ಕಿರುಚಿತ್ರ ನಿರ್ಮಾಣ ಸ್ಪರ್ಧೆ:'ಶಾಟ್ಸ್ ಆನ್ ನಿಕಾನ್’
ಬೆಂಗಳೂರು, ಫೆಬ್ರವರಿ 23: ನಿಕಾನ್ ಕಾರ್ಪೊರೇಶನ್ನ ಸಮೂಹ ಸಂಸ್ಥೆಯಾಗಿರುವ ನಿಕಾನ್ ಇಂಡಿಯಾ ತನ್ನ ಮೂರನೇ 'ಶಾರ್ಟ್ಸ್ ಆನ್ ನಿಕಾನ್' ಕಿರುಚಿತ್ರ ನಿರ್ಮಾಣ ಸ್ಪರ್ಧೆಯನ್ನು ಘೋಷಿಸಿದೆ.
ಛಾಯಾಚಿತ್ರ ತೆಗೆಯುವ ಹವ್ಯಾಸ ಇರುವ ಪ್ರತಿಭೆಗಳನ್ನು ಗುರುತಿಸಿ ರಾಷ್ಟ್ರೀಯ ಮಟ್ಟದಲ್ಲಿ ಅವರಿಗೆ ಗೌರವ ನೀಡುವ ನಿಟ್ಟಿನಲ್ಲಿ ಈ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದೆ. ಕಳೆದ ಎರಡು ಸ್ಪರ್ಧೆಗಳಲ್ಲಿ ದೇಶಾದ್ಯಂತದಿಂದ 500 ಕ್ಕೂ ಹೆಚ್ಚು ಸ್ಪರ್ಧಿಗಳು ಪಾಲ್ಗೊಂಡಿದ್ದು, ಅವರು ತಮ್ಮ ಛಾಯಾಚಿತ್ರ ತೆಗೆಯುವ ಸಾಮರ್ಥ್ಯ ಮತ್ತು ಕೌಶಲ್ಯವನ್ನು ಈ ಸ್ಪರ್ಧೆ ಮೂಲಕ ಅನಾವರಣಗೊಳಿಸಿದ್ದರು.
ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು ನಿಕಾನ್ ಡಿ-ಎಸ್ಎಲ್ಆರ್ ಕ್ಯಾಮರಾದಲ್ಲಿಯೇ ಚಿತ್ರೀಕರಿಸಿರಬೇಕು ಮತ್ತು ಈ ಕಿರುಚಿತ್ರ 10 ನಿಮಿಷಗಳೊಳಗಿರಬೇಕು.
ಈ ಸ್ಪರ್ಧೆಯ ವಿಜೇತರರಿಗೆ ನಿಕಾನ್ ಡಿ7500 ಮತ್ತು ದ್ವಿತೀಯ ಸ್ಥಾನ ಪಡೆಯುವ ಸ್ಪರ್ಧಿಗೆ ನಿಕಾನ್ ಡಿ5600 ಕ್ಯಾಮರಾವನ್ನು ಬಹುಮಾನವಾಗಿ ನೀಡಲಾಗುತ್ತದೆ. 18 ವರ್ಷ ಮೇಲ್ಪಟ್ಟವರು ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಬಯಸುವವರು 5 ಮಾರ್ಚ್ 2018 ರೊಳಗೆ ಅರ್ಜಿ ಸಲ್ಲಿಸಬೇಕು.

ಈ ಸ್ಪರ್ಧೆ ಬಗ್ಗೆ ಮಾಹಿತಿ ನೀಡಿರುವ ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಕಾರ್ಪೊರೇಟ್ ಸೇಲ್ಸ್ ಅಂಡ್ ಸ್ಟ್ರಾಟೆಜಿಯ ಹಿರಿಯ ಉಪಾಧ್ಯಕ್ಷರಾದ ಸಜ್ಜನ್ ಕುಮಾರ್ ಅವರು, 'ಇದು ಮೂರನೇ ವರ್ಷದ ಶಾರ್ಟ್ಸ್ ಆನ್ ನಿಕಾನ್' ಸ್ಪರ್ಧೆ ಆಗಿದೆ. ಕಳೆದ ಎರಡು ವರ್ಷ ಈ ಸ್ಪರ್ಧೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಮತ್ತೆ ಸ್ಪರ್ಧೆ ಏರ್ಪಡಿಸುತ್ತಿರುವುದಕ್ಕೆ ಸಂತಸವೆನಿಸುತ್ತಿದೆ.
ನಮ್ಮ ದೇಶದ ಯು ಪ್ರತಿಭಾನ್ವಿತ ಛಾಯಾಚಿತ್ರಕಾರರನ್ನು ಉತ್ತೇಜಿಸುವ ನಮ್ಮ ಬದ್ಧತೆಯನ್ನು ಈ ಸ್ಪರ್ಧೆ ಮೂಲಕ ತೋರಿಸುತ್ತಿದ್ದೇವೆ. ನಿಕಾನ್ ಕ್ಯಾಮರಾದಿಂದ ಚಿತ್ರೀಕರಿಸಿ ಕಿರುಚಿತ್ರ ನಿರ್ಮಾಣ ಮಾಡುವ ಮೂಲಕ ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಯುವ ಸುಪ್ತ ಪ್ರತಿಭೆಗಳನ್ನು ರಾಷ್ಟ್ರ ಮಟ್ಟದಲ್ಲಿ ಗುರುತಿಸುವುದು ಇದರ ಪ್ರಮುಖ ಉದ್ದೇಶವಾಗಿದೆ. ಈ ಮೂಲಕ ಯುವ ಛಾಯಾಗ್ರಾಹಕರಿಗೆ ಉತ್ತೇಜನ ನೀಡಲಾಗುತ್ತದೆ'' ಎಂದು ತಿಳಿಸಿದರು.
ನಿಕಾನ್ನ ಅಧಿಕೃತ ವೆಬ್ಸೈಟ್ನಲ್ಲಿ ಯಾವ ರೀತಿ ಕಿರುಚಿತ್ರ ನಿರ್ಮಾಣ ಮಾಡಬೇಕೆಂಬುದರ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಲಾಗುತ್ತದೆ. ಇಲ್ಲಿ ಚಿತ್ರ ನಿರ್ಮಾಣದ ತಾಂತ್ರಿಕತೆಗಳನ್ನು ಅಭ್ಯರ್ಥಿಗಳು ಕಲಿತುಕೊಳ್ಳಬಹುದಾಗಿದೆ. ಇದರಲ್ಲಿ ಈ ಹಿಂದಿನ ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆದ ಕಿರುಚಿತ್ರಗಳೂ ಇರಲಿವೆ. ಸ್ಪರ್ಧಿಗಳು ತಮ್ಮ ಪ್ರವೇಶ ಪತ್ರಗಳನ್ನು ನಿಕಾನ್ ವೆಬ್ ಸೈಟಿನಲ್ಲಿ ಸಲ್ಲಿಸಬಹುದು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Arecanut Price: ಶಿವಮೊಗ್ಗ ಮಾರುಕಟ್ಟೆಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾರ್ಚ್ 23ರ ದರಪಟ್ಟಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications