SBI VRS Scheme 2020: 30,000 ಉದ್ಯೋಗಿಗಳಿಗೆ ವಿಆರ್ಎಸ್ ಯೋಜನೆ ಸಿದ್ಧತೆ
ನವದೆಹಲಿ, ಸೆಪ್ಟೆಂಬರ್ 07: ದೇಶದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ಬಿಐ) ಮಾನವ ಸಂಪನ್ಮೂಲ ಮತ್ತು ಬ್ಯಾಂಕಿನ ವೆಚ್ಚವನ್ನು ಉಳಿಸಲು ಸ್ವಯಂಪ್ರೇರಿತ ನಿವೃತ್ತಿ ಯೋಜನೆ (ವಿಆರ್ಎಸ್) ಸಿದ್ಧಪಡಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.
ಎಸ್ಬಿಐ 2020ರ ವಿಆರ್ಎಸ್ ಯೋಜನೆಗೆ ಕನಿಷ್ಠ 30,190 ಉದ್ಯೋಗಿಗಳು ಅರ್ಹರಾಗುತ್ತಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
2020ರ ಮಾರ್ಚ್ ಅಂತ್ಯಕ್ಕೆ ಬ್ಯಾಂಕ್ನ ಒಟ್ಟು ಸಿಬ್ಬಂದಿ ಸಂಖ್ಯೆ 2.49 ಲಕ್ಷ ಇತ್ತು. ಹೀಗಾಗಿ ಬ್ಯಾಂಕಿನ ವೆಚ್ಚವನ್ನ ತಗ್ಗಿಸಲು ವಿಆರ್ಎಸ್ ಕರಡು ಯೋಜನೆ ಸಿದ್ಧಪಡಿಸಿದ್ದು, ಆಡಳಿತ ಮಂಡಳಿಯ ಒಪ್ಪಿಗೆಗಾಗಿ ಕಾಯಲಾಗುತ್ತಿದೆ.

ಇನ್ನು 25 ವರ್ಷ ಸೇವೆ ಪೂರ್ಣಗೊಳಿಸಿರುವವರು ಅಥವಾ 55 ವರ್ಷ ಆಗಿರುವವರು ಈ ಯೋಜನೆಗೆ ಅರ್ಹರಾಗುತ್ತಾರೆ. ವಿಆರ್ಎಸ್ಗೆ ಅರ್ಹರಾಗಿರುವ ಸಿಬ್ಬಂದಿಯ ಪೈಕಿ ಶೇಕಡಾ 30ರಷ್ಟು ಮಂದಿ ಸ್ವಯಂ ನಿವೃತ್ತಿಯನ್ನು ಆಯ್ಕೆ ಮಾಡಿಕೊಂಡರೆ ಅದರಿಂದ ಬ್ಯಾಂಕ್ಗೆ 1,662.86 ಕೋಟಿ ಉಳಿತಾಯ ಆಗಲಿದೆ. 2020ರ ಜುಲೈನ ವೇತನದ ಆಧಾರದ ಮೇಲೆ ಈ ಮೊತ್ತವನ್ನು ಅಂದಾಜು ಮಾಡಲಾಗಿದೆ.
ವಿಆರ್ಎಸ್ ಯೋಜನೆಯು ಡಿಸೆಂಬರ್ 1ರಂದು ಪ್ರಾರಂಭವಾಗಲಿದ್ದು, ಫೆಬ್ರವರಿ ಕೊನೆಯ ತನಕ ಅವಕಾಶ ಇರುತ್ತದೆ. ಯಾರು ವಿಆರ್ಎಸ್ ಯೋಜನೆ ಆಯ್ದುಕೊಳ್ಳುತ್ತಾರೋ ಅಂಥವರಿಗೆ ನಿವೃತ್ತಿ ಆಗುವ ತನಕದ ಬಾಕಿ ಅವಧಿಗೆ ಶೇಕಡಾ 50ರಷ್ಟು ಎಕ್ಸ್ ಗ್ರೇಷಿಯಾ ಪಾವತಿಸಲಾಗುತ್ತದೆ. ಗರಿಷ್ಠ ಹದಿನೆಂಟು ತಿಂಗಳಿಗೆ ಇದು ಅನ್ವಯ ಆಗುತ್ತದೆ. ಇದಕ್ಕಾಗಿ ಕೊನೆಯದಾಗಿ ಅವರು ಪಡೆದ ಸಂಬಳವನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ಬ್ಯಾಂಕ್ ಹೇಳಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications