ಎಸ್ಬಿಐ ಎಟಿಎಂ ಬಳಕೆದಾರರೇ ಗಮನಿಸಿ: ಎಸ್ಬಿಐನಿಂದ ಹೊಸ ವೈಶಿಷ್ಟ್ಯ ಪರಿಚಯ
ನವದೆಹಲಿ, ಸೆಪ್ಟೆಂಬರ್ 3: ಭಾರತದ ಅತಿ ದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ಬಿಐ) ಗ್ರಾಹಕರ ಸುರಕ್ಷತೆಗಾಗಿ ಹೊಸ ವೈಶಿಷ್ಟ್ಯವೊಂದನ್ನು ಪರಿಚಯಿಸಿದೆ. ನೀವು ಎಟಿಎಂಗೆ ಹೋಗಿ ನಿಮ್ಮ ಬ್ಯಾಲೆನ್ಸ್ ಅಥವಾ ಮಿನಿ ಸ್ಟೇಟ್ಮೆಂಟ್ ಪರಿಶೀಲಿಸಲು ಬಯಸಿದರೆ, ತಕ್ಷಣವೇ ಎಸ್ಬಿಐ ಎಸ್ಎಂಎಸ್ ಕಳುಹಿಸುವ ಮೂಲಕ ನಿಮ್ಮನ್ನು ಎಚ್ಚರಿಸುತ್ತದೆ.
ಕೊರೊನಾವೈರಸ್ ಸಾಂಕ್ರಾಮಿಕದ ಮಧ್ಯೆ ಹೆಚ್ಚುತ್ತಿರುವ ಎಟಿಎಂ ವಂಚನೆಗಳನ್ನು ತಡೆಯಲು ಈ ಸೌಲಭ್ಯವು ಖಚಿತಪಡಿಸುತ್ತದೆ. ಬ್ಯಾಂಕ್ ತನ್ನ ಗ್ರಾಹಕರಿಗೆ ಜಾಗರೂಕರಾಗಿರಬೇಕು ಮತ್ತು ಬ್ಯಾಲೆನ್ಸ್ ವಿಚಾರಣೆ ಅಥವಾ ಮಿನಿ-ಸ್ಟೇಟ್ಮೆಂಟ್ಗೆ ಸಂಬಂಧಿಸಿದ ಎಸ್ಎಂಎಸ್ ಎಚ್ಚರಿಕೆಗಳನ್ನು ನಿರ್ಲಕ್ಷಿಸದಂತೆ ಎಚ್ಚರಿಸಿದೆ.
"ಈಗ ನಾವು ಎಟಿಎಂಗಳ ಮೂಲಕ ಬ್ಯಾಲೆನ್ಸ್ ಪರಿಶೀಲನೆ ಅಥವಾ ಮಿನಿ ಸ್ಟೇಟ್ಮೆಂಟ್ಗಾಗಿ ವಿನಂತಿಯನ್ನು ಸ್ವೀಕರಿಸುವಾಗ, ನಾವು ಎಸ್ಎಂಎಸ್ ಕಳುಹಿಸುವ ಮೂಲಕ ನಮ್ಮ ಗ್ರಾಹಕರನ್ನು ಎಚ್ಚರಿಸುತ್ತೇವೆ, ಇದರಿಂದಾಗಿ ಅವರು ವಹಿವಾಟನ್ನು ಪ್ರಾರಂಭಿಸದಿದ್ದರೆ ತಕ್ಷಣವೇ ಅವರ ಡೆಬಿಟ್ ಕಾರ್ಡ್ ಅನ್ನು ನಿರ್ಬಂಧಿಸಬಹುದು" ಎಂದು ದೇಶದ ಅತಿದೊಡ್ಡ ಬ್ಯಾಂಕ್ ಎಸ್ಬಿಐ ಟ್ವಿಟ್ಟರ್ನಲ್ಲಿ ಹೇಳಿದೆ.

ಎಸ್ಬಿಐ ತನ್ನ ಗ್ರಾಹಕರಿಗೆ ಎಚ್ಚರಿಕೆ ವಹಿಸುವಂತೆ ಕೇಳಿದೆ ಮತ್ತು ಬ್ಯಾಲೆನ್ಸ್ ಪರಿಶೀಲಿಸಿಲ್ಲ, ಮಿನಿ ಸ್ಟೇಟ್ಮೆಂಟ್ ಪಡೆದಿಲ್ಲ ಎಂದಾರೆ ಬ್ಯಾಂಕ್ಗಳಿಗೆ ತಿಳಿಸಿ ಎಂದಿದೆ. ಇದರಿಂದ ತಕ್ಷಣವೇ ನಿಮ್ಮ ಕಾರ್ಡ್ನ್ನು ನಿಷೇಧಿಸಲು ಸಾಧ್ಯವಾಗುತ್ತದೆ ಎಂದು ಎಸ್ಬಿಐ ಹೇಳಿದೆ.
ಈಗಾಗಲೇ ಎಸ್ಬಿಐ ಯೋನೊ ಆ್ಯಪ್ ಮೂಲಕ ಒಟಿಪಿ ಆಧರಿಸಿ ಡೆಬಿಟ್ ಕಾರ್ಡ್ ಇಲ್ಲದೆಯೇ ಹಣವನ್ನು ವಿತ್ಡ್ರಾ ಮಾಡುವ ವಿಶೇಷ ಸೌಲಭ್ಯವನ್ನು ಗ್ರಾಹಕರಿಗೆ ಒದಗಿಸಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications