ಆರ್ಬಿಐ ಮಂಡಳಿಗೆ ಆರೆಸ್ಸೆಸ್ ಸಿದ್ಧಾಂತವಾದಿ ಗುರುಮೂರ್ತಿ ನೇಮಕ
ನವದೆಹಲಿ, ಆಗಸ್ಟ್ 8: ಆರೆಸ್ಸೆಸ್ ಪರ ಚಿಂತನೆಯುಳ್ಳ ಪತ್ರಕರ್ತ ಎಸ್. ಗುರುಮೂರ್ತಿ, ಸಹಕಾರ ಭಾರತಿ ಮುಖ್ಯಸ್ಥ ಸತೀಶ್ ಕಾಶಿನಾಥ್ ಮರಾಥೆ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕ್ನ ಅರೆಕಾಲಿಕ ನಿರ್ದೇಶಕರನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ.
ಇದಕ್ಕೆ ಸಂಪುಟದ ನೇಮಕಾತಿ ಸಮಿತಿ ಅನುಮತಿ ನೀಡಿದ್ದು, ಇಬ್ಬರ ನೇಮಕಾತಿ ಅವಧಿ ನಾಲ್ಕು ವರ್ಷಗಳದ್ದಾಗಿರಲಿದೆ.
ಹಣಕಾಸು ಸೇವೆಗಳ ಇಲಾಖೆಯು ಕಳುಹಿಸಿದ್ದ ನೇಮಕಾತಿಯ ಪ್ರಸ್ತಾವಗಳಿಗೆ ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಎಸ್, ಗುರುಮೂರ್ತಿ ತಮಿಳು ರಾಜಕೀಯ ವಾರಪತ್ರಿಕೆ 'ತುಗ್ಲಕ್'ದ ಸಂಪಾದಕರಾಗಿದ್ದು, ಆರೆಸ್ಸೆಸ್ ಸಹಭಾಗಿತ್ವದ ಸ್ವದೇಶಿ ಜಾಗರಣ್ ಮಂಚ್ದ ಸಹ ಸಂಚಾಲಕ ಸಹ ಆಗಿದ್ದಾರೆ.

ಗುರುಮೂರ್ತಿ ಅರ್ಥಶಾಸ್ತ್ರಜ್ಞರು, ಸಿಎ ಕೂಡ ಆಗಿದ್ದು, ದೀರ್ಘಕಾಲದಿಂದ ಆರ್ಥಿಕ ಹಾಗೂ ರಾಜಕೀಯ ವಿಶ್ಲೇಷಣೆಗಳನ್ನು ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಪ್ರಮುಖ ಬೆಂಬಲಿಗರೂ ಹೌದು.
I attacked RBI provisioning norms saying it does not take into account non convertibility, no foreign investment in banks, govt ownership & 30% deposits being in govt securities. Nowhere deposits/banks protected as in India. https://t.co/UpDPItlTk4
— S Gurumurthy (@sgurumurthy) 30 September 2017
ಆದರೆ, ಕಳೆದ ವರ್ಷ ಅವರು ಆರ್ಬಿಐ ವಿರುದ್ಧ ಟೀಕಾಪ್ರಹಾರ ನಡೆಸಿದ್ದರು. ಆರ್ಬಿಐ ಭಾರತದ ವ್ಯವಹಾರಗಳನ್ನು ನಾಶಪಡಿಸುತ್ತಿದೆ. ಅಲ್ಲದೆ, ಪಿಎಸ್ಯು ಬ್ಯಾಂಕ್ಗಳನ್ನು ಖಾಸಗೀಕರಣಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿದೆ. ಆರ್ಬಿಐ ಅಜೆಂಡಾದೊಂದಿಗೆ ಮುಂದುವರಿಯುತ್ತಿದೆ. ಇದು ತಪ್ಪು ಎಂದು ಅವರು ಟ್ವೀಟ್ ಮಾಡಿದ್ದರು.
ಸತೀಶ್ ಮರಾಥೆ ಭಾರತದಲ್ಲಿ ಸಹಕಾರಿ ಚಳವಳಿಯಲ್ಲಿ ತೊಡಗಿಸಿಕೊಂಡಿರುವ ಸಹಕಾರ ಭಾರತಿ ಎನ್ಜಿಓದ ಮುಖ್ಯಸ್ಥರಾಗಿದ್ದಾರೆ.
ಬ್ಯಾಂಕ್ ಆಫ್ ಇಂಡಿಯಾ, ಯುನೈಟೆಡ್ ವೆಸ್ಟರ್ನ್ ಬ್ಯಾಂಕ್, ಜನಕಲ್ಯಾಣ್ ಸಹಕಾರಿ ಬ್ಯಾಂಕುಗಳಲ್ಲಿ ಸುಮಾರು 20 ವರ್ಷ ದುಡಿದಿದ್ದಾರೆ. ಕಾಲೇಜು ದಿನಗಳಲ್ಲಿ ಅವರು ಆರೆಸ್ಸೆಸ್ನ ವಿದ್ಯಾರ್ಥಿ ಘಟಕ ಎಬಿವಿಪಿಯಲ್ಲಿ ತೊಡಗಿಸಿಕೊಂಡಿದ್ದರು. ಎಬಿವಿಪಿಯ ಖಜಾಂಚಿಯಾಗಿಯೂ ನಾಲ್ಕು ವರ್ಷ ಕೆಲಸ ಮಾಡಿದ್ದರು.

ಇಬ್ಬರ ನೇಮಕದಿಂದ ಆರ್ಬಿಐ ಮಂಡಳಿಯ ನಿರ್ದೇಶಕರ ಸಂಖ್ಯೆ ಹತ್ತಕ್ಕೆ ಏರಿದ್ದು, ಇದು ಮಂಡಳಿಗೆ ಇರುವ ಗರಿಷ್ಠ ನಿರ್ದೇಶಕರ ಮಿತಿಯಾಗಿದೆ. ಇದಲ್ಲದೆ ಇಬ್ಬರು ಸರ್ಕಾರಿ ಅಧಿಕಾರಿಗಳು ಸಹ ಮಂಡಳಿಯಲ್ಲಿ ಇದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications