Get Updates
Get notified of breaking news, exclusive insights, and must-see stories!

ಕೊರೊನಾ 2ನೇ ಅಲೆ ಆರ್ಥಿಕ ಪುನಶ್ಚೇತನಕ್ಕೆ ಅಪಾಯಕಾರಿ: ಆರ್‌ಬಿಐ ಗವರ್ನರ್

ನವದೆಹಲಿ, ಏಪ್ರಿಲ್ 23: ಕೊರೊನಾ ಎರಡನೇ ಅಲೆಯು ಭಾರತದ ಆರ್ಥಿಕ ಪುನಶ್ಚೇತನಕ್ಕೆ ಅಪಾಯಕಾರಿಯಾಗಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.

ಪ್ರಸಕ್ತ ಆರ್ಥಿಕ ಸಾಲಿನ ತ್ರೈಮಾಸಿಕ ವಿತ್ತೀಯ ಸಭೆಯಲ್ಲಿ ರೆಪೊ ದರ ಮತ್ತು ರಿವರ್ಸ್ ರೆಪೊ ದರವನ್ನು ಬದಲಾಯಿಸದೆ ಕಳೆದ ಆರ್ಥಿಕ ಸಾಲಿನ ಕೊನೆಯ ತ್ರೈಮಾಸಿಕದಷ್ಟೇ ಇರಿಸಿದೆ.

ಚಿಲ್ಲರೆ ಹಣದುಬ್ಬರ ಮತ್ತು ಕೊರೊನಾ ಎರಡನೇ ಅಲೆ ಎದ್ದ ನಂತರ ಉಂಟಾಗಿರುವ ಆರ್ಥಿಕ ಅನಿಶ್ಚಿತತೆ ಹಿನ್ನೆಲೆಯಲ್ಲಿ ಆರ್ ಬಿಐ ಈ ನಿರ್ಧಾರಕ್ಕೆ ಬಂದಿದೆ. 2021-22ನೇ ಸಾಲಿನಲ್ಲಿ ಹಣದುಬ್ಬರ ದರವನ್ನು ಶೇಕಡಾ 5ರಷ್ಟು ಆರ್‌ಬಿಐಯ ವಿತ್ತೀಯ ನೀತಿ ಸಮಿತಿ ಸದಸ್ಯರು ಅಂದಾಜು ಮಾಡಿದ್ದಾರೆ.

Second COVID-19 Wave Biggest Risk To Economic Recovery: RBI Governor

ದೇಶದಲ್ಲಿ ಪ್ರತಿದಿನ ಹೊಸ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ, ಸ್ಥಳೀಯ ಮಟ್ಟದಲ್ಲಿ ಮಿನಿ ಲಾಕ್‌ಡೌನ್ ಹೇರಲಾಗುತ್ತಿದೆ, ಇದರಿಂದ ವ್ಯಾಪಾರ-ವಹಿವಾಟು ಸಂಪರ್ಕ-ತೀವ್ರ ವಲಯಗಳ ಬೇಡಿಕೆಯನ್ನು ಕುಂಠಿತಗೊಳಿಸುತ್ತದೆ, ನಿಧಾನ ಬಳಕೆ ಬೇಡಿಕೆ ಮತ್ತು ದೊಡ್ಡ ಹೂಡಿಕೆಗಳು, ಬೆಳವಣಿಗೆಯನ್ನು ತಡೆಯುತ್ತದೆ ಎಂದು ವಿತ್ತೀಯ ಸಮಿತಿ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ.

ಬೇಡಿಕೆಗಳ ಪರಿಸ್ಥಿತಿಯನ್ನು ಸುಧಾರಿಸುವುದು, ಸರ್ಕಾರದಿಂದ ಹೂಡಿಕೆಯ ವರ್ಧನೆಯ ಕ್ರಮಗಳು ಬೆಳವಣಿಗೆಯ ನಿರೀಕ್ಷೆಗಳನ್ನು ಹುಸಿಮಾಡಿವೆ. ದೇಶಲ್ಲಿ ಕೋವಿಡ್-19 ಸೋಂಕಿನ ಸಂಖ್ಯೆ ವೇಗವಾಗಿ ವೃದ್ಧಿಸುತ್ತಿದೆ.

ಈ ಸಂದರ್ಭದಲ್ಲಿ ಕಳೆದ ವರ್ಷ ಲಾಕ್ ಡೌನ್ ನಂತರ ತೀವ್ರ ಕುಸಿತ ಕಂಡ ಆರ್ಥಿಕತೆಯನ್ನು ಪುನಶ್ಚೇತನಗೊಳಿಸುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ.

ಆರ್ಥಿಕ ಚೇತರಿಕೆಯನ್ನು ಪರಿಣಾಮಕಾರಿಯಾಗಿ ಭದ್ರಪಡಿಸುವುದು ಈ ಹೊತ್ತಿನ ಅಗತ್ಯವಾಗಿದ್ದು, ಈ ಮೂಲಕ ದೀರ್ಘ ಕಾಲಕ್ಕೆ ವಿಸ್ತಾರವಾಗಿ ಆರ್ಥಿಕ ಬೆಳವಣಿಗೆಯನ್ನು ಕಾಣಬಹುದಾಗಿದೆ ಎಂದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+