ಭವಿಷ್ಯದಲ್ಲಿ ಡೆಬಿಟ್ ಕಾರ್ಡ್ಗಳ ಬಳಕೆಯೂ ಸ್ಥಗಿತ: ಎಸ್ಬಿಐ ಇಂಗಿತ
ಮುಂಬೈ, ಆಗಸ್ಟ್ 20: ಎಲ್ಲಾ ಕಡೆ ಸಾಮಾನ್ಯವಾಗಿ ಬಳಕೆಯಲ್ಲಿರುವ ಡೆಬಿಟ್ ಕಾರ್ಡ್ಗಳನ್ನು ಬ್ಯಾಂಕಿಂಗ್ ವ್ಯವಸ್ಥೆಯಿಂದಲೇ ತೆಗೆದುಹಾಕಲು ಭಾರತೀಯ ಸ್ಟೇಟ್ ಬ್ಯಾಂಕ್ ಮುಂದಾಗಿದೆ. ಡಿಜಿಟಲ್ ಪಾವತಿಗೆ ಹೆಚ್ಚಿನ ಆದ್ಯತೆ ನೀಡಲು ಬಯಸಿರುವ ಎಸ್ಬಿಐ, ಪ್ಲಾಸ್ಟಿಕ್ ಕಾರ್ಡ್ಗಳ ಬಳಕೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಉದ್ದೇಶಿಸಿದೆ.
ದೇಶದ ಜನಸಂಖ್ಯೆಯ ಶೇ 5ರಷ್ಟು ಗ್ರಾಹಕರನ್ನು ಹೊಂದಿರುವ ಎಸ್ಬಿಐ, ದೊಡ್ಡ ಪ್ರಮಾಣದಲ್ಲಿ ಜನರು ಡೆಬಿಟ್ ಕಾರ್ಡ್ಗಳ ಮೇಲೆ ಅವಲಂಬಿತರಾಗಿದ್ದರೂ, ಅದರ ಬಳಕೆಯನ್ನು ಅಂತ್ಯಗೊಳಿಸಲು ತೀರ್ಮಾನಿಸಿದೆ.
'ಡೆಬಿಟ್ ಕಾರ್ಡ್ಗಳನ್ನು ನಿರ್ಮೂಲನೆ ಮಾಡುವುದು ನಮ್ಮ ಬಯಕೆ. ನಾವು ಅವುಗಳನ್ನು ಸ್ಥಗಿತಗೊಳಿಸುತ್ತೇವೆ ಎನ್ನುವುದು ಖಚಿತ' ಎಂದು ಎಸ್ಬಿಐ ಅಧ್ಯಕ್ಷ ರಜನೀಶ್ ಕುಮಾರ್ ಅವರು ಸೋಮವಾರ ವಾರ್ಷಿಕ ಕಾರ್ಯಕ್ರಮದಲ್ಲಿ ಹೇಳಿದರು.

ದೇಶದಾದ್ಯಂತ ಸುಮಾರು 90 ಕೋಟಿ ಡೆಬಿಟ್ ಕಾರ್ಡ್ಗಳ ಬಳಕೆಯಾಗುತ್ತಿದೆ. ಕ್ರೆಡಿಟ್ ಕಾರ್ಡ್ಗಳ ಬಳಕೆ ಮೂರು ಕೋಟಿ ಇದೆ. ಡೆಬಿಟ್ ಕಾರ್ಡ್ ರಹಿತ ದೇಶದ ಸಾಧನೆ ಮಾಡಲು ಎಸ್ಬಿಐಗೆ ತನ್ನದೇ ಆದ 'ಯೋನೋ' ವೇದಿಕೆಯಂತಹ ಪ್ರಮುಖ ಡಿಜಿಟಲ್ ಪರಿಹಾರಗಳಿವೆ ಎಂದು ತಿಳಿಸಿದರು,
ಯೋನೋ ವೇದಿಕೆ ಮೂಲಕ ಗ್ರಾಹಕರು ಎಟಿಎಂ ಮೂಲಕ ಹಣವನ್ನು ಪಡೆದುಕೊಳ್ಳಬಹುದು ಅಥವಾ ಕಾರ್ಡ್ ಇಲ್ಲದೆಯೂ ವ್ಯಾಪಾರ ಮಳಿಗೆಗಳಲ್ಲಿ ಖರೀದಿ ಮಾಡಿ ಪಾವತಿಸಬಹುದು ಎಂದು ಹೇಳಿದರು.
ಎಸ್ಬಿಐ ಈಗಾಗಲೇ 68,000 ಯೋನೋ ಕ್ಯಾಶ್ಪಾಯಿಂಟ್ಗಳನ್ನು ಸ್ಥಾಪಿಸಿದೆ. ಮುಂದಿನ 18 ತಿಂಗಳಲ್ಲಿ ಹತ್ತು ಲಕ್ಷಕ್ಕೂ ಅಧಿಕ ಕ್ಯಾಶ್ ಪಾಯಿಂಟ್ಗಳನ್ನು ಸ್ಥಾಪಿಸುವ ಬೃಹತ್ ಯೋಜನೆ ಹೊಂದಿದೆ. ಇದರಿಂದ ಕಾರ್ಡ್ ಬಳಕೆ ಇನ್ನಷ್ಟು ಕಡಿಮೆಯಾಗಲಿದೆ ಎಂದರು.

ಇದರೊಂದಿಗೆ ಯೋನೋ ವೇದಿಕೆಯು ಕೆಲವು ನಿರ್ದಿಷ್ಟ ವ್ಯಾಪಾರಿಗಳಿಂದ ಖರೀದಿ ಮಾಡುವಾಗ ಸಾಲವನ್ನೂ ಒದಗಿಸುತ್ತದೆ. ಹೀಗಾಗಿ ಜೇಬಿನಲ್ಲಿರುವ ಕ್ರೆಡಿಟ್ ಕಾರ್ಡ್ ಬಳಕೆಯೂ ಕೆಲವೆಡೆ ಅಗತ್ಯವಿರುವುದಿಲ್ಲ. ಮುಂದಿನ ಐದು ವರ್ಷಗಳಲ್ಲಿ ನಿಮ್ಮ ಜೇಬಿನಲ್ಲಿ ಪ್ಲಾಸ್ಟಿಕ್ ಕಾರ್ಡ್ಗಳನ್ನು ಕೊಂಡೊಯ್ಯುವ ಅಗತ್ಯವೇ ಕಡಿಮೆಯಾಗಲಿದೆ. ವರ್ಚ್ಯುವಲ್ ಕೂಪನ್ಗಳು ಭವಿಷ್ಯದ ವಹಿವಾಟಿನ ಮೂಲವಾಗಲಿದೆ ಎಂದು ತಿಳಿಸಿದರು.
ಪಾವತಿಗಳನ್ನು ಮಾಡಲು ಕ್ಯೂಆರ್ ಕೋಡ್ಗಳ ಬಳಕೆ ಕೂಡ ಕಡಿಮೆ ವೆಚ್ಚದಾಯಕವಾಗಲಿವೆ ಎಂದು ಹೇಳಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications