ಆಲ್ಕೋಹಾಲ್ ಹೋಂ ಡೆಲಿವರಿ ಬಗ್ಗೆ ಪರಿಗಣಿಸಿ: ಸುಪ್ರೀಂಕೋರ್ಟ್
ನವದೆಹಲಿ, ಮೇ 8: ಮೂರನೇ ಅವಧಿಯ ಲಾಕ್ಡೌನ್ ನಡುವೆಯೂ ದೇಶದ ಹಲವೆಡೆ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಆದರೆ, ಮದ್ಯ ಖರೀದಿಸಲು ಹಲವು ಷರತ್ತುಗಳನ್ನು ವಿಧಿಸಲಾಗಿದೆ. ಹಲವು ನಿಬಂಧನೆಗಳ ನಡುವೆ ಮದ್ಯಪ್ರಿಯರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದು, ಹಲವೆಡೆ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ. ಕೊರೋನಾ ಸೋಂಕು ಹರಡದಂತೆ ವಿಧಿಸಿರುವ ನಿಬಂಧನೆ ಮೀರಿದಂತಾಗುತ್ತಿದೆ ಎಂಬ ಕೂಗು ಕೇಳಿ ಬಂದಿದೆ. ಈ ನಿಟ್ಟಿನಲ್ಲಿ ಮಳಿಗೆಗಳಲ್ಲಿ ಮದ್ಯ ಮಾರಾಟ ಮಾಡುವ ಬದಲು ಹೋಂ ಡೆಲಿವರಿ ಮಾಡುವುದು ಸೂಕ್ತ ಎಂದು ಹಲವು ರಾಜ್ಯಗಳಿಂದ ಮನವಿ ಬಂದಿದೆ. ಈ ಮನವಿಗೆ ಸುಪ್ರೀಂ ಕೋರ್ಟ್ ಕೂಡಾ ಸಮ್ಮತಿಸಿದೆ.
Recommended Video
ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಅಶೋಕ್ ಭೂಷಣ್, ಜಸ್ಟೀಸ್ ಎಸ್ .ಕೆ ಕೌಲ್ ಹಾಗೂ ಬಿಆರ್ ಗವಾಯಿ ಅವರಿದ್ದ ನ್ಯಾಯಪೀಠವು, ಸುಪ್ರೀಂಕೋರ್ಟ್ ಈ ಬಗ್ಗೆ ಯಾವುದೇ ಆದೇಶ ನೀಡುವುದಿಲ್ಲ. ಆದರೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹಾಗೂ ನಿಯಮ ಪಾಲಿಸಲು ಆಯಾ ರಾಜ್ಯಗಳು ಗ್ರಾಹಕರ ಮನೆ ಬಾಗಿಲಿಗೆ ಮದ್ಯ ಪೂರೈಸುವುದು ಒಳ್ಳೆಯದು ಎಂದು ಅಭಿಪ್ರಾಯ ಪಟ್ಟಿದೆ.
ಮದ್ಯ ಪೂರೈಕೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ, ಹೀಗಾಗಿ, ಗೃಹ ಸಚಿವಾಲಯ ಈ ಕುರಿತಂತೆ ನೀಡಿರುವ ನಿಬಂಧನೆಗಳನ್ನು ಪಾಲಿಸದಿರುವ ಬಗ್ಗೆ ಸ್ಪಷ್ಟನೆ ನೀಡುವಂತೆ ಸುಪ್ರೀಂಕೋರ್ಟ್ ಮುಂದೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಲಾಗಿತ್ತು.

ಆದರೆ, ಪಿಐಎಲ್ ತಳ್ಳಿ ಹಾಕಿದ ಸುಪ್ರೀಂಕೋರ್ಟ್, ಹೋಂ ಡೆಲಿವರಿ ಬಗ್ಗೆ ಚರ್ಚೆ ನಡೆದಿದ್ದು, ಸರ್ಕಾರ ಈ ಬಗ್ಗೆ ಪರಿಗಣಿಸಲಿ, ನಾವು ಏನು ಮಾಡಬೇಕು? ಎಂದು ಜಸ್ಟೀಸ್ ಕೌಲ್ ಪ್ರಶ್ನಿಸಿದ್ದಾರೆ.
ಸದ್ಯ ಕಾನೂನಿನ ಪ್ರಕಾರ ಹೋಂ ಡೆಲಿವರಿ ಮಾಡಲು ಯಾವುದೇ ಆಸ್ಪದವಿಲ್ಲ. ಆದರೆ, ಜೋಮ್ಯಾಟೋ, ಇಂಟರ್ ನ್ಯಾಷನಲ್ ಸ್ಪಿರಿಟ್ಸ್ ಅಂಡ್ ವೈನ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಮುಂತಾದ ಸಂಸ್ಥೆಗಳು ಆನ್ ಲೈನ್ ಮಾರಾಟ, ಹೋಂ ಡೆಲಿವರಿಗೆ ಅನುಮತಿ ನೀಡುವಂತೆ ಒತ್ತಡ ಹೇರುತ್ತಿವೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications