SEBI: ಸೆಬಿ ಮುಖ್ಯಸ್ಥೆ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ ಕಾಂಗ್ರೆಸ್
ಸೆಬಿ ಅಧ್ಯಕ್ಷೆ ಮಾಧವಿ ಪುರಿ ಬುಚ್ ವಿರುದ್ಧ ಕಾಂಗ್ರೆಸ್ ಆರೋಪಗಳು ಮುಂದುವರೆದಿದೆ. ಇದೀಗ ಕಾಂಗ್ರೆಸ್ ಮತ್ತಷ್ಟು ಗಂಭೀರ ಆರೋಪಗಳನ್ನು ಮಾಡಿದ್ದು, ಸೆಬಿ ಅಧ್ಯಕ್ಷೆಯನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ಇದೆ. ಮಾಧವಿ ಬುಚ್ ಅವರು ಮಹಿಂದ್ರಾ & ಮಹಿಂದ್ರಾ, ಐಸಿಐಸಿಐ, ಡಾ. ರೆಡ್ಡಿ ಮತ್ತು ಇನ್ನೂ ಮೂರು ಲಿಸ್ಟೆಡ್ ಕಂಪನಿಗಳಿಂದ ಕೋಟಿ ಕೋಟಿ ಗಳಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.
ಮಾಧವಿ ಪುರಿ ಬುಚ್ ಅವರು ತಮ್ಮ ಒಡೆತನದ ಅಗೋರಾ ಅಡ್ವೈಸರಿ ಪ್ರೈವೇಟ್ ಲಿಮಿಟೆಡ್ ಮೂಲಕ ಮಹೀಂದ್ರಾ & ಮಹೀಂದ್ರಾ ಲಿಮಿಟೆಡ್, ಪಿಡಿಲೈಟ್ ಲಿಮಿಟೆಡ್ ಮತ್ತು ಡಾ ರೆಡ್ಡೀಸ್ ಲ್ಯಾಬೊರೇಟರೀಸ್ ಲಿಮಿಟೆಡ್ ಸೇರಿದಂತೆ ಪಟ್ಟಿ ಮಾಡಲಾದ ಕಂಪನಿಗಳಿಂದ ಸಲಹಾ ಶುಲ್ಕವನ್ನು ಗಳಿಸಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ನಿಯಮಗಳಿಗೆ ಇದು ವಿರುದ್ಧವಾಗಿದೆ ಎಂದು ಅದು ಹೇಳಿದೆ.

2016-17 ಮತ್ತು 2023-24ರ ನಡುವೆ ಅಗೋರಾ ಈ ಕಂಪನಿಗಳಿಂದ ₹ 2.95 ಕೋಟಿ ಆದಾಯ ಗಳಿಸಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಇದರಲ್ಲಿ 88% ಪ್ರತಿಶತ ಶುಲ್ಕವು ಮಹಿಂದ್ರಾ ಗ್ರೂಪ್ನಿಂದ ಬಂದಿದೆ ಎಂದು ಹೇಳಿದೆ. ಮಾಧವಿ ಪುರಿ ಬುಚ್ ಅವರ ಪತಿ ಧವಲ್ ಬುಚ್ ಕೂಡ ಈ ಸಮಯದಲ್ಲಿ ಮಹಿಂದ್ರಾ ಸಮೂಯಕ್ಕೆ ಸಲಹೆ ಕೊಡುತ್ತಿದ್ದರು ಎಂದು ಕಾಂಗ್ರೆಸ್ ಆರೋಪ ಮಾಡಿದೆ.
ಬುಚ್ ಅವರು ಅಗೋರಾ ಅಡ್ವೈಸರಿಯ 99% ಪಾಲನ್ನು ಹೊಂದಿದ್ದಾರೆ. ಸೆಬಿ ಉದ್ಯೋಗಿಗಳ ಸೇವೆ ನಿಯಮಗಳು 2001ರ ಪ್ರಕಾರ, ಸಂಸ್ಥೆಯ ಪೂರ್ಣ ಸಮಯದ ಉದ್ಯೋಗಿಗಳು ಹೊರಗಿನ ಸಂಸ್ಥೆಗಳಿಂದ ಪ್ರಯೋಜನ ಪಡೆಯುವುದನ್ನು ನಿಷೇಧಿಸಲಾಗಿದೆ.
ಕಾಂಗ್ರೆಸ್ ಆರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಮಹೀಂದ್ರಾ ಸಮೂಹದ ವಕ್ತಾರರು, ತಮ್ಮ ವಿರುದ್ಧದ ಆರೋಪಗಳು ಸತ್ಯಕ್ಕೆ ದೂರವಾದವು ಎಂದು ಹೇಳಿದ್ದಾರೆ. ನಾವು ಯಾವುದೇ ಸಮಯದಲ್ಲಿ ಸೆಬಿಗೆ ಮನವಿ ಮಾಡಿಲ್ಲ. ಕಾರ್ಪೊರೇಟ್ ಆಡಳಿತದಲ್ಲಿ ಗುಣಮಟ್ಟವನ್ನು ಕಾಪಾಡುತ್ತೇವೆ, ಇದೆಲ್ಲಾ ತಪ್ಪುದಾರಿಗೆ ಎಳೆಯುವ ಆರೋಪಗಳಾಗಿದ್ದು, ಸತ್ಯಕ್ಕೆ ದೂರವಾದವು ಎಂದು ಹೇಳಿದೆ.
ಮಹೀಂದ್ರಾ ಸಮೂಹವು ಬುಚ್ನ ಸಂಸ್ಥೆ ಅಗೋರಾ ಮತ್ತು ಅವರ ಪತಿಗೆ ಪಾವತಿಸಿದ ಸಲಹಾ ಶುಲ್ಕದ ಹೊರತಾಗಿ, ಧವಲ್ ಬುಚ್ ಹೆಚ್ಚುವರಿಯಾಗಿ ₹4.78 ಕೋಟಿಯನ್ನು ಮಹೀಂದ್ರಾ ಗುಂಪಿನಿಂದ ಸಂಬಳದ ರೂಪದಲ್ಲಿ ಪಡೆದಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.
ಈ ಮೊದಲು ಮಾಧವಿ ಪುರಿ ಅವರು ತಮ್ಮ ಹಿಂದಿನ ಸಂಸ್ಥೆಯಾಗಿದ್ದ ಐಸಿಐಸಿಐ ಸಮೂಹದಿಂದ ಹಣ ಪಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಸೆಬಿ ಅಧ್ಯಕ್ಷೆ ಮೇಲೆ ಪದೇ ಪದೇ ಆರೋಪ ಕೇಳಿ ಬರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?










Click it and Unblock the Notifications