ಭಾರತದಲ್ಲೇ ಮೊಬೈಲ್ ತಯಾರಿಸಿಲು ಮುಗಿಬಿದ್ದ ಕಂಪನಿಗಳು: 11 ಲಕ್ಷ ಕೋಟಿ ರೂ. ಪ್ರಸ್ತಾಪ
ನವದೆಹಲಿ, ಆಗಸ್ಟ್ 01: ಸ್ಯಾಮ್ಸಂಗ್, ಆ್ಯಪಲ್, ಪೆಗಾಟ್ರಾನ್, ವಿಸ್ಟ್ರಾನ್, ಫಾಕ್ಸ್ಕಾನ್ ಮತ್ತು ರೈಸಿಂಗ್ ಸ್ಟಾರ್ ಸೇರಿದಂತೆ ಒಟ್ಟಾರೆ 22 ಕಂಪನಿಗಳು ದೇಶದಲ್ಲಿ ಮುಂದಿನ 5 ವರ್ಷಗಳಲ್ಲಿ 11 ಲಕ್ಷ ಕೋಟಿ ರೂಪಾಯಿ ಮೌಲ್ಯದ ಮೊಬೈಲ್ ತಯಾರಿಸುವ ಪ್ರಸ್ತಾಪವನ್ನು ಮುಂದಿಟ್ಟಿವೆ ಎಂದು ಕೇಂದ್ರ ದೂರ ಸಂಪರ್ಕ ಮತ್ತು ಐ.ಟಿ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ದೇಶದಲ್ಲಿ ಎಲೆಕ್ಟ್ರಾನಿಕ್ ಉತ್ಪನ್ನಗಳ ತಯಾರಿಕೆ ಹೆಚ್ಚಿಸಲು ಜಾರಿಗೊಳಿಸಿರುವ ಉತ್ಪಾದನೆ ಸಂಪರ್ಕಿತ ಉತ್ತೇಜನ (ಪಿಎಲ್ಎ) ಯೋಜನೆಯಡಿ ಈ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಆದರೆ ಈ ಒಟ್ಟಾರೆ ಪ್ರಸ್ತಾವನೆಯಲ್ಲಿ ಚೀನಾದ ಯಾವುದೇ ಕಂಪನಿಯಿಂದ ಅರ್ಜಿ ಸಲ್ಲಿಕೆಯಾಗಿಲ್ಲ ಎಂದು ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ಕೇಂದ್ರದ ಪಿಎಲ್ಐ ಯೋಜನೆಯನ್ನು ವಿವರಿಸಲು ಮಾಧ್ಯಮಗಳನ್ನು ಉದ್ದೇಶಿಸಿ ಪ್ರಸಾದ್ ಈ ಹೇಳಿಕೆ ನೀಡಿದ್ದು, ಡಿಜಿಟಲ್ ಇಂಡಿಯಾ ಮತ್ತು ಮೇಕ್ ಇನ್ ಇಂಡಿಯಾದಂತಹ ಉಪಕ್ರಮಗಳು "ಪರಿವರ್ತಕ ಕಾರ್ಯಕ್ರಮಗಳು" ಎಂದು ಹೇಳಿದರು. ಇದರ ಜೊತೆಗೆ ಆಗಸ್ಟ್ 1 ರಿಂದ ಕಂಪನಿಗಳು ಪ್ರೋತ್ಸಾಹ ಧನಕ್ಕೆ ಅರ್ಹವಾಗುತ್ತವೆ ಎಂದು ಹೇಳಿದರು.
A total of 22 companies have filed their application under the PLI Scheme. These companies will produce mobile phones and components worth Rs 11.5 lakh crore in the coming 5 years out of which products worth Rs 7 lakh crore will be exported. pic.twitter.com/3yUky3HkOC
— Ravi Shankar Prasad (@rsprasad) August 1, 2020
11.5 ಲಕ್ಷ ಕೋಟಿ ರೂ.ಗಳಲ್ಲಿ 7 ಲಕ್ಷ ಕೋಟಿ ಮೌಲ್ಯದ ಮೊಬೈಲ್ ಮತ್ತು ಘಟಕಗಳನ್ನು ರಫ್ತು ಮಾಡಲಾಗುವುದು ಎಂದು ಅವರು ವಿವರಿಸಿದರು. 3 ಲಕ್ಷಕ್ಕೂ ಹೆಚ್ಚು ಜನರು ನೇರ ಉದ್ಯೋಗ ಪಡೆಯಲಿದ್ದಾರೆ. 9 ಲಕ್ಷಕ್ಕೂ ಹೆಚ್ಚು ಜನರಿಗೆ ಪರೋಕ್ಷ ಉದ್ಯೋಗ ಸಿಗಲಿದೆ ಎಂದು ಅಂದಾಜಿಸಲಾಗಿದೆ.
ಪಿಎಲ್ಐಗೆ ಅರ್ಜಿ ಸಲ್ಲಿಸಿದ ಕಂಪನಿಗಳಲ್ಲಿ ಜಾಗತಿಕ ಖ್ಯಾತ ಕಂಪನಿಗಳಾದ ಸ್ಯಾಮ್ಸಂಗ್, ಪೆಗಾಟ್ರಾನ್, ವಿಸ್ಟ್ರಾನ್, ಫಾಕ್ಸ್ಕಾನ್ ಮತ್ತು ರೈಸಿಂಗ್ ಸ್ಟಾರ್ ಸೇರಿವೆ. ಇನ್ನು ದೇಶೀಯ ಕಂಪನಿಗಳಲ್ಲಿ ಲಾವಾ, ಡಿಕ್ಸನ್, ಮೈಕ್ರೋಮ್ಯಾಕ್ಸ್, ಸೊಹೊ ಮತ್ತು ಆಪ್ಟಿಮಸ್ ಸೇರಿದೆ.
-
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications