ಅಯ್ಯಯ್ಯೋ.. 93 ರೂಪಾಯಿಗೆ ಕುಸಿತ ಕಂಡ ಭಾರತದ ಕರೆನ್ಸಿ, ಡಾಲರ್ ಎದುರು ಮಹಾ ಪತನ.. Rupee And Dollar
ಭಾರತೀಯ ರೂಪಾಯಿ ದೊಡ್ಡ ಮಟ್ಟದಲ್ಲಿ ಕುಸಿತ ಕಂಡಿದೆ, ಯುದ್ಧದ ಆಘಾತದ ನಡುವೆ ಒಂದು ಕಡೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಾಗುತ್ತಾ ಇದೆ. ಹೀಗಿದ್ದಾಗ ಗ್ಯಾಸ್ ಸಿಲಿಂಡರ್ ಸಮಸ್ಯೆ ಕಾರಣಕ್ಕೆ ಜನರು ಕೂಡ ರೊಚ್ಚಿಗೆದ್ದು, ನಿತ್ಯದ ಬದುಕು ಕೂಡ ಕಷ್ಟವಾಗುತ್ತಿದೆ ಎಂದು ಆಕ್ರೋಶದ ಬೆಂಕಿ ಹೊರ ಹಾಕುತ್ತಿದ್ದಾರೆ. ಆದರೆ ಬೇರೆ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಪೆಟ್ರೋಲ್ & ಡೀಸೆಲ್ ಬೆಲೆ ಭಾರಿ ಪ್ರಮಾಣದಲ್ಲಿ ಕಡಿಮೆಗೆ ಸಿಗುತ್ತಿದೆ. ಹೀಗೆ ಒಂದು ಸಮಾಧಾನದ ನಡುವೆ ದಿಢೀರ್ ಮತ್ತೊಂದು ಆಘಾತ ಎದುರಾಗಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ 93 ರೂಪಾಯಿಗೆ ಮಹಾ ಕುಸಿತವನ್ನ ಕಂಡಿದೆ.
ಹೌದು ಶುಕ್ರವಾರ ಎಂದರೆ ಮಾರ್ಚ್ 20, 2026ರ ಈ ದಿನ ಬೆಳಗಿನ ವಹಿವಾಟಿನಲ್ಲಿ ಅಮೆರಿಕನ್ ಡಾಲರ್ ಎದುರು ಭಾರತದ ರೂಪಾಯಿ ಭಾರಿ ದೊಡ್ಡ ಮಟ್ಟದಲ್ಲಿ ಕುಸಿತ ಕಂಡಿದೆ. ಯುದ್ಧದ ಕಾರಣದಿಂದ ಅಮೆರಿಕನ್ ಡಾಲರ್ ಬಲವಾಗುತ್ತಿದ್ದು, ಜೊತೆಗೆ ವಿದೇಶಿ ಹೂಡಿಕೆದಾರರು ನಿರಂತರವಾಗಿ ಹಣವನ್ನು ಭಾರತೀಯ ಮಾರುಕಟ್ಟೆ ಮೂಲಕ ಹೊರಗಡೆ ತೆಗೆದುಕೊಂಡು ಹೋಗುತ್ತಿರುವ ಕಾರಣಕ್ಕೆ ಈಗ ಭಾರಿ ದೊಡ್ಡ ಹಂತದಲ್ಲಿ ಕುಸಿತ ಕಂಡಿದೆ ರೂಪಾಯಿ ಮೌಲ್ಯ.

ಪ್ರಪಂಚದಲ್ಲಿ ಆರ್ಥಿಕ ಸುನಾಮಿ ಸೃಷ್ಟಿ
ಹತ್ತಾರು ಪೈಸೆಗೂ ಹೆಚ್ಚು ಮೌಲ್ಯ ಒಂದೇ ದಿನ ಕುಸಿತ ಕಂಡ ಹಿನ್ನೆಲೆ, ಇದೀಗ ಪ್ರತಿ ಒಂದು ಡಾಲರ್ಗೆ ನಾವು 93.40 ರೂಪಾಯಿ ಕೊಡಬೇಕಾದ ಪರಿಸ್ಥಿತಿ ಬಂದಿದೆ. ಇದು ಭಾರತದ ಆರ್ಥಿಕ ಪರಿಸ್ಥಿತಿ ಹೊಸ ಸವಾಲು ತಂದೊಡ್ಡುವ ಮೂಲಕ, ಯುದ್ಧದ ಸಮಯದಲ್ಲಿ ಮತ್ತೊಂದು ತಲೆನೋವು ಸೃಷ್ಟಿ ಮಾಡಿದೆ. ಕೇಂದ್ರ ಸರ್ಕಾರ ಕೂಡ ಇದೀಗ ರೂಪಾಯಿ ಬಲವರ್ಧನೆಗೆ ಕಠಿಣ ಕ್ರಮ ಜರುಗಿಸಲು ಮುಂದಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ವಿರುದ್ಧ ಯುದ್ಧ ಮಾಡುವ ನಿರ್ಧಾರವನ್ನು ಕೈಗೊಂಡ ನಂತರ ಇಡೀ ಜಗತ್ತಿನಲ್ಲಿ ಆರ್ಥಿಕ ಬಿರುಗಾಳಿ ಎದ್ದು, ಸಂಚಲನ ಸೃಷ್ಟಿಯಾಗಿದೆ.
ಆರ್ಬಿಐ ಮಹತ್ವದ ಕ್ರಮ ಜಾರಿಗೆ
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವುದು ರೂಪಾಯಿಗೆ ಮತ್ತಷ್ಟು ಒತ್ತಡ ತಂದಿದೆ. ದೇಸಿ ಷೇರು ಮಾರುಕಟ್ಟೆ ಸ್ವಲ್ಪ ಮಟ್ಟಿಗೆ ಏರಿಕೆ ಕಂಡಿದ್ದರೂ, ರೂಪಾಯಿ ಮೌಲ್ಯ ಕುಸಿತ ತಳಮಳದ ವಾತಾವರಣ ಸೃಷ್ಟಿ ಮಾಡಿದೆ. ಇಂಟರ್ಬ್ಯಾಂಕ್ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ, ರೂಪಾಯಿ 92.92 ರಿಂದ ಆರಂಭಗೊಂಡು ಮೊದಲ ಬಾರಿಗೆ 93 ರೂಪಾಯಿ ಗಡಿ ದಾಟಿ ಗರಿಷ್ಠ 93.40 ರೂಪಾಯಿಗೆ ತಲುಪಿಬಿಟ್ಟಿದೆ ಭಾರತೀಯ ಕರೆನ್ಸಿ ಮೌಲ್ಯ. ಮತ್ತೊಂದು ಕಡೆ ರೂಪಾಯಿ ಮೌಲ್ಯ ಇನ್ನಷ್ಟು ಕುಸಿತ ಕಾಣುವುದನ್ನು ತಡೆಯಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಅಂದರೆ ಭಾರತದ ಕೇಂದ್ರ ಬ್ಯಾಂಕ್ ಮತಹ್ವದ ಕ್ರಮ ಕೈಗೊಂಡಿದೆ. ಆರ್ಬಿಐ ಈಗ ಅಮೆರಿಕನ್ ಡಾಲರ್ ಮಾರಾಟ ಮಾಡುವ ಮೂಲಕ ರೂಪಾಯಿ ಮೌಲ್ಯ ಕುಸಿತವನ್ನ ಈಗ ತಾತ್ಕಾಲಿಕವಾಗಿ ತಡೆಹಿಡಿಯಲು ಪ್ರಯತ್ನಿಸುತ್ತಿದೆ ಎನ್ನುತ್ತಿದ್ದಾರೆ ತಜ್ಞರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications