ಷೇರುಪೇಟೆಯಲ್ಲಿ ಕರಡಿ ಕುಣಿತ: ಸೆನ್ಸೆಕ್ಸ್ 900 ಪಾಯಿಂಟ್ಸ್ ಕುಸಿತ, ನಿಫ್ಟಿ 271 ಪಾಯಿಂಟ್ಸ್ ಇಳಿಕೆ
ನವದೆಹಲಿ, ಜನವರಿ 27: ಭಾರತೀಯ ಷೇರುಪೇಟೆಯಲ್ಲಿ ಬುಧವಾರ ಕರಡಿ ಕುಣಿತ ಜೋರಾಗಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಬರೋಬ್ಬರಿ 900ಕ್ಕೂ ಅಧಿಕ ಕುಸಿತ ಕಂಡಿದ್ದು, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 14,000 ಗಡಿಯಿಂದ ಕೆಳಗಿಳಿದಿದೆ.
ಬಿಎಸ್ಇ ಸೂಚ್ಯಂಕ ಸೆನ್ಸೆಕ್ಸ್ 937.66 ಪಾಯಿಂಟ್ಸ್ ಅಥವಾ ಶೇಕಡಾ 1.94ರಷ್ಟು ಕುಸಿದು 47,409 ಪಾಯಿಂಟ್ಸ್ಗೆ ತಲುಪಿದೆ. ಎನ್ಎಸ್ಇ ಸೂಚ್ಯಂಕ ನಿಫ್ಟಿ 271.4 ಪಾಯಿಂಟ್ಸ್ ಅಥವಾ ಶೇಕಡಾ 1.91ರಷ್ಟು ಇಳಿಕೆಗೊಂಡು 13,967.50 ಪಾಯಿಂಟ್ಸ್ಗೆ ಮುಟ್ಟಿದೆ. ಇಂದು 1053 ಷೇರುಗಳು ಏರಿಕೆ ಕಂಡರೆ, 1809 ಷೇರುಗಳು ಕುಸಿದವು, ಮತ್ತು 141 ಷೇರುಗಳ ಮೌಲ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
ಬ್ಯಾಂಕ್, ಆಟೋ, ಮೆಟಲ್ ಮತ್ತು ಫಾರ್ಮಾ ಸ್ಟಾಕ್ಗಳಲ್ಲಿ ಮಾರಾಟ ಹೆಚ್ಚು ಕಂಡು ಬಂದಿದ್ದು, ಟಾಟಾ ಮೋಟಾರ್ಸ್, ಆಕ್ಸಿಸ್ ಬ್ಯಾಂಕ್, ಟಾಟಾ ಸ್ಟೀಲ್, ಗೇಲ್ ಮತ್ತು ಟೈಟಾನ್ ಕಂಪನಿ ನಿಫ್ಟಿಯಲ್ಲಿ ಪ್ರಮುಖ ನಷ್ಟ ಅನುಭವಿಸದ ಷೇರುಗಳಾಗಿವೆ. ಟೆಕ್ ಮಹೀಂದ್ರಾ, ಎಸ್ಬಿಐ ಲೈಫ್ ಇನ್ಶುರೆನ್ಸ್, ವಿಪ್ರೋ, ಐಟಿಸಿ ಮತ್ತು ಪವರ್ ಗ್ರಿಡ್ ಕಾರ್ಪ್ ಕೊಂಚ ಏರಿಕೆ ಕಂಡಿವೆ.

ಎಫ್ಎಂಸಿಜಿಯನ್ನು ಹೊರತುಪಡಿಸಿ, ಇತರ ಎಲ್ಲ ವಲಯ ಸೂಚ್ಯಂಕಗಳು ಕೆಂಪು ಬಣ್ಣದಲ್ಲಿ ಕೊನೆಗೊಂಡಿವೆ. ಬಿಎಸ್ಇ ಮಿಡ್ಕ್ಯಾಪ್ ಮತ್ತು ಸ್ಮಾಲ್ಕ್ಯಾಪ್ ಸೂಚ್ಯಂಕಗಳು ಶೇಕಡಾ 0.5 ರಿಂದ 1.3ರಷ್ಟು ಇಳಿಕೆಗೊಂಡವು.
ದೇಶೀಯ ಇಕ್ವಿಟಿ ಮಾರುಕಟ್ಟೆಯಲ್ಲಿ ಲಾಭದ ಬುಕಿಂಗ್ ಕಂಡ ಮಧ್ಯೆ, ಭಾರತೀಯ ರೂಪಾಯಿ ಹೆಚ್ಚಿನ ದಿನದ ಲಾಭವನ್ನು ಅಳಿಸಿಹಾಕಿತು ಮತ್ತು ದಿನದ ಕನಿಷ್ಠ ಮಟ್ಟಕ್ಕೆ ಪ್ರತಿ ಡಾಲರ್ಗೆ 72.92 ರೂಪಾಯಿಗೆ ಕೊನೆಗೊಂಡಿತು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications