ಸಿದ್ದರಾಮಯ್ಯ ಬಜೆಟ್ಟಿನಲ್ಲಿ ಐಟಿ-ಬಿಟಿಗೆ ಏನು ಗಿಟ್ಟಿಲ್ಲ!
ಬೆಂಗಳೂರು, ಮಾರ್ಚ್ 18: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ನಾಲ್ಕನೇ ಬಜೆಟ್ ನಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ನೇರವಾಗಿ ಯಾವುದೇ ಹೊಸ ಯೋಜನೆ ಘೋಷಿಸಿಲ್ಲ. ಒಟ್ಟಾರೆ ಐಟಿ ಬಿಟಿ ಕ್ಷೇತ್ರಕ್ಕೆ ಹೆಚ್ಚಿನ ಪ್ರಮಾಣದ ಗಿಫ್ಟ್ ಸಿಕ್ಕಿಲ್ಲ.
ಐಟಿ-ಬಿಟಿ ಕಂಪನಿಗಳನ್ನು ರಾಜಧಾನಿ ಬೆಂಗಳೂರು ಬಿಟ್ಟು ರಾಜ್ಯದ ಇತರೆಡೆಗೂ ವಿಸ್ತರಿಸುವ ಪ್ರಯತ್ನ ಈ ಬಾರಿಯ ಬಜೆಟ್ನಲ್ಲಾಗುವ ನಿರೀಕ್ಷೆ ಸುಳ್ಳಾಗಿದೆ. ಎರಡು ಹಾಗೂ ಮೂರನೇ ಸ್ತರದ ನಗರಗಳಿಗೆ ಐಟಿ ಕಂಪನಿಗಳನ್ನು ಕರೆದೊಯ್ಯುವಲ್ಲಿ ಸರ್ಕಾರ ಸಂಪೂರ್ಣ ಮತ್ತೆ ವಿಫಲವಾಗಿದೆ. ಕಂಪನಿಗಳ ಬಹುವಾರ್ಷಿಕ ಬೇಡಿಯಾದ ಮೂಲ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ.[ಕರ್ನಾಟಕ ಬಜೆಟ್ 2016-17, ಮುಖ್ಯಾಂಶಗಳು]

ಮಾಹಿತಿ ತಂತ್ರಜ್ಞಾನ,ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಿಕ್ಕಿರುವ ಕೊಡುಗೆ ಇಲ್ಲಿದೆ:[ಸಿದ್ದರಾಮಯ್ಯ ಬಜೆಟ್: ಯಾವುದು ಏರಿಕೆ? ಯಾವುದು ಇಳಿಕೆ?]
* ನ್ಯೂಏಜ್ ಇನ್ಕ್ಯುಬೇಷನ್ ನೆಟ್ವರ್ಕ್ ಅಡಿ ರಾಜ್ಯಾದ್ಯಂತ ಸ್ನಾತಕೋತ್ತರ ಮತ್ತು ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ 10 ಹೊಸ
ಇನ್ಕ್ಯುಬೇಟರ್ಗಳ ಸ್ಥಾಪನೆ.[ಸಿದ್ದರಾಮಯ್ಯ ಬಜೆಟ್: ಕೈಗಾರಿಕೆಗಳಿಗೆ ಸಿಕ್ಕಿದ್ದೇನು?]
* ರಾಜ್ಯಾದ್ಯಂತ ಇಂಟರ್ನೆಟ್ ಆಫ್ ಥಿಂಗ್ಸ್, ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಮತ್ತು ಮ್ಯಾನುಫ್ಯಾಕ್ಚರಿಂಗ್, ಮೊದಲಾದ ಸಂಭಾವ್ಯ ಕ್ಷೇತ್ರಗಳಲ್ಲಿ
4 ಟೆಕ್ನಾಲಜಿ ಬಿಸಿನೆಸ್ ಇನ್ಕ್ಯುಬೇಟರ್ಗಳ ಸ್ಥಾಪನೆ.[ಸಿದ್ದರಾಮಯ್ಯ ಬಜೆಟ್ಟಿನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು?]
* ಕಿಯೋನಿಕ್ಸ್ ವತಿಯಿಂದ ಬೆಂಗಳೂರು ಮತ್ತು ಶಿವಮೊಗ್ಗ, ಬಾಗಲಕೋಟೆ ಮತ್ತು ಕಲ್ಬುರ್ಗಿ ಐ ಟಿ ಪಾರ್ಕುಗಳಲ್ಲಿ ಇನ್ಕ್ಯುಬೇಟರ್ ಮತ್ತು ಸಾಮಾನ್ಯ ಇನ್ಸುಟ್ರುಮೆಂಟೇಷನ್ ಸೌಲಭ್ಯ. ಬೆಳಗಾವಿ, ಬೀದರ್ ಮತ್ತು ವಿಜಯಪುರ ಗಳಲ್ಲಿ ಹೊಸ ಐಟಿ ಪಾರ್ಕ್-ಇನ್ಕ್ಯೂಬೇಟರ್ಗಳ ಸ್ಥಾಪನೆ.
* ರಾಜ್ಯದಲ್ಲಿ ಶೈಕ್ಷಣಿಕವಾಗಿ ಹಿಂದುಳಿದಿರುವ ತಾಲ್ಲೂಕುಗಳ 500 ಪ್ರೌಢಶಾಲೆಗಳಿಗೆ ಸೈನ್ಸ್ ಲ್ಯಾಬ್ - ಇನ್ ಎ ಬಾಕ್ಸ್ ಕಿಟ್ಗಳ
ವಿತರಣೆ.
* ವಿಜಯಪುರ ಜಿಲ್ಲೆಯಲ್ಲಿ ಕಿರು ತಾರಾಲಯ ಸ್ಥಾಪನೆ.
* ವಿಜ್ಞಾನ ಮತ್ತು ತಂತ್ರಜ್ಞಾನ ಮಾಹಿತಿ ಗುಣಮಟ್ಟ ಉತ್ತಮಪಡಿಸಲು ವಿಷನ್ ಗ್ರೂಪ್ ವತಿಯಿಂದ ಕಾರ್ಯಕ್ರಮ ಆಯೋಜನೆ -8 ಕೋಟಿ ರೂ.
ಇ-ಆಡಳಿತ
* ಬೆಂಗಳೂರು ನಗರದಲ್ಲಿ 33 ಬೆಂಗಳೂರು ಒನ್ ಕೇಂದ್ರಗಳ ಸ್ಥಾಪನೆ.
* ಜಿಲ್ಲಾ ಮಟ್ಟದಲ್ಲಿ ವಿನೂತನ ಇ-ಆಡಳಿತ ಯೋಜನೆಗಳಿಗೆ ಧನಸಹಾಯ.
* ರಾಜ್ಯ ಮಟ್ಟದಲ್ಲಿ ನಾಗರಿಕ ಸ್ನೇಹಿ ಇ-ಆಡಳಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ
ನೀಡಲು ಕ್ರಮ.
*ಮಾಹಿತಿ ತಂತ್ರಜ್ಞಾನದ ಪ್ರಮಾಣಗಳಿಗೆ ಅನುಗುಣವಾಗಿ ಮಾಹಿತಿ ತಂತ್ರಜ್ಞಾನದ ಎಲ್ಲಾ ರಕ್ಷಣಾ ಚಟುವಟಿಕೆಗಳ ಬಲವರ್ಧನೆಗೆ ಸೆಕ್ಯೂರಿಟಿ ಆಪರೇಷನಲ್ ಸೆಂಟರ್ ಸ್ಥಾಪನೆ.
* 20 ರಾಷ್ಟ್ರೀಯ ಇ-ಆಡಳಿತ ಸಮ್ಮೇಳನವನ್ನು ರಾಜ್ಯದಲ್ಲಿ ಫೆಬ್ರವರಿ 2017ರಲ್ಲಿ ಆಯೋಜಿಸಲು ಕ್ರಮ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications