ಮುಂದೆ ಪೆಟ್ರೋಲ್, ರಿಯಲ್ ಎಸ್ಟೇಟ್ ಗಳೂ ಜಿಎಸ್ ಟಿಗೆ: ಜೇಟ್ಲಿ
ಮುಂಬರುವ ದಿನಗಳಲ್ಲಿ ಪೆಟ್ರೋಲ್ ಹಾಗೂ ರಿಯಲ್ ಎಸ್ಟೇಟ್ ಕ್ಷೇತ್ರವನ್ನು ಜಿಎಸ್ ಟಿ ವ್ಯಾಪ್ತಿಗೆ ತರಲಾಗುತ್ತದೆ. ಕೇಂದ್ರ ಸರ್ಕಾರದ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿಕೆ. ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಹೇಳಿಕೆ.
ನವದೆಹಲಿ, ಜೂನ್ 29: ಮುಂಬರುವ ದಿನಗಳಲ್ಲಿ ಪೆಟ್ರೋಲ್, ಪೆಟ್ರೋಲಿಯಂ ಉತ್ಪನ್ನಗಳು ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರವನ್ನೂ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ವ್ಯಾಪ್ತಿಯೊಳಗೆ ತರಲಾಗುವುದು ಎಂದು ಕೇಂದ್ರದ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ಜುಲೈ 1ರಿಂದ ದೇಶಾದ್ಯಂತ ಜಿಎಸ್ ಟಿ ತೆರಿಗೆ ವ್ಯವಸ್ಥೆಯು ಜಾರಿಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ವಾಹಿನಿಯೊಂದಕ್ಕೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಅವರು ಈ ವಿಚಾರ ತಿಳಿಸಿದ್ದಾರೆ.

''ಸದ್ಯದ ಮಟ್ಟಿಗೆ ಜಿಎಸ್ ಟಿ ಕೊಂಚ ಗೊಂದಲಗಳನ್ನು ಉಂಟು ಮಾಡಬಹುದು. ಆದರೆ, ಅದರ ಪರಿಣಾಮದಿಂದ ಜನರಿಗೆ ಒಳಿತೇ ಆಗುತ್ತದೆ. ಒಂದು ಹಂತಕ್ಕೆ ಸಾಗಿ ಹೋದ ನಂತರ ಜಿಎಸ್ ಟಿ ಸ್ಥಿರತೆ ಕಂಡುಕೊಳ್ಳುತ್ತದೆ. ಆಗ ಮಾತ್ರ ಜನರಿಗೆ ಜನರು ಅದರ ಲಾಭಗಳನ್ನು ಪಡೆಯಲು ಸಾಧ್ಯ'' ಎಂದು ಅವರು ತಿಳಿಸಿದರು.
ಇದೇ ವೇಳೆ, ಈಗ ದೇಶದ ಎಲ್ಲಾ ಸರಕು ಮತ್ತು ಸೇವೆಗಳನ್ನು ನಾಲ್ಕು ತೆರಿಗೆ ಸ್ಲಾಬ್ ಗಳಲ್ಲಿ ವರ್ಗೀಕರಣ ಮಾಡಲಾಗಿದೆ. ಶೇ. 5, 12, 18 ಹಾಗೂ 28ರ ಅಡಿಯಲ್ಲಿ ಸರಕು ಮತ್ತು ಸೇವೆಗಳನ್ನು ವರ್ಗೀರಿಸಲಾಗಿದೆ. ಹೀಗೆ ಮಾಡುವುದು ಅನಿವಾರ್ಯವಾಗಿತ್ತು. ಇಲ್ಲವಾದರೆ, ಅದು ಹಣದುಬ್ಬರಕ್ಕೆ ಕಾರಣವಾಗುತ್ತಿತ್ತು ಎಂದು ಅವರು ತಿಳಿಸಿದ್ದಾರೆ.
ಸದ್ಯದ ಮಟ್ಟಿಗೆ ಜಿಎಸ್ ಟಿ ಅಡಿಯಲ್ಲಿ ತೆರಿಗೆಗೊಳಪಡುವ ಹಾಗೂ ವಿನಾಯ್ತಿ ಪಡೆದಿರುವ ಪದಾರ್ಥಗಳ, ಸೇವೆಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಈಗಾಗಲೇ ಪ್ರಕಟಿಸಿದೆ. ಆ ಪಟ್ಟಿಯಲ್ಲಿ ಪೆಟ್ರೋಲ್ ಹಾಗೂ ರಿಯಲ್ ಎಸ್ಟೇಟ್ ಸೇರಿಸಿಲ್ಲ.
ಜನರ ಪಾಲಿಗೆ ದುಬಾರಿಯೆನಿಸಿರುವ ಈ ಎರಡು ಕ್ಷೇತ್ರಗಳನ್ನು ಜಿಎಸ್ ಟಿಯಿಂದ ಹೊರಗಿಟ್ಟಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಈಗಾಗಲೇ ಆಕ್ಷೇಪಗಳು ಕೇಳಿಬಂದಿದ್ದವು.ಈ ಹಿನ್ನೆಲೆಯಲ್ಲಿ ಕೇಳಲಾದ ಪ್ರಶ್ನೆಗೆ ಜೇಟ್ಲಿ ಹೀಗೆ ಉತ್ತರಿಸಿದ್ದಾರೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications