ನೋಯ್ಡಾದಲ್ಲಿನ ಉತ್ಪಾದನಾ ಕೇಂದ್ರದಲ್ಲಿ 5,000 ಕೋಟಿ ರೂ. ಹೂಡಿಕೆ ಮಾಡಲಿದೆ ಸ್ಯಾಮ್ಸಂಗ್
ಲಕ್ನೋ, ನವೆಂಬರ್ 24: ದಕ್ಷಿಣ ಆಫ್ರಿಕಾ ಮೂಲದ ಖ್ಯಾತ ಮೊಬೈಲ್ ತಯಾರಕ ಕಂಪನಿ ಸ್ಯಾಮ್ಸಂಗ್ ಉತ್ತರ ಪ್ರದೇಶದ ನೋಯ್ದಾದಲ್ಲಿರುವ ತನ್ನ ಉತ್ಪಾದನಾ ಕೇಂದ್ರದಲ್ಲಿ ಸುಮಾರು 5,000 ಕೋಟಿ ರೂಪಾಯಿ ಹೂಡಿಕೆ ಮಾಡಲಿದೆ.
Recommended Video
ಕಂಪನಿಯ ತನ್ನ ಸ್ಮಾರ್ಟ್ ಫೋನ್ ಡಿಸ್ ಪ್ಲೇ ಉತ್ಪಾದನಾ ಕೇಂದ್ರದಲ್ಲಿ ರಫ್ತು ಆಧಾರಿತ ಘಟಕ (ಇಒಯು) ಜನವರಿ-ಫೆಬ್ರವರಿ 2021 ರ ವೇಳೆಗೆ ಸಿದ್ಧವಾಗಲಿದೆ ಮತ್ತು ಏಪ್ರಿಲ್ 2021 ರ ವೇಳೆಗೆ ವಾಣಿಜ್ಯ ಉತ್ಪಾದನೆಯನ್ನು ಸಾಧಿಸುವ ನಿರೀಕ್ಷೆಯಿದೆ.
'' ಇಲ್ಲಿಯವರೆಗೆ ಕಂಪನಿಯು ಸ್ಯಾಮ್ ಸಂಗ್ ಕಂಪನಿ ಗ್ರೀನ್ ಫೀಲ್ಡ್ ಸ್ಥಾವರದಲ್ಲಿ ಸುಮಾರು 1,500 ಕೋಟಿ ರೂ ಹೂಡಿಕೆ ಮಾಡಿದೆ. ಒಮ್ಮೆ ಘಟಕವು ಕಾರ್ಯರೂಪಕ್ಕೆ ಬಂದರೆ, ಭಾರತ ಸ್ಯಾಮ್ಸಂಗ್ನ ಸ್ಮಾರ್ಟ್ಫೋನ್ ಡಿಸ್ಪ್ಲೇ ಉತ್ಪಾದನಾ ಸೌಲಭ್ಯವನ್ನು ಹೊಂದಿರುವ ವಿಶ್ವದ ಮೂರನೇ ರಾಷ್ಟ್ರವಾಗಲಿದೆ " ಎಂದು ಉತ್ತರ ಪ್ರದೇಶದ ಕೈಗಾರಿಕಾ ಅಭಿವೃದ್ಧಿ ಸಚಿವ ಸತೀಶ್ ಮಹಾನ ಹೇಳಿದ್ದಾರೆ.

ಕೊರೊನಾವೈರಸ್ ಕೇಂದ್ರಸ್ಥಾನವಾಗಿದ್ದ ಚೀನಾದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ಹೆಚ್ಚಿದ ಬಳಿಕ ಅನೇಕ ಕಂಪನಿಗಳು ಭಾರತ ಸೇರಿದಂತೆ ಬೇರೆ ರಾಷ್ಟ್ರಗಳಿಗೆ ತನ್ನ ಉತ್ಪಾದನಾ ಘಟಕಗಳನ್ನು ಸ್ಥಳಾಂತರಗೊಳಿಸಲು ಮುಂದಾಗಿವೆ. ಇದರಲ್ಲಿ ಸ್ಯಾಮ್ಸಂಗ್ನ ಈ ಯೋಜನೆಯು ಸೇರಿದೆ. ಈ ದೊಡ್ಡ ಮಟ್ಟಿನ ಹೂಡಿಕೆಯಿಂದಾಗಿ ಸುಮಾರು 1,500 ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.
ಎಲ್ಲಾ ರೀತಿಯ ಮತ್ತು ಗಾತ್ರದ ಎಲೆಕ್ಟ್ರಾನಿಕ್ ಸಾಧನಗಳ ಉತ್ಪಾದನೆ , ಜೋಡಣೆ, ಸಂಸ್ಕರಣೆ ಮತ್ತು ಮಾರಾಟಕ್ಕಾಗಿ ಸ್ಯಾಮ್ಸಂಗ್ ನೊಯ್ದಾದಲ್ಲಿ ಡಿಸ್ ಪ್ಲೇ ಉತ್ಪಾದನಾ ಕೇಂದ್ರವನ್ನು ಸ್ಥಾಪಿಸಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications