ಸಿದ್ದು ಬಜೆಟಿನಲ್ಲಿ ಐಟಿ-ಬಿಟಿ ಕ್ಷೇತ್ರಕ್ಕೆ ಮತ್ತೆ ನಿರಾಶೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 12ನೇ ಬಜೆಟ್ ನಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ನೇರವಾಗಿ ಯಾವುದೇ ಹೊಸ ಯೋಜನೆ ಘೋಷಿಸಿಲ್ಲ.
ಬೆಂಗಳೂರು, ಮಾರ್ಚ್ 15: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 12ನೇ ಬಜೆಟ್ ನಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ನೇರವಾಗಿ ಯಾವುದೇ ಹೊಸ ಯೋಜನೆ ಘೋಷಿಸಿಲ್ಲ. ಸತತ ಎರಡನೇ ವರ್ಷ ಐಟಿ-ಬಿಟಿ ಕ್ಷೇತ್ರವನ್ನು ಕಡೆಗಣಿಸಲಾಗಿದೆ.
ಐಟಿ-ಬಿಟಿ ಕಂಪನಿಗಳನ್ನು ರಾಜಧಾನಿ ಬೆಂಗಳೂರು ಬಿಟ್ಟು ರಾಜ್ಯದ ಇತರೆಡೆಗೂ ವಿಸ್ತರಿಸುವ ಪ್ರಯತ್ನ ಈ ಬಾರಿಯ ಬಜೆಟ್ನಲ್ಲಾಗುವ ನಿರೀಕ್ಷೆ ಸುಳ್ಳಾಗಿದೆ. ಎರಡು ಹಾಗೂ ಮೂರನೇ ಸ್ತರದ ನಗರಗಳಿಗೆ ಐಟಿ ಕಂಪನಿಗಳನ್ನು ಕರೆದೊಯ್ಯುವಲ್ಲಿ ಸರ್ಕಾರ ಸಂಪೂರ್ಣ ಮತ್ತೆ ವಿಫಲವಾಗಿದೆ. ಕಂಪನಿಗಳ ಬಹುವಾರ್ಷಿಕ ಬೇಡಿಯಾದ ಮೂಲ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ.[2016: ಬಜೆಟ್ಟಿನಲ್ಲಿ ಐಟಿ-ಬಿಟಿಗೆ ಏನು ಗಿಟ್ಟಿಲ್ಲ]
ಮಾಹಿತಿ ತಂತ್ರಜ್ಞಾನ,ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಿಕ್ಕಿರುವ ಕೊಡುಗೆ ಇಲ್ಲಿದೆ:
ಸೂಕ್ತ ತಾಂತ್ರಿಕ ಸಂಪನ್ಮೂಲಗಳನ್ನು, ಕೌಶಲ್ಯ ಅಭಿವೃದ್ಧಿಯನ್ನು ಸೃಜಿಸಲು ಮತ್ತು ಉದಯೋನ್ಮುಖ ತಂತ್ರಜ್ಞಾನಗಳನ್ನು
ದೃಷ್ಟಿಯಲ್ಲಿಟ್ಟುಕೊಂಡು ಸಾಮರ್ಥ್ಯ ನಿರ್ಮಾಣಕ್ಕೆ ಒತ್ತು ನೀಡಲು ಕೈಗಾರಿಕೋದ್ಯಮದ ಸಹಯೋಗದೊಂದಿಗೆ
'Center of Excellence in Data Sciencs and Artifical Intelligence' and 'Cyber Security' ಕೇಂದ್ರಗಳ
ಸ್ಥಾಪನೆ.[ಬಜೆಟ್ LIVE: ರೈತರ ಸಾಲ ಮನ್ನಾ ಇಲ್ಲ, ಎಣ್ಣೆ ಬೆಲೆ ಇಳಿದಿಲ್ಲ]

* ಯುವ ಯುಗ ಕಾರ್ಯಕ್ರಮದಡಿ, ಕೌಶಲ್ಯ ಅಭಿವೃದ್ಧಿಗೆ ಒತ್ತು ನೀಡಲು ಭಾರತ ಸರ್ಕಾರ, SCP/TSP, ಕೈಗಾರಿಕೆಗಳ
ವಂತಿಗೆಯಿಂದ ನಿಧಿಗಳನ್ನು ಸಂಗ್ರಹಿಸುವ ಮೂಲಕ ಐಟಿ, ಎಲೆಕ್ಟ್ರಾನಿಕ್ಸ್, ಅನಿಮೇ/ನ್ ಮತ್ತು ಇತರ ವಲಯಗಳಲ್ಲಿ
1,10,000 ವ್ಯಕ್ತಿಗಳಿಗೆ ತರಬೇತಿ.
* 2/3 ನೇ ಹಂತದ ನಗರಗಳಲ್ಲಿ ಚೈತನ್ಯಪೂರ್ಣ ತಂತ್ರಜ್ಞಾನ (Vibrant Technology) ಮತ್ತು ಹೊಸ ಪರಿಕಲ್ಪನೆಯ
ನವೀನ ಪರಿಸರ ವ್ಯವಸ್ಥೆ ಸೃಜಿಸಲು ಕೈಗಾರಿಕೋದ್ಯಮದ ಸಹಯೋಗದೊಂದಿಗೆ ಹುಬ್ಬಳ್ಳಿಯಲ್ಲಿ VLSI Incubator
ಮತ್ತು Brown field ESDM Cluster ಸ್ಥಾಪನೆ.
* ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಉಚಿತ ವೈ-ಫೈ ಸೌಲಭ್ಯ; ಕಿಯೋನಿಕ್ಸ್ ಸಾರಥ್ಯದಲ್ಲಿ ಖಾಸಗಿ-ಸಹಭಾಗಿತ್ವದಮೂಲಕ Viability Gap Funding ನೀಡಿ ಮೊದಲ ಹಂತದಲ್ಲಿ ರಾಜ್ಯದ 2500 ಗ್ರಾಮ ಪಂಚಾಯತಿಗಳಲ್ಲಿ 50 ಕೋಟಿ ರೂ.
* ಮಂಗಳೂರಿನ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ 35.69 ಕೋಟಿ ರೂ. ಅಂದಾಜು ವೆಚ್ಚದ ಅತ್ಯಾಧುನಿಕ
ತಾರಾಲಯ ಡಿಸೆಂಬರ್ 2017 ರೊಳಗೆ ಕಾರ್ಯಾರಂಭ.
* ಮಡಿಕೇರಿ ಮತ್ತು ಗದಗನಲ್ಲಿ ತಲಾ 5.75 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ 10 ಮೀ ಗೋಳಾಕೃತಿಯ 3ಡಿ ಕಿರು
ತಾರಾಲಯ ಸ್ಥಾಪನೆ.
* 30 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ವಿಜ್ಞಾನ ಗ್ಯಾಲರಿ ಕಟ್ಟಡ
ಕಾಮಗಾರಿಗೆ ಚಾಲನೆ.
* ಐದು ಜಿಲ್ಲೆಗಳಿಗೆ ಒಂದರಂತೆ ಸಂಚಾರಿ ತಾರಾಲಯ ವಾಹನಗಳ ನಿಯೋಜನೆ ಮೂಲಕ ಸಂಚಾರಿ ತಾರಾಲಯ
ಕಾರ್ಯಕ್ರಮ ಅನುಷ್ಠಾನ.
* ಬೆಂಗಳೂರಿನ ಐಐಐಟಿ ಸಂಸ್ಥೆಯಲ್ಲಿ ಯಾಂತ್ರಿಕ ಬುದ್ಧಿಶಕ್ತಿ ಮತ್ತು ರೋಬೋಟಿಕ್ಸ್ ಕೇಂದ್ರ ಸ್ಥಾಪನೆಗೆ ಕ್ರಮ. - 5 ಕೋಟಿ
ರೂ.
* ಕೃಷಿ, ನಗರಾಭಿವೃದ್ಧಿ ಹಾಗೂ ಪಾರಂಪರಿಕ ಸ್ಥಳಗಳಲ್ಲಿ ಮಾನವರಹಿತ ವೈಮಾನಿಕ ವ್ಯವಸ್ಥೆ (ಯು.ಎ.ಎಸ್)ಯನ್ನು
ಪ್ರಾಯೋಗಿಕ ಸಹಯೋಜನೆ ಮೂಲಕ ಕೈಗೆತ್ತಿಕೊಳ್ಳಲು 2 ಕೋಟಿ ರೂ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications