ತಲ್ಲಣಿಸಿತು ಮುಂಬೈ ಷೇರು ಮಾರುಕಟ್ಟೆ: 1600 ಅಂಶ ಕುಸಿತ
ಒಂದು ಕಡೆ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಮುನ್ನಡೆ ಕಂಡಿರುವುದು, ಮತ್ತೊಂದು ಕಡೆ ಭಾರತದಲ್ಲಿ 500, 1000 ರುಪಾಯಿ ನೋಟುಗಳ ಚಲಾವಣೆ ಹಿಂಪಡೆದಿರುವ ನಿರ್ಧಾರಗಳು ಷೇರು ಮಾರುಕಟ್ಟೆ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ.
ಬೆಂಗಳೂರು, ನವೆಂಬರ್ 9: ಬುಧವಾರ ಬೆಳಗ್ಗೆಯೇ ಭಾರತದ ಷೇರು ಮಾರುಕಟ್ಟೆ ತಲ್ಲಣಗೊಂಡಿದೆ. ಒಂದು ಕಡೆ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಮುನ್ನಡೆ ಕಂಡಿರುವುದು, ಮತ್ತೊಂದು ಕಡೆ ಭಾರತದಲ್ಲಿ 500, 1000 ರುಪಾಯಿ ನೋಟುಗಳ ಚಲಾವಣೆ ಹಿಂಪಡೆದಿರುವ ನಿರ್ಧಾರಗಳು ಷೇರು ಮಾರುಕಟ್ಟೆ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ.
ಬೆಳಗ್ಗೆ ವ್ಯವಹಾರ ಆರಂಭವಾದ ಕೆಲವೇ ಸಮಯದಲ್ಲಿ ಸೆನ್ಸೆಕ್ಸ್ 1,600 ಅಂಶಗಳ ಕುಸಿತ ಕಂಡರೆ, ನಿಫ್ಟಿ 470 ಅಂಶಗಳಷ್ಟು ಕುಸಿಯಿತು. 'ಹೌದು, ಇಂದಿನ ಕುಸಿತಕ್ಕೆ ಎರಡೂ ಕಾರಣ ಇದೆ. ಆದರೆ ಅಮೆರಿಕಾ ಚುನಾವಣೆ ಫಲಿತಾಂಶವೇ ಹೆಚ್ಚು ಕಾರಣ. ಪ್ರಧಾನಿ ನರೇಂದ್ರ ಮೋದಿ ಅವರ ನೋಟು ರದ್ದು ಮಾಡುವ ಘೋಷಣೆ ದೀರ್ಘಾವಧಿ ದೃಷ್ಟಿಯಿಂದ ಬಹಳ ಒಳ್ಳೆಯ ನಿರ್ಧಾರ. ಅದಕ್ಕೆ ಮಾರುಕಟ್ಟೆ ಪ್ರತಿಕ್ರಿಯೆ ಹೀಗಿದೆ ಅನ್ನೋ ಕಾರಣಕ್ಕೆ ಯೋಚನೆ ಮಾಡುವ ಅಗತ್ಯ ಇಲ್ಲ.

'ನೋಟುಗಳನ್ನು ರದ್ದು ಮಾಡುವುದರಿಂದ ಹಣದ ಚಲಾವಣೆ ಕಡಿಮೆ ಆಗುತ್ತದೆ. ಇದರಿಂದ ಹಣದುಬ್ಬರದ ಪ್ರಮಾಣ ತಗ್ಗುತ್ತದೆ. ಆರ್ ಬಿಐ ಬಡ್ಡಿದರವನ್ನು ಕಡಿಮೆ ಮಾಡುವ ಸಾಧ್ಯತೆ ಇದೆ. ದಿನದ ಕೊನೆಗೆ ಇದರಿಂದ ದೇಶಕ್ಕೆ ಹಾಗೂ ಜನಸಾಮಾನ್ಯರಿಗೇ ಅನುಕೂಲ. ಇದೊಂದು ನಿರ್ಧಾರದಿಂದ ಕಪ್ಪು ಹಣದ ಚಲಾವಣೆ ನಿಂತುಹೋಗುತ್ತೆ ಎಂದು ಭಾವಿಸಬೇಕಿಲ್ಲ. ಆದರೆ ಇದೊಂದು ಪ್ರಮುಖ ನಿರ್ಧಾರ ಅನ್ನುವ ಬಗ್ಗೆ ಎರಡು ಮಾತಿಲ್ಲ' ಎಂದು ಒನ್ ಇಂಡಿಯಾ ಜತೆಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು ಷೇರು ದಲ್ಲಾಳಿ ಹಾಗೂ ಅಂಕಣಕಾರರಾದ ಕೆ.ಜಿ.ಕೃಪಾಲ್.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications