ಸ್ನಾಪ್ ಡೀಲ್ ಕಂಪನಿಯ 600 ಉದ್ಯೋಗಿಗಳು ಮನೆಗೆ!
ಕಳೆದ 12 ತಿಂಗಳಲ್ಲಿ ಆದ ನಷ್ಟವನ್ನು ಸರಿದೂಗಿಸಲು ಉದ್ಯೋಗಗಳನ್ನು ಕಡಿತಗೊಳಿಸುವ ತೀರ್ಮಾನ ಕೈಗೊಂಡಿರುವ ಸಂಸ್ಥೆ.
ನವದೆಹಲಿ, ಫೆಬ್ರವರಿ 22: ವ್ಯವಹಾರದಲ್ಲಿ ಇಳಿಕೆ ಉಂಟಾಗಿರುವ ಕಾರಣದಿಂದಾಗಿ ಪ್ರಖ್ಯಾತ ಆನ್ ಲೈನ್ ಮಾರಾಟ ಸಂಸ್ಥೆಯಾದ ಸ್ನಾಪ್ ಡೀಲ್ ತನ್ನಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಲ್ಲಿ ಸುಮಾರು 600 ಮಂದಿಯನ್ನ ಮನೆಗೆ ಕಳುಹಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಕೆಲ ದಿನಗಳ ಹಿಂದೆಯೇ ಈ ಸಂಸ್ಥೆ ತನ್ನ ಉದ್ಯೋಗಿಗಳನ್ನು ಮನೆಗೆ ಕಳುಹಿಸಲಿದೆ ಎಂದು ವರದಿಯಾಗಿತ್ತು. ಆದರೆ, ಎಷ್ಟು ಸಂಖ್ಯೆಯ ಉದ್ಯೋಗಿಗಳು ಕೆಲಸ ಕಳೆದುಕೊಳ್ಳಲಿದ್ದಾರೆಂದು ಕಂಪನಿ ಹೇಳಿರಲಿಲ್ಲ. ಇದೀಗ, ಈ ನಷ್ಟವನ್ನು ಸರಿದೂಗಿಸಲಾಗಿದೆ.[ಸ್ನಾಪ್ ಡೀಲ್ ಸಂಸ್ಥೆಯಿಂದ ಶೇ 30ರಷ್ಟು ಉದ್ಯೋಗಿಗಳು ಹೊರಕ್ಕೆ]

ಕಳೆದ ಹನ್ನೆರಡು ತಿಂಗಳಲ್ಲಿ ಸಂಸ್ಥೆಗೆ ಉಂಟಾಗಿರುವ ನಷ್ಟವನ್ನು ಸರಿದೂಗಿಸುವ ಪ್ರಯತ್ನವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ.
ಈಗಾಗಲೇ ಕಂಪನಿಯ ಎಲ್ಲಾ ಉದ್ಯೋಗಿಗಳಿಗೂ ಇ-ಮೇಲ್ ಮುಖೇನ್ ಈ ನಿರ್ಧಾರವನ್ನು ತಿಳಿಸಲಾಗಿದೆ. ಅದರಲ್ಲಿ ಕಂಪನಿಗಾದ ನಷ್ಟ ಸರಿದೂಗುವವರೆಗೂ ಕಂಪನಿಯ ಸಂಸ್ಥಾಪಕರಾದ ಕುನಾಲ್ ಬಹಲ್ ಹಾಗೂ ರೋಹಿತ್ ಬನ್ಸಾಲ್ ಅವರು ವೇತನ ತಗೆದುಕೊಳ್ಳದಿರಲು ನಿರ್ಧರಿಸಿರುವುದಾಗಿ ಹೇಳಲಾಗಿದೆ.
ಇದಿಷ್ಟೇ ಅಲ್ಲ, ಕಂಪನಿಯ ಉನ್ನತ ಸ್ಥಾನಗಳಲ್ಲಿರುವ ಕೆಲವಾರು ಅಧಿಕಾರಿಗಳ ಸಂಬಳಕ್ಕೂ ಕತ್ತರಿ ಬೀಳಲಿದೆ. ಮುಂದಿನ ಎರಡು ವರ್ಷಗಳಲ್ಲಿ ಕಂಪನಿಯನ್ನು ಲಾಭದ ಕಡೆಗೆ ನಡೆಸಲು ಉದ್ದೇಶಿಸಲಾಗಿದ್ದು, ಈ ನಿಟ್ಟಿನಲ್ಲಿ ಕೆಲವಾರು ನೋವಿನ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ ಎಂದು ಕಂಪನಿ ಹೇಳಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications