ಅಮೆಜಾನ್, ಫ್ಲಿಪ್ ಕಾರ್ಟ್ ಓಪನ್, ಸದ್ಯಕ್ಕೆ ಅಗತ್ಯ ವಸ್ತು ಮಾತ್ರ ಲಭ್ಯ
ನವದೆಹಲಿ, ಏಪ್ರಿಲ್ 20: ಕೊರೊನಾವೈರಸ್ ನಿಂದಾಗಿ ಲಾಕ್ಡೌನ್ ಎರಡನೇ ಅವಧಿಯಲ್ಲಿ ಏಪ್ರಿಲ್ 20ರ ನಂತರ ಇ ಕಾಮರ್ಸ್ ಸಂಸ್ಥೆಗಳಿಗೆ ವಿನಾಯತಿ ನೀಡಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯವು ಮಾರ್ಗಸೂಚಿಯಲ್ಲಿ ಹೇಳಿದೆ. ಅಮೆಜಾನ್, ಫ್ಲಿಪ್ ಕಾರ್ಟ್ ನಂಥ ಆನ್ ಲೈನ್ ಸೇವಾ ಸಂಸ್ಥೆಗಳು ಪೂರ್ಣಪ್ರಮಾಣದಲ್ಲಿ ಕಾರ್ಯ ನಿರ್ವಹಿಸಬಹುದಾಗಿದೆ ಎಂದು ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್ ಭಲ್ಲಾ ಹೇಳಿದ್ದಾರೆ. ಆದರೆ, ಮೇ 3ರ ತನಕ ಅಗತ್ಯ ವಸ್ತುಗಳನ್ನು ಮಾತ್ರ ಮಾರಾಟ ಮಾಡಬಹುದಾಗಿದೆ.
ಏಪ್ರಿಲ್ 20ರ ನಂತರ ಇ ಕಾಮರ್ಸ್ ವೆಬ್ ತಾಣಗಳ ಸೇವೆ ರೆಡ್ ಅಲರ್ಟ್ ಇರುವ ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ಆನ್ ಲೈನ್ ಶಾಪಿಂಗ್ ತಾಣಗಳದ ಅಮೆಜಾನ್, ಫ್ಲಿಪ್ ಕಾರ್ಟ್ ಮುಂತಾದ ತಾಣಗಳ ಸೇವೆ ಲಭ್ಯವಿರುವುದಿಲ್ಲ ಹಾಗೂ ಎಲೆಕ್ಟ್ರಾನಿಕ್ ಸಾಮಾಗ್ರಿಗಳಾದ ಮೊಬೈಲ್ ಫೋನ್, ಟಿವಿ, ರೆಫ್ರಿಜರೇಟರ್, ಲ್ಯಾಪ್ ಟಾಪ್ ಮುಂತಾದವು ಏಪ್ರಿಲ್ 20ರ ನಂತರ ಆನ್ ಲೈನ್ ನಲ್ಲಿ ಮಾರಾಟಕ್ಕೆ ಲಭ್ಯವಿರಲಿದೆ ಎಂಬ ಆದೇಶವನ್ನು ಬದಲಾಯಿಸಲಾಗಿದ್ದು, ಮೇ 3 ರ ತನಕ ಈ ರೀತಿ non -essentials ಸಾಮಾಗ್ರಿಗಳನ್ನು ಮಾರುವಂತಿಲ್ಲ ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ವಿನಾಯತಿ ಪಡೆದ ಸೇವೆಗಳು, ಸಂಸ್ಥೆಗಳು:
* ಆಸ್ಪತ್ರೆಗಳು, ಪಶು ವೈದ್ಯಕೀಯ ಆಸ್ಪತ್ರೆಗಳು, ಔಷಧಾಲಯಗಳು, ಜನ ಔಷಧಿ ಕೇಂದ್ರ, ಆಯುಷ್, ಪ್ರಯೋಗಾಲಯಗಳು, ಆಂಬ್ಯುಲೆನ್ಸ್ ಸೇರಿದಂತೆ ಎಲ್ಲಾ ವೈದ್ಯಕೀಯ ಸೇವೆಗಳು ಎಂದಿನಂತೆ ಮುಂದುವರೆಯಲಿದೆ.
* ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಪಟ್ಟ ಚಟುವಟಿಕೆಗಳು, ಎಂ.ಎಸ್.ಪಿ ಸೇರಿದಂತೆ ಕೃಷಿ ಉತ್ಪನ್ನಗಳ ಸಂಗ್ರಹದಲ್ಲಿ ತೊಡಗಿರುವ ಏಜೆನ್ಸಿಗಳು, ಕೃಷಿ ಯಂತ್ರೋಪಕರಣಗಳಿಗೆ ಸಂಬಂಧಿಸಿದ ಕಸ್ಟಮ್ ನೇಮಕಾತಿ ಕೇಂದ್ರಗಳು, ಎಪಿಎಂಸಿ ಮತ್ತು ಮಂಡಿಗಳು, ಕೋಲ್ಡ್ ಸ್ಟೋರೇಜ್ ಮತ್ತು ಗೋದಾಮಿನ ಸೇವೆಗಳು ಕಾರ್ಯನಿರ್ವಹಿಸಲಿದೆ.
* ಮೀನುಗಾರಿಕೆ, ಜಲಚರ ಸಾಕಣೆ ಉದ್ಯಮ, ಮೊಟ್ಟೆ ಕೇಂದ್ರ, ಫೀಡ್ ಸಸ್ಯಗಳು, ವಾಣಿಜ್ಯ ಅಕ್ವೇರಿಯಾ ಕಾರ್ಯಗಳಿಗೆ ವಿನಾಯತಿ ನೀಡಲಾಗಿದೆ. * ಶೇ. 50 ರಷ್ಟು ಕೆಲಸಗಾರರನ್ನು ಬಳಸಿಕೊಂಡು ಕಾಫಿ, ಟೀ ಮತ್ತು ರಬ್ಬರ್ ತೋಟದ ಕೆಲಸಗಳನ್ನು ನಿರ್ವಹಿಸಬಹುದು.
* ಪಶು ಸಂಗೋಪನೆ, ಪೌಲ್ಟ್ರಿ, ಗೋಶಾಲೆಗಳು ಕಾರ್ಯ ನಿರ್ವಹಿಸಲಿವೆ.
* ಬ್ಯಾಂಕುಗಳು, ವಿಮಾ ಕಚೇರಿಗಳು, ಅಂಚೆ ಕಚೇರಿಗಳು, ಪಿಂಚಣಿ, ಇ.ಪಿ.ಎಫ್.ಎ ಸೇವೆಗಳು ಲಭ್ಯವಿರಲಿದೆ.
* ಅಂಗನವಾಡಿಯಿಂದ 15 ದಿನಗಳಿಗೊಮ್ಮ ಆಹಾರ ವಿತರಣೆ ಆಗಲಿದೆ.
* ಆನ್ ಲೈನ್ ಕಲಿಕೆ ಮತ್ತು ದೂರ ಶಿಕ್ಷಣಕ್ಕೆ ಮಾತ್ರ ಶಿಕ್ಷಣ ಸಂಸ್ಥೆಗಳು ಆದ್ಯತೆ ನೀಡಬೇಕಿದೆ.
* ಪೆಟ್ರೋಲ್ ಪಂಪ್ ಗಳು, ಎಲ್ಪಿಜಿ, ಪೆಟ್ರೋಲಿಯಂ ಮತ್ತು ಅನಿಲ ಚಿಲ್ಲರೆ ಮತ್ತು ಶೇಖರಣಾ ಮಳಿಗೆಗಳಿಗೆ ವಿನಾಯಿತಿ ನೀಡಲಾಗಿದೆ.
* ಸರ್ಕಾರಿ ಚಟುವಟಿಕೆಗೆ ಮಾತ್ರ ಡೇಟಾ ಮತ್ತು ಕಾಲ್ ಸೆಂಟರ್ ಕೆಲಸ ಮಾಡಲಿವೆ.
* ಇ-ಕಾಮರ್ಸ್ ಕಂಪನಿ, ಕೊರಿಯರ್ ಸೇವೆಗಳಿಗೂ ವಿನಾಯಿತಿ ನೀಡಲಾಗಿದೆ.
* ಎಲೆಕ್ಟ್ರೀಷಿಯನ್, ಪ್ಲಂಬರ್, ಮೋಟಾರು ಮೆಕ್ಯಾನಿಕ್, ಕಾರ್ಪೆಂಟರ್ ಕೆಲಸ ಮಾಡಬಹುದು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications