ಸೆಬಿ ನಿಯಮ ಉಲ್ಲಂಘನೆ: ಅಂಬಾನಿ ಕುಟುಂಬಕ್ಕೆ 25ಕೋಟಿ ರು ದಂಡ
ಮುಂಬೈ, ಏಪ್ರಿಲ್ 8: ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ) ನಿಯಮಾವಳಿಗಳ ಉಲ್ಲಂಘನೆ ಮಾಡಿರುವ ಮುಕೇಶ್ ಮತ್ತು ಅನಿಲ್ ಅಂಬಾನಿ ಹಾಗೂ ಅವರ ಕುಟುಂಬ ಸದಸ್ಯರಿಗೆ 25 ಕೋಟಿ ರೂ ದಂಡ ವಿಧಿಸಲಾಗಿದೆ.
ಜನವರಿ 2000ರಲ್ಲಿ 38 ಹಂಚಿಕೆ ಘಟಕಗಳಿಗೆ ಪ್ರತಿ ಷೇರಿಗೆ 75 ರೂ ದರದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ನ 12 ಕೋಟಿ ಷೇರುಗಳ ವಿತರಣೆಗೆ ಸಂಬಂಧಿಸಿದಂತೆ ಅಕ್ರಮ ನಡೆದಿದೆ ಎಂದು ದೂರು ಬಂದಿತ್ತು. 2011 ರ ಸೆಬಿ ನಿಯಮಾವಳಿಗಳ ಉಲ್ಲಂಘನೆ, ಸ್ವಾಧೀನದ ನಿಯಮಗಳ ನಿಯಂತ್ರಣ ಸಂಖ್ಯೆ 11 (1) ರ ಪ್ರಕಾರ, ಸಾರ್ವಜನಿಕ ಪ್ರಕಟಣೆ ನೀಡದ ಹೊರತಾಗಿ ಮತದಾನದ ಹಕ್ಕಿನ ಶೇ.5ಕ್ಕೂ ಹೆಚ್ಚು ಹೆಚ್ಚುವರಿ ಷೇರುಗಳನ್ನು ಸ್ವಾಧೀನಪಡಿಸಿಕೊಳ್ಳಲು ಆರ್ಐಎಲ್ ಗೆ ನಿರ್ಬಂಧ ಹೇರಲಾಗಿತ್ತು.
ಆದರೆ, ಆರ್ಐಎಲ್ ಪ್ರವರ್ತಕರು ಮತ್ತು ಪರ್ಸನ್ಸ್ ಆಕ್ಟಿಂಗ್ ಇನ್ ಕನ್ಸರ್ಟ್ (ಪಿಎಸಿ) ಷೇರುಗಳನ್ನು ಸ್ವಾಧೀನಪಡಿಸಿಕೊಳ್ಳಲು ಯಾವುದೇ ಸಾರ್ವಜನಿಕ ಘೋಷಣೆ ಮಾಡದೆ, ಅಂಬಾನಿ ಕುಟುಂಬಸ್ಥರು 11(1)ರ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಸೆಬಿಯ ನ್ಯಾಯ ನಿರ್ಣಯ ಅಧಿಕಾರಿ ಕೆ ಸರವಣನ್ ಆದೇಶದಲ್ಲಿ ತಿಳಿಸಿದ್ದಾರೆ.

ಮುಕೇಶ್ ಅಂಬಾನಿ, ನೀತಾ ಅಂಬಾನಿ, ಅನಿಲ್ ಅಂಬಾನಿ, ಟೀನಾ ಅಂಬಾನಿ, ಮುಕೇಶ್ ಅಂಬಾನಿ ಮಕ್ಕಳಾದ ಆಕಾಶ್ ಮತ್ತು ಇಶಾ ಸೇರಿದಂತೆ 36 ಆರ್ಐಎಲ್ ಪ್ರವರ್ತಕರ ವಿರುದ್ಧ 2011 ರಲ್ಲಿ ನ್ಯಾಯ ನಿರ್ಣಯ ಪ್ರಕ್ರಿಯೆ ಆರಂಭಿಸಲಾಗಿತ್ತು. ಇದು ಉದ್ದೇಶಪೂರ್ವಕ ಆರೋಪ, ಅವಧಿ ಮೀರಿದ ನಿರ್ಣಯ ಎಂದು ಅಂಬಾನಿ ಕುಟುಂಬದವರು ನ್ಯಾಯ ನಿರ್ಣಯ ಅಧಿಕಾರಿ ಮುಂದೆ ವಾದಿಸಿದ್ದರು. ಆದರೆ, ನ್ಯಾಯ ನಿರ್ಣಯ ಅಧಿಕಾರಿ ಸರವಣನ್ ಅವರು 1995ರ ಸೆಬಿ ನಿಯಮಾವಳಿಗಳು 1956ರ ಕಂಪೆನಿ ಕಾಯಿದೆಯ ಉಲ್ಲಂಘನೆಯಾಗಿದೆ ಎಂದು ತಿಳಿಸಿ ರೂ.25 ಕೋಟಿ ದಂಡ ವಿಧಿಸಿದ್ದಾರೆ.(ಮಾಹಿತಿ ಕೃಪೆ: ಬಾರ್ ಅಂಡ್ ಬೆಂಚ್)
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications