ಜೇನು ತುಪ್ಪ ಬ್ರಾಂಡ್ಗಳ ಶುದ್ಧತೆ ಪ್ರಶ್ನಿಸಿ ಸುಪ್ರೀಂನಲ್ಲಿಅರ್ಜಿ
ನವದೆಹಲಿ, ಏಪ್ರಿಲ್ 20: ಭಾರತೀಯ ಮಾರುಕಟ್ಟೆಗಳಲ್ಲಿ ಜೇನುತುಪ್ಪದ ಉತ್ಪನ್ನಗಳ ಮಾರಾಟದ ಸತ್ಯಾಸತ್ಯತೆ ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವಂತೆ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ನೀಡಿದೆ.
ವಿವಿಧ ಜೇನು ಬ್ರಾಂಡ್ಗಳು ಅಥವಾ ಉತ್ಪನ್ನಗಳ ತನಿಖೆ ಅಥವಾ ಪರೀಕ್ಷಾ ವರದಿಗಳನ್ನು ಉನ್ನತ ನ್ಯಾಯಾಲಯದ ಮುಂದೆ ಸಲ್ಲಿಸುವಂತೆ ಕಂಪನಿಗಳಿಗೆ ನಿರ್ದೇಶನ ನೀಡುವಂತೆಯೂ ಮನವಿಯಲ್ಲಿ ಕೋರಲಾಗಿತ್ತು.
ಭಾರತೀಯ ಭ್ರಷ್ಟಾಚಾರ ವಿರೋಧಿ ಒಕ್ಕೂಟ ಟ್ರಸ್ಟ್ ಸಲ್ಲಿಸಿದ್ದ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ, ನ್ಯಾಯಮೂರ್ತಿಗಳಾದ ಎ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರಿದ್ದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು.

''ವಿಜ್ಞಾನ ಮತ್ತು ಪರಿಸರ ಕೇಂದ್ರದ (ಸಿಎಸ್ಇ) ಸಂಶೋಧಕರ ಪ್ರಕಾರ, ಭಾರತದ ಪ್ರಮುಖ ಜೇನುತುಪ್ಪ ಬ್ರಾಂಡ್ಗಳಲ್ಲಿ ಚೀನಾದಿಂದ ಮಾರ್ಪಡಿಸಿದ ಸಕ್ಕರೆ ಬೆರೆಸಲಾಗುತ್ತಿದೆ. ಕಲಬೆರಕೆ ಕಂಡುಹಿಡಿಯಲು ಬಳಸುವ ಕೆಲವು ಮೂಲಭೂತ ಪರೀಕ್ಷೆಗಳನ್ನು ತಪ್ಪಿಸಲಾಗುತ್ತಿದೆ, ಕೊವಿಡ್ 19 ಸಂದರ್ಭದ ಲಾಭ ಪಡೆದು ಆರೋಗ್ಯ ಹದಗೆಡದಂತೆ ತಡೆಯಬೇಕು'' ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಡಾಬರ್, ಪತಂಜಲಿ ಹಾಗೂ ಝಂಡು ಪ್ರಮುಖ ಸಂಸ್ಥಗಳೇ ಕಳಪೆ ಜೇನುತುಪ್ಪ ಮಾರಾಟ ಮಾಡಿವೆ, ಮೂಲಭೂತ ಪರಿಶುದ್ಧ ಪರೀಕ್ಷೆಗಳನ್ನು ನಡೆಸಿಲ್ಲ ಎಂಬ ಆರೋಪವನ್ನು ಅಲ್ಲಗೆಳೆದಿರುವ ಪ್ರಮುಖ ಸಂಸ್ಥೆಗಳ ವಕ್ತಾರರು FSSAI ನೀಡಿರುವ ಗುಣಮುಖ ಮಟ್ಟ ಪರೀಕ್ಷೆಗೆ ಬದ್ಧವಾಗಿದೆ. ಎನ್ ಎಂ ಆರ್ ಸ್ಪೆಕ್ಟ್ರೋಸ್ಕೋಪಿ ಪರೀಕ್ಷೆಯಲ್ಲಿ 70 ಸ್ಯಾಂಪಲ್ ಪೈಕಿ 3 ಮಾತ್ರ ಪಾಸ್ ಆಗಿದೆ ಎಂಬ ವರದಿಯನ್ನು ತಳ್ಳಿ ಹಾಕಿದ್ದಾರೆ.(ಮಾಹಿತಿ ಕೃಪೆ: ಬಾರ್ ಅಂಡ್ ಬೆಂಚ್)
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications