ಮೆಟಾ ಇಂಡಿಯಾ ಮುಖ್ಯಸ್ಥರಾಗಿ ಸಂಧ್ಯಾ ದೇವನಾಥನ್ ನೇಮಕ
ನವದೆಹಲಿ, ನವೆಂಬರ್ 17: ಫೇಸ್ಬುಕ್ ಮಾತೃಸಂಸ್ಥೆ ಮೆಟಾ ಕಂಪೆನಿಗೆ ಭಾರತದ ಮುಖ್ಯಸ್ಥರಾಗಿ ಸಂಧ್ಯಾ ದೇವನಾಥನ್ ಅವರನ್ನು ನೇಮಕ ಮಾಡುವುದಾಗಿ ತಿಳಿಸಿದೆ.
ಅಜಿತ್ ಮೋಹನ್ ಪ್ರತಿಸ್ಪರ್ಧಿ ಸ್ನ್ಯಾಪ್ ಇಂಕ್ಗೆ ಸೇರಲು ಭಾರತದ ಮುಖ್ಯಸ್ಥ ಹುದ್ದೆಯಿಂದ ರಾಜೀನಾಮೆ ನೀಡಿದ ನಂತರ ಸಂಧ್ಯಾ ಅವರ ನೇಮಕವಾಗಿದೆ. ಮೆಟಾದ ಭಾರತದ ಕಾರ್ಯಾಚರಣೆಗಳ ಮುಖ್ಯಸ್ಥರಾಗಿದ್ದ ಅಜಿತ್ ಮೋಹನ್ ಅವರು ನವೆಂಬರ್ 3ರಂದು ರಾಜೀನಾಮೆ ನೀಡಿದ್ದರು. ಭಾರತದಲ್ಲಿ ಮೆಟಾ ಪ್ಲಾಟ್ಫಾರ್ಮ್ನ ಸಾರ್ವಜನಿಕ ನೀತಿ ನಿರ್ದೇಶಕ ರಾಜೀವ್ ಅಗರ್ವಾಲ್ ಕೂಡ ಈ ವಾರದ ಆರಂಭದಲ್ಲಿ ರಾಜೀನಾಮೆ ನೀಡಿದ್ದರು.
ಸಂಧ್ಯಾ ಅವರು ಅವರು ಜನವರಿ 1 2023 ರಂದು ತಮ್ಮ ಹೊಸ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರೆ. ಅವರು ಮೆಟಾ ಎಪಿಎಸಿಯ ಉಪಾಧ್ಯಕ್ಷ ಡಾನ್ ನಿಯರಿ ಅವರಿಗೆ ವರದಿ ಮಾಡಲಿದ್ದಾರೆ ಹಾಗೂ ಎಪಿಎಸಿ ನಾಯಕತ್ವದ ತಂಡದ ಭಾಗವಾಗುತ್ತಾರೆ. ಡಾನ್ ನಿಯರಿ ಇಂಡಿಯಾ ಆರ್ಗ್ ಮತ್ತು ಕಾರ್ಯತಂತ್ರವನ್ನು ಮುನ್ನಡೆಸಲು ಭಾರತಕ್ಕೆ ಹಿಂತಿರುಗುತ್ತಾರೆ.

ಸಂಧ್ಯಾ ದೇವನಾಥನ್ ಅವರು ಕಂಪೆನಿಯ ಭಾರತದ ಕಾರ್ಯಾಚರಣೆಗಳನ್ನು ಮುನ್ನೆಡೆಸಲಿದ್ದಾರೆ. ಅಲ್ಲದೆ ಭಾರತದ ಪ್ರಮುಖ ಬ್ರ್ಯಾಂಡ್ಗಳು ರಚನೆಕಾರರು, ಜಾಹೀರಾತುದಾರರು ಮತ್ತು ಪಾಲುದಾರರೊಂದಿಗೆ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುತ್ತಾರೆ. ಸಂಧ್ಯಾ ಅವರಿಗೆ 22 ವರ್ಷಗಳ ಬ್ಯಾಂಕಿಂಗ್, ಪೇಮೆಂಟ್ಸ್ ಮತ್ತು ತಂತ್ರಜ್ಞಾನದಲ್ಲಿ ಅಂತಾರಾಷ್ಟ್ರೀಯ ವೃತ್ತಿ ಅನುಭವವಿದ್ದು ಜಾಗತಿಕ ವ್ಯಾಪಾರ ಮುಖ್ಯಸ್ಥರಾಗಿದ್ದರು.
2016ರಲ್ಲಿ ಮೆಟಾಗೆ ಸೇರಿದ್ಧ ಸಂಧ್ಯಾ ಅವರು ಸಿಂಗಪುರ ಮತ್ತು ವಿಯೆಟ್ನಾಂ ವ್ಯವಹಾರಗಳು ಮತ್ತು ತಂಡಗಳು ಮತ್ತು ಆಗ್ನೇಯ ಏಷ್ಯಾದಲ್ಲಿ ಮೆಟಾದ ಇ-ಕಾಮರ್ಸ್ ಉಪಕ್ರಮಗಳನ್ನು ನಿರ್ಮಿಸಲು ಸಹಾಯ ಮಾಡಿದರು. 2020 ರಲ್ಲಿ ಅವರು ಎಪಿಎಸಿಗಾಗಿ ಗೇಮಿಂಗ್ ನೇತೃತ್ವ ವಹಿಸಿದ್ದರು. ಇದು ಮೆಟಾ ಕಂಪೆನಿಯಲ್ಲಿ ಪ್ರಮುಖ ಸ್ಥಾನವಾಗಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications