ಸೆನ್ಸೆಕ್ಸ್ 1200 ಪಾಯಿಂಟ್ಸ್ ಜಿಗಿತ: ಟಾಟಾ ಮೋಟಾರ್ಸ್ 14% ಏರಿಕೆ
ನವದೆಹಲಿ, ಫೆಬ್ರವರಿ 02: ಕೇಂದ್ರ ಬಜೆಟ್ ಬಳಿಕ ಭಾರತೀಯ ಷೇರು ಮಾರುಟ್ಟೆಯಲ್ಲಿ ಗೂಳಿ ಓಟ ಜೋರಾಗಿದ್ದು, ಮಂಗಳವಾರ ಮುಂಬೈ ಷೇರುಪೇಟೆ ಸೆನ್ಸೆಕ್ಸ್ 1200 ಪಾಯಿಂಟ್ಸ್ ಹೆಚ್ಚಳಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ನಿಫ್ಟಿ 366 ಪಾಯಿಂಟ್ಸ್ ಏರಿಕೆಗೊಂಡಿದೆ.
ಮಂಗಳವಾರ ವಹಿವಾಟು ಮುಕ್ತಾಯಕ್ಕೆ ಬಿಎಸ್ಇ ಸೂಚ್ಯಂಕ ಸೆನ್ಸೆಕ್ಸ್ ಶೇಕಡಾ 2.46ರಷ್ಟು ಅಥವಾ 1197.11 ಪಾಯಿಂಟ್ಸ್ ಹೆಚ್ಚಳಗೊಂಡು 49,797.72 ಪಾಯಿಂಟ್ಸ್ ತಲುಪಿದೆ. ಎನ್ಎಸ್ಇ ಸೂಚ್ಯಂಕ ನಿಫ್ಟಿ ಶೇಕಡಾ 2.57ರಷ್ಟು ಅಥವಾ 366.70 ಪಾಯಿಂಟ್ಸ್ ಏರಿಕೆಗೊಂಡು 14,647 ಪಾಯಿಂಟ್ಸ್ ಮುಟ್ಟಿದೆ.
ಇಂದು 1727 ಷೇರುಗಳು ಏರಿಕೆಗೊಂಡಿದ್ದು, 1165 ಷೇರುಗಳು ಕುಸಿತಗೊಂಡಿವೆ ಮತ್ತು 170 ಷೇರುಗಳ ಮೌಲ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಟಾಟಾ ಮೋಟಾರ್ಸ್, ಶ್ರೀ ಸಿಮೆಂಟ್ಸ್, ಅಲ್ಟ್ರಾಟೆಕ್ ಸಿಮೆಂಟ್, ಎಸ್ಬಿಐ ಮತ್ತು ಹಿಂಡಾಲ್ಕೊ ನಿಫ್ಟಿಯಲ್ಲಿ ಪ್ರಮುಖ ಲಾಭ ಗಳಿಸಿದ ಷೇರುಗಳಾಗಿದ್ದು, ಎಚ್ಡಿಎಫ್ಸಿ ಲೈಫ್, ಬಜಾಜ್ ಫಿನ್ಸರ್ವ್, ಹೀರೋ ಮೊಟೊಕಾರ್ಪ್, ಟೈಟಾನ್ ಕಂಪನಿ ಮತ್ತು ಎಚ್ಯುಎಲ್ ನಷ್ಟ ಅನುಭವಿಸಿದ ಷೇರುಗಳಾಗಿವೆ.
ಬ್ಯಾಂಕಿಂಗ್, ಆಟೋ ಮತ್ತು ಇನ್ಫ್ರಾ ಸಂಬಂಧಿದ ಷೇರುಗಳು ಶೇಕಡಾ 3 ರಿಂದ 4ರಷ್ಟು ಲಾಭದೊಂದಿಗೆ ಕೊನೆಗೊಂಡಿತು. ಬಿಎಸ್ಇ ಮಿಡ್ಕ್ಯಾಪ್ ಮತ್ತು ಸ್ಮಾಲ್ಕ್ಯಾಪ್ ಸೂಚ್ಯಂಕಗಳು ಶೇಕಡಾ 1ರಿಂದ 2 ರಷ್ಟು ಏರಿಕೆಯಾಗಿದೆ.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications