ಅಂಬಾನಿ ಒಪ್ಪಂದದ ಪರಿಣಾಮ: ಭಾರತದ ತೈಲ ಪೂರೈಕೆಯಲ್ಲಿ ಮೊದಲ ಸ್ಥಾನಕ್ಕೆ ಮರಳಿದ ಸೌದಿ
ನವದೆಹಲಿ, ಆಗಸ್ಟ್ 15: ಭಾರತಕ್ಕೆ ಅತಿ ಹೆಚ್ಚು ತೈಲ ಪೂರೈಕೆ ಮಾಡುವ ದೇಶಗಳ ಪಟ್ಟಿಯಲ್ಲಿ ಸೌದಿ ಅರೇಬಿಯಾ ಮೊದಲ ಸ್ಥಾನವನ್ನು ಮರಳಿ ಪಡೆದುಕೊಳ್ಳಲಿದೆ.
ಸಾಂಪ್ರದಾಯಿಕವಾಗಿ ಭಾರತಕ್ಕೆ ಅತಿ ಹೆಚ್ಚು ತೈಲ ರಫ್ತು ಮಾಡುವುದು ಸೌದಿ ಅರೇಬಿಯಾ. ಆದರೆ, ಕಳೆದ ಎರಡು ಹಣಕಾಸು ವರ್ಷಗಳಿಂದ ಅದು ಈ ಸ್ಥಾನವನ್ನು ಕಳೆದುಕೊಂಡಿತ್ತು. ಇರಾಕ್, ಭಾರತಕ್ಕೆ ಅತಿ ಹೆಚ್ಚು ತೈಲ ರಫ್ತು ಮಾಡುತ್ತಿತ್ತು.
ಸೌದಿ ಅರೇಬಿಯಾದ ತೈಲ ಕಂಪೆನಿ ಅರಾಮ್ಕೋ, ಇತ್ತೀಚೆಗೆ ರಿಲಯನ್ಸ್ ಇಂಡಸ್ಟ್ರೀಸ್ನ ಆಯಿಲ್-ಟು-ಕೆಮಿಕಲ್ ಉದ್ಯಮದ ಶೇ 20ರಷ್ಟು ಷೇರುಗಳನ್ನು ಖರೀದಿಸಿದೆ. ಇದರಿಂದ ಜಗತ್ತಿನ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ತೈಲ ಮಾರುಕಟ್ಟೆ ಎಂದೇ ಪರಿಗಣಿಸಲಾಗಿರುವ ಭಾರತಕ್ಕೆ ಅತಿ ಹೆಚ್ಚು ತೈಲ ಪೂರೈಕೆ ಮಾಡುವ ದೇಶಗಳ ಸಾಲಿನಲ್ಲಿ ಮುಂಚೂಣಿಯ ಸ್ಥಾನವನ್ನು ಸೌದಿ ಅರೇಬಿಯಾ ಮರಳಿ ಪಡೆದುಕೊಳ್ಳಲಿದೆ.

ಅರಾಮ್ಕೋ ಕಂಪೆನಿಯು ರಿಲಯನ್ಸ್ನ ತೈಲದಿಂದ ರಾಸಾಯನಿಕದವರೆಗಿನ ವ್ಯವಹಾರದಲ್ಲಿ ಶೇ 20ರಷ್ಟು ಅಂದರೆ, ಸುಮಾರು 75 ಬಿಲಿಯನ್ ಮೌಲ್ಯದ ಷೇರುಗಳನ್ನು ಖರೀದಿ ಮಾಡಿದೆ. ಜತೆಗೆ ದಿನಕ್ಕೆ 5,00,000 ಬ್ಯಾರಲ್ನಂತೆ ವರ್ಷಕ್ಕೆ 25 ಮಿಲಿಯನ್ ಟನ್ ಕಚ್ಚಾ ತೈಲ ಪೂರೈಕೆ ಮಾಡುವ ಒಪ್ಪಂದಕ್ಕೆ ಸಹಿಹಾಕಿದೆ.
ಪ್ರತಿ ದಿನ 5,00,000 ಬ್ಯಾರಲ್ ಕಚ್ಚಾತೈಲ ಪೂರೈಕೆ ಮಾಡುವುದು ರಿಲಯನ್ಸ್ನ ಒಟ್ಟಾರೆ ಕಚ್ಚಾತೈಲ ಖರೀದಿಯ ಶೇ 40ರಷ್ಟನ್ನು ಸರಿದೂಗಿಸುತ್ತದೆ. ಇದು ಅದು ಖರೀದಿ ಮಾಡಿದ ಷೇರುಗಳ ಮೌಲ್ಯಕ್ಕಿಂತಲೂ ಅಧಿಕ ಪ್ರಮಾಣದಲ್ಲಿದೆ. ರಿಲಯನ್ಸ್ಗೆ ಶೇ 20ರಷ್ಟು ಕಚ್ಚಾತೈಲದ ಅಗತ್ಯವನ್ನು ಈ ಮೊದಲು ಅದು ಪೂರೈಸುತ್ತಿತ್ತು.
2018-19ನೇ ಸಾಲಿನಲ್ಲಿ ಸೌದಿ ಅರೇಬಿಯಾ, ಭಾರತಕ್ಕೆ 40.33 ಮಿಲಿಯನ್ ಟನ್ ಕಚ್ಚಾತೈಲವನ್ನು ಪೂರೈಕೆ ಮಾಡಿತ್ತು. ಇರಾಕ್ 46.61 ಮಿಲಿಯನ್ ಟನ್ ಕಚ್ಚಾತೈಲ ಸರಬರಾಜು ಮಾಡಿತ್ತು.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್












Click it and Unblock the Notifications