕಂಡಾಗ ಮಾತ್ರ ಎಟಿಎಂನಿಂದ ಹಣ ಡ್ರಾ ಮಾಡುವ ವೇತನದಾರರು ಅಕ್ಷರಶಃ ಕಂಗಾಲಾಗಿದ್ದಾರೆ. ತಮ್ಮ ಬಳಿಯಿದ್ದ ಅಲ್ಪಸ್ವಲ್ಪ ದುಡ್ಡನ್ನೇ ಕೊಡುತ್ತಿದ್ದಾರೆ.[ಹಳೇ 500, 1,000 ರುಪಾಯಿ ನೋಟು ಏನು ಮಾಡೋದು: ಪ್ರಶ್ನೋತ್ತರಗಳು..]

ಆದರೆ, 72 ಗಂಟೆ ಕಾಲ ಪೆಟ್ರೋಲ್ ಬಂಕ್ ಗಳಲ್ಲಿ ಹಳೆ 500, 1000ದ ನೋಟು ತಗೋಬೇಕು. ಆದರೆ ಕೆಲವು ಬಂಕ್ ಗಳಲ್ಲಿ ಸ್ವೀಕರಿಸುತ್ತಿಲ್ಲ. ಕೆಲವರಂತೂ ತಮ್ಮ ಬಳಿಯಿರುವ ಹಳೇ ನೋಟು ಬಂಕ್ ಗಳಲ್ಲಿ ಬದಲಿಸಿಕೊಳ್ಳಬಹುದು ಅಂತಲೇ ಹೋಗ್ತಿದ್ದಾರೆ. ಬ್ಯಾಂಕ್ ನಲ್ಲಿ ವಿಪರೀತ ಅನ್ನೋಷ್ಟು ಜನ ಸೇರ್ತಾರೆ. ಆದ್ದರಿಂದ ಬಂಕ್ ಸುಲಭದ ಮಾರ್ಗ ಎಂದು ಹಲವರು ಯೋಚಿಸ್ತಿದ್ದಾರೆ.

ಬ್ಯಾಂಕ್ ಗಳು ತೆರೆದು, ಅವು ಪುರ್ಣ ಪ್ರಮಾಣದಲ್ಲಿ ಕೆಲಸ ಆರಂಭಿಸುವವರೆಗೆ ಈ ಸಮಸ್ಯೆ ಹೀಗೆ ಇರುತ್ತೆ. ಇನ್ನು ಬುಧವಾರ ದಿನದ ಆರಂಭದಲ್ಲೇ ಈ ಪರಿಯ ಗೊಂದಲ ಕಾಣಿಸಿಕೊಂಡಿದೆ. ಇನ್ನು ಸಂಜೆ ಹಾಗೂ ರಾತ್ರಿ ವೇಳೆಗೆ ಹೇಗಾಗಬಹುದು ಎಂಬ ಚಿಂತೆ ಎದುರಾಗಿದೆ. ಈ ಸನ್ನಿವೇಶ ಎದುರಿಸುವುದು ದೇಶದಾದ್ಯಂತ ಇರುವ ಪೆಟ್ರೋಲ್ ಬಂಕ್ ಗಳಿಗೆ ಸಲೀಸಲ್ಲ.[ಎಲ್ಲರ ಕೈಲೂ ದೊಡ್ಡ ನೋಟು , ದೇಶದೆಲ್ಲೆಡೆ ಎಟಿಎಂಗಳಲ್ಲಿ ನೂಕು ನುಗ್ಗಲು]
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications