ಕೋಟ್ಯಂತರ ಬೆಲೆ ಸ್ಥಿರಾಸ್ತಿ ಮಾರಾಟಕ್ಕಿಳಿದ ಸಹಾರಾ
ನವದೆಹಲಿ, ಡಿ.7: ಹೂಡಿಕೆದಾರರಿಂದ ಸಂಗ್ರಹಿಸಿದ ಮೊತ್ತವನ್ನು ಹಿಂದುರಿಗಿಸುವ ಭರವಸೆ ನೀಡಿ ಸುಪ್ರೀಂಕೋರ್ಟಿನಿಂದ ಜಾಮೀನು ಪಡೆದ ಸಹರಾ ಮುಖ್ಯಸ್ಥ ಸುಬ್ರತಾ ರಾಯ್ ಅವರು ತಮ್ಮ ಸ್ಥಿರಾಸ್ತಿ ಮಾರಾಟ ಪ್ರಕ್ರಿಯೆ ಮುಂದುವರೆಸಿದ್ದಾರೆ.
ಗುರ್ ಗಾಂವ್ ನ ಭೂಮಿಯನ್ನು 1,211 ಕೋಟಿ ರುಗೆ ಮಾರಾಟ ಮಾಡಿದ ನಂತರ ಮುಂಬೈ ಹಾಗೂ ಜೋಧಪುರದ ಜಮೀನು ಮಾರಾಟಕ್ಕೆ ಸಹಾರಾ ಸಂಸ್ಥೆ ಮುಂದಾಗಿದೆ. ತಲಾ 1,250 ಕೋಟಿ ರು ಮೌಲ್ಯಕ್ಕೆ ಭೂಮಿ ಮಾರಾಟ ನಂತರ ಪುಣೆಯಲ್ಲಿರುವ ಆಸ್ತಿ ಮಾರಾಟವಾಗಲಿದೆ. ಎನ್ ಸಿಆರ್ ಪ್ರದೇಶದ ರಿಯಲ್ ಎಸ್ಟೇಟ್ ಉದ್ಯಮಿಗಳು ಸಹಾರಾ ಸಂಸ್ಥೆಯಿಂದ ಭೂಮಿ ಕೊಳ್ಳಲು ಮುಗಿ ಬೀಳುತ್ತಿದ್ದಾರೆ.

ಸಹಾರಾ ಮಾರಾಟದ ಅಂಕಿ ಅಂಶ:
* ಗುರ್ ಗಾಂವ್ ನ 185 ಎಕರೆ ಭೂಮಿ ಎಂ3ಎಂ ಇಂಡಿಯಾ ಲಿಗೆ ಮಾರಾಟ
* ಮುಂದಿನ ದಿನಗಳಲ್ಲಿ ನಾಲ್ಕು ಕಡೆಗಳಲ್ಲಿರುವ ಭೂಮಿ ಮಾರಾಟದಿಂದ 2,710 ಕೋಟಿ ರು ಸಹಾರಾ ಕೈ ಸೇರಲಿದೆ.
* ಗುರ್ ಗಾವ್ ನ ಚೌಮಾ, ಜೋಧಪುರ, ಪುಣೆ, ಮುಂಬೈನ ವಾಸೈ ಪ್ರದೇಶ ಭೂಮಿಗಳನ್ನು ಸಹಾರಾ ಮಾರಾಟಕ್ಕಿಟ್ಟಿದೆ.
* ಮುಂಬೈನ ಭೂಮಿಯಿಂದಲೇ ಸುಮಾರು 1,111 ಕೋಟಿ ರು ಪಡೆಯುವ ನಿರೀಕ್ಷೆಯಲ್ಲಿದೆ.
* ಅಹಮದಾಬಾದಿನ ಆಸ್ತಿ ಮಾರಾಟದಿಂದ 411.82 ಕೋಟಿ ರು ಸಿಕ್ಕಿದೆ.
* ಸೆಬಿಗೆ ಈಗಾಗಲೇ 3,117 ಕೋಟಿ ರು ಜಮೆ ಮಾಡಲಾಗಿದೆ.[ಸಹಾರಾ ಮುಖ್ಯಸ್ಥನಿಗೆ ರಿಲೀಫ್]
ಕಳೆದ ಮಾರ್ಚ್ ತಿಂಗಳಿನಲ್ಲಿ ತಿಹಾರ್ ಜೈಲಿನಲ್ಲಿದ್ದ ಸಹಾರಾ ಸಂಸ್ಥೆ ಮುಖ್ಯಸ್ಥ ಸುಬ್ರತಾ ರಾಯ್ ಬಿಡುಗಡೆಯಾಗಿ ಮಾರುಕಟ್ಟೆ ನಿಯಂತ್ರಕ ಸೆಬಿಯಲ್ಲಿ ಸುಮಾರು 10.000 ಸಾವಿರ ಕೋಟಿ ರುಪಾಯಿಗಳನ್ನು ಠೇವಣಿ ಇಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಸಹಾರಾ ಗೋಲ್ ಮಾಲ್ : ಸೆಬಿಯ ಕಾನೂನುಗಳನ್ನು ಉಲ್ಲಂಘಿಸಿ ಹೂಡಿಕೆದಾರರಿಂದ ಹಣವನ್ನು ಸಂಗ್ರಹಿಸಿದ್ದಕ್ಕಾಗಿ ಸಹರಾ ಸಮೂಹದ ಈ ಎರಡು ಕಂಪೆನಿಗಳು ತಮ್ಮ ಹೂಡಿಕೆದಾರರಿಗೆ 24 ಸಾವಿರ ಕೋಟಿ ರೂ.ಗಳನ್ನು ಶೇ.15ರಷ್ಟು ವಾರ್ಷಿಕ ಬಡ್ಡಿಯೊಂದಿಗೆ ಮರುಪಾವತಿಸಬೇಕಾಗಿದೆ.
2008 ಮತ್ತು 2011ರ ನಡುವೆ ಷೇರು ಮಾರುಕಟ್ಟೆಯಲ್ಲಿ ಲಿಸ್ಟ್ ಆಗದಿರುವ ತನ್ನ ಎರಡು ಕಂಪನಿಗಳ ಮೂಲಕ ರೂ. 24,029 ಕೋಟಿ ನಿಯಮ ಉಲ್ಲಂಘಿಸಿ ಸಂಗ್ರಹಿಸಿದ ಆರೋಪ ಹೊತ್ತಿದೆ.
ಕಳೆದ 33 ವರ್ಷಗಳಲ್ಲಿ ಒಂದೇ ಒಂದು ಬೇನಾಮಿ ಖಾತೆ, ಹಣಕಾಸು ಅವ್ಯವಹಾರ ಕಾಣದೆ 12 ಕೋಟಿಗೂ ಅಧಿಕ ಹೂಡಿಕೆದಾರರನ್ನು ಸೃಷ್ಟಿಸಿದ ಸಹಾರಾ ಸಂಸ್ಥೆ ಎದೆಗುಂದಿಲ್ಲ ಎಂಬುದು ಅಚ್ಚರಿಯಾದರೂ ಸತ್ಯ ಸಂಗತಿ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications