Share Market Crash: ಷೇರು ಮಾರುಕಟ್ಟೆ ಮಹಾಕುಸಿತ; ಒಂದೇ ದಿನ ಹೂಡಿಕೆದಾರರಿಗೆ ₹17 ಲಕ್ಷ ಕೋಟಿ ನಷ್ಟ
ಸೋಮವಾರ ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಮಹಾ ಆಘಾತ ಎದುರಾಗಿದೆ. ಜಾಗತಿಕ ಆರ್ಥಿಕ ಹಿಂಜರಿತದ ಭಯದಿಂದ ಯುಎಸ್ ಮಾರುಕಟ್ಟೆ ಕುಸಿಯುತ್ತಿದ್ದಂತೆ ವಿಶ್ವದ ವಿವಿಧ ಷೇರು ಮಾರುಕಟ್ಟೆಗಳ ಮೇಲೂ ಪರಿಣಾಮ ಬೀರಿದೆ. ಭಾರತೀಯ ಷೇರುಮಾರುಕಟ್ಟೆಯಲ್ಲಿ ಕೂಡ ಮಹಾಕುಸಿತ ಕಂಡಿದ್ದು ಒಂದೇ ದಿನ ಹೂಡಿಕೆದಾರರು ಸುಮಾರು 17 ಲಕ್ಷ ಕೋಟಿ ರೂಪಾಯಿ ನಷ್ಟ ಮಾಡಿಕೊಂಡಿದ್ದಾರೆ. ಸೆನ್ಸೆಕ್ಸ್ ಮಧ್ಯಾಹ್ನದ ವೇಳೆಗೆ 2100 ಅಂಕಗಳಷ್ಟು ಕುಸಿತ ಕಂಡಿದೆ.
ಯುಎಸ್ ಮಾರುಕಟ್ಟೆಯಲ್ಲಿ ಉದ್ಯೋಗ ಕಡಿತವು ಆರ್ಥಿಕ ಬೆಳವಣಿಗೆಯನ್ನು ನಿಧಾನಗೊಳಿಸುವ ಆತಂಕ ಮೂಡಿಸಿದ ನಂತರ ಹೂಡಿಕೆದಾರರು ಭಾರಿ ಪ್ರಮಾಣದಲ್ಲಿ ಷೇರುಗಳನ್ನು ಮಾರಾಟ ಮಾಡಲು ಮುಂದಾಗಿದ್ದರಿಂದ ಷೇರು ಮಾರುಕಟ್ಟೆ ಕುಸಿತ ಕಂಡಿದೆ. ಶುಕ್ರವಾರ ಕುಸಿದಿದ್ದ ಷೇರು ಮಾರುಕಟ್ಟೆ ಸೋಮವಾರ ಕೂಡ ಕುಸಿತವನ್ನು ಮುಂದುವರೆಸಿದೆ. ಸೋಮವಾರ ದೇಶೀಯ ಷೇರುಮಾರುಕಟ್ಟೆ ಒಟ್ಟಾರೆ ಶೇಕಡಾ 2 ರಷ್ಟು ಕುಸಿತ ಕಂಡಿದೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಸೂಚ್ಯಂಕಗಳು ಕುಸಿದಿವೆ.

ಎಷ್ಟು ಕುಸಿತ?
ಷೇರು ಮಾರುಕಟ್ಟೆ ಆರಂಭವಾಗುತ್ತಿದ್ದಂತೆ ಹೂಡಿಕೆದಾರರು ಭಾರಿ ಪ್ರಮಾಣದಲ್ಲಿ ಷೇರು ಮಾರಾಟಕ್ಕೆ ಮುಗಿಬಿದ್ದರು. ಆರಂಭದಲ್ಲೇ ಸೆನ್ಸೆಕ್ಸ್ 2,393.76 ಕುಸಿದು, 78,588.19 ಅಂಕಗಳಿಂದ ಆರಂಭವಾಯಿತು. ಮಧ್ಯಾಹ್ನದ ವೇಳೆಗೆ ಅಲ್ಪ ಸುಧಾರಣೆ ಕಂಡು ಮತ್ತೆ 78,865.81 ಅಂಕಗಳಿಗೆ ಏರಿಕೆಯಾಗಿದೆ.
ನಿಫ್ಟಿ 50 ಕೂಡ 2 ಶೇಕಡಾ ಅಥವಾ 414.85 ಪಾಯಿಂಟ್ಗಳನ್ನು ಕುಸಿದು 24,302.85 ನಲ್ಲಿ ಪ್ರಾರಂಭವಾಯಿತು. ಮಧ್ಯಾಹ್ನದ ವೇಳೆಗೆ 645.85 (2.25%) ಕುಸಿತ ಕಂಡಿದೆ. ಜಾಗತಿಕವಾಗಿ ಪ್ರಮುಖ ಮಾರುಕಟ್ಟೆಗಳು ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿರುವ ಕಾರಣ ಹೂಡಿಕೆದಾರರು ಲಕ್ಷಾಂತರ ಕೋಟಿ ರೂಪಾಯಿ ಸಂಪತ್ತು ಕಳೆದುಕೊಂಡಿದ್ದಾರೆ.
ಮಾರುಕಟ್ಟೆ ಕುಸಿಯಲು ಕಾರಣವೇನು?
ಯುಎಸ್ ಮಾರುಕಟ್ಟೆ ದೇಶದ ಪ್ರಮುಖ ಷೇರುಮಾರುಕಟ್ಟೆ ವಿಶ್ವದ ಬಲವಾದ ಆರ್ಥಿಕತೆ ಹೊಂದಿರುವ ಕಾರಣ, ಈ ದೇಶದ ಆರ್ಥಿಕ ಏರಿಳಿತಗಳು ಜಾಗತಿಕ ಷೇರುಮಾರುಕಟ್ಟೆ ಮೇಲೆ ಪ್ರಭಾವ ಬೀರುತ್ತವೆ. ಯುಎಸ್ನಲ್ಲಿ ಹೆಚ್ಚಿನ ಉದ್ಯೋಗ ಕಡಿತವು ಜಾಗತಿಕವಾಗಿ ಷೇರುಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ.
ಯುಎಸ್ನಲ್ಲಿ ಜುಲೈನಲ್ಲಿ ನಿರುದ್ಯೋಗ ದರವು 4.3 ಪ್ರತಿಶತಕ್ಕೆ ಏರಿಕೆಯಾಗಿತ್ತು. ಕಾರ್ಮಿಕ ಮಾರುಕಟ್ಟೆಯಲ್ಲಿ ಹಿಂಜರಿತ ಆರ್ಥಿಕತೆಯ ಬೆಳವಣಿಗೆಯನ್ನು ಕುಂಠಿತಗೊಳಿಸುವ ಭಯವನ್ನು ಹುಟ್ಟುಹಾಕಿತು. ಇದರಿಂದ ಹೂಡಿಕೆದಾರರು ಷೇರುಗಳನ್ನು ಮಾರಾಟಮಾಡಲು ಮುಂದಾದರು, ಪರಿಣಾಮವಾಗಿ ಷೇರುಮಾರುಕಟ್ಟೆ ಕುಸಿತ ಕಂಡಿತು.
ಮಧ್ಯಪ್ರಾಚ್ಯ ದೇಶಗಳಲ್ಲಿ ರಾಜಕೀಯ ಉದ್ವಿಗ್ನತೆ ಕೂಡ ಷೇರುಮಾರುಕಟ್ಟೆ ಕುಸಿಯಲು ಮತ್ತೊಂದು ಪ್ರಮುಖ ಕಾರಣವಾಗಿದೆ. ಇಸ್ರೇಲ್ - ಹಮಾಸ್ ಸಂಘರ್ಷ, ಇರಾನ್ ಮೇಲಿನ ದಾಳಗಳು ಕೂಡ ಷೇರುಮಾರುಕಟ್ಟೆ ಮೇಲೆ ಕೆಟ್ಟಪರಿಣಾಮ ಬೀರಿವೆ. ಇನ್ನು ಒಂದಷ್ಟು ದಿನ ಷೇರು ಮಾರುಕಟ್ಟೆ ಕುಸಿಯಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ. ದೀರ್ಘಾವಧಿ ಹೂಡಿಕೆದಾರರು ಹೆಚ್ಚು ಭಯಪಡುವ ಅಗತ್ಯವಿಲ್ಲವಾದರೂ, ಇಂಟ್ರಾ ಡೇ ಷೇರು ಖರೀದಿ ಮಾರಾಟಗಾರರು ಮಾತ್ರ ಭಾರಿ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications