Hindenburg Report: ಅದಾನಿ ಷೇರು ಹಗರಣದಲ್ಲಿ ಸೆಬಿ ಅಧ್ಯಕ್ಷೆ ಭಾಗಿ; ಹಿಂಡೆನ್ಬರ್ಗ್ ಗಂಭೀರ ಆರೋಪ
ಭಾರತಕ್ಕೆ ಸಂಬಂಧಿಸಿದಂತೆ ದೊಡ್ಡ ಸುದ್ದಿ ಕೊಡುವುದಾಗಿ ಟ್ವೀಟ್ ಮಾಡಿ ಕುತೂಹಲ ಮೂಡಿಸಿದ್ದ ಯುಎಸ್ ಶಾರ್ಟ್ ಸೆಲ್ಲರ್ ಹಿಂಡೆನ್ಬರ್ಗ್ ರಿಸರ್ಚ್ ಇದೀಗ ಸೆಬಿ ಅಧ್ಯಕ್ಷೆಯ ವಿರುದ್ಧವೇ ಗಂಭೀರ ಆರೋಪ ಮಾಡಿದೆ. ಅದಾನಿ ಷೇರು ಹಗರಣದಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಪುರಿ ಬುಚ್ ಮತ್ತು ಅವರ ಪತಿ ದವಾಳ್ ಬುಚ್ ನೇರವಾಗಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದೆ. ಇದು ಭಾರತೀಯ ಷೇರು ಮಾರುಕಟ್ಟೆ ವಲಯದಲ್ಲಿ ತೀವ್ರ ಸಂಚಲನ ಮೂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಹಿಂಡೆನ್ಬರ್ಗ್ ಈ ಬಗ್ಗೆ ಟ್ವೀಟ್ ಮಾಡಿದ್ದು, "ಅದಾನಿ ಗ್ರೂಪ್ನ ವಿದೇಶಿ ಷೇರುಗಳಲ್ಲಿ ಸೆಬಿ ಅಧ್ಯಕ್ಷರು ಪಾಲು ಹೊಂದಿದ್ದಾರೆ" ಎಂದು ಹೇಳಿದರು. ಇದು ಅದಾನು ಸಂಸ್ಥೆಯ ಮೇಲೆ ಹಿಂಡೆನ್ಗ್ರೂಪ್ ಮಾಡುತ್ತಿರುವು ಎರಡನೇ ಗಂಭೀರ ಆರೋಪವಾಗಿದೆ. ಈ ಮೊದಲು ಕೂಡ 2023ರ ಜನವರಿಯಲ್ಲಿ ಅದಾನಿ ಗ್ರೂಪ್ ಷೇರು ಮೌಲ್ಯಗಳನ್ನು ಕೃತಕವಾಗಿ ಏರಿಕೆ ಮಾಡಲಾಗುತ್ತಿದೆ ಎಂದು ಆರೋಪ ಮಾಡಿತ್ತು.

ಯುಎಸ್ ಮೂಲದ ಸಂಶೋಧನಾ ಸಂಸ್ಥೆ ಹಿಂಡೆನ್ಬರ್ಗ್ ಅದಾನಿ ಗ್ರೂಪ್ ಮೇಲಿನ ಆರೋಪಗಳನ್ನು ಮುಂದುವರೆಸಿದೆ. "ಅದಾನಿ ಗ್ರೂಪ್ನ ಶಂಕಿತ ವಿದೇಶ ಹೂಡಿಕೆದಾರರ ವಿರುದ್ಧ ವಿರುದ್ಧ ಮಹತ್ವದ ಕ್ರಮ ಕೈಗೊಳ್ಳದೇ ಇರಲು ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಕೂಡ ಶಾಮೀಲಾಗಿರುವ ಸಾಧ್ಯತೆ ಇದೆ ಎನ್ನುವ ಅನುಮಾನ ನಮ್ಮದು, ಅವರು ಗೌತಮ್ ಅದಾನಿ ಸಹೋದರ ವಿನೋದ್ ಅದಾನಿ ಬಳಕೆ ಮಾಡಿರುವಷ್ಟೇ ಗಣವನ್ನು ಬಳಕೆ ಮಾಡಿರುವುದು ಅನುಮಾನಕ್ಕೆ ಕಾರಣ" ಎಂದು ಹೇಳಿದೆ.
ವಿಸ್ಲ್ಬ್ಲೋವರ್ ಡಾಕ್ಯುಮೆಂಟ್ಗಳನ್ನು ಉಲ್ಲೇಖಿಸಿರುವ ಹಿಂಡೆನ್ಬರ್ಗ್ "ಸೆಬಿಯ ಅಧ್ಯಕ್ಷರು ಅದಾನಿ ಹಣದ ಹಗರಣದಲ್ಲಿ ಬಳಸಲಾದ ಅಸ್ಪಷ್ಟ ವಿದೇಶಿ ಘಟಕಗಳಲ್ಲಿ ಪಾಲನ್ನು ಹೊಂದಿದ್ದಾರೆ." ಎಂದು ಆರೋಪ ಮಾಡಿದೆ. ಈ ಬಗ್ಗೆ ಸೆಬಿ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications