ಜೆಟ್ ಏರ್ ವೇಸ್ ಖರೀದಿಗೆ ಟಾಟಾ ಸನ್ಸ್ ನಲ್ಲಿ ಲೆಕ್ಕಾಚಾರ ಶುರು
ಮುಂಬೈ, ನವೆಂಬರ್ 13: ಆರ್ಥಿಕ ಸಂಕಷ್ಟದಲ್ಲಿರುವ ಜೆಟ್ ಏರ್ ವೇಸ್ ಖರೀದಿಗೆ ಟಾಟಾ ಸನ್ಸ್ ಮುಂದಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ. ಈ ಬಗ್ಗೆ ಈಗಾಗಲೇ ಎರಡೂ ಕಡೆಯಿಂದ ಮಾತುಕತೆಗೆ ವೇದಿಕೆ ಸಿದ್ಧವಾಗಿದೆ ಎಂದು ತಿಳಿಸಲಾಗಿದೆ.
ಈ ಚರ್ಚೆಯು ಖಾಸಗಿಯಾಗಿ ಇರಲಿದೆ. ಒಪ್ಪಂದ ಅಂತಿಮ ಆಗುವ ತನಕ ಯಾವುದೇ ಮಾಹಿತಿ ಹೊರಗೆ ಬಿಟ್ಟುಕೊಡದಿರಲು ನಿರ್ಧಾರ ಮಾಡಲಾಗಿದೆ. ಟಾಟಾ ಸನ್ಸ್ ನ ಚೀಫ್ ಫೈನಾನ್ಷಿಯಲ್ ಆಫೀಸರ್ (ಸಿಎಫ್ ಒ) ಸೌರಭ್ ಅಗರ್ ವಾಲ್ ಹಾಗೂ ಜೆಟ್ ಏರ್ ವೇಸ್ ನ ಅಧ್ಯಕ್ಷ ನರೇಶ್ ಗೋಯಲ್ ಮಧ್ಯೆ ಚರ್ಚೆ ನಡೆಸಲಿದ್ದಾರೆ.
ಟಾಟಾ ಸನ್ಸ್ ನಿಂದ ಇದಕ್ಕಾಗಿಯೇ ತಂಡವೊಂದನ್ನು ರಚಿಸಿಕೊಂಡು, ಜೆಟ್ ಏರ್ ವೇಸ್ ಜತೆಗಿನ ಮಾತುಕತೆಗೆ ಸಿದ್ಧತೆ ನಡೆಸಲಾಗುತ್ತಿದೆ. ಅದಕ್ಕಾಗಿ ಇನ್ನೂ ಕೆಲ ವಾರಗಳ ಸಮಯ ಹಿಡಿಸುತ್ತದೆ. ಅಂದಹಾಗೆ ಜೆಟ್ ಏರ್ ವೇಸ್ ಸತತವಾಗಿ ಮೂರನೇ ತ್ರೈ ಮಾಸಿಕ ಕೂಡ ಭಾರೀ ನಷ್ಟ ಅನುಭವಿಸಿದೆ.

ಆ ಕಾರಣಕ್ಕೆ ಹೆಚ್ಚು ಲಾಭ ಇಲ್ಲದ ಮಾರ್ಗಗಳಲ್ಲಿ ವಿಮಾನ ಹಾರಾಟ ನಿಲ್ಲಿಸಲು ಯೋಜನೆ ರೂಪಿಸಿದೆ. ವೆಚ್ಚ ಕಡಿಮೆ ಮಾಡಿಕೊಂಡು, ಆದಾಯ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಲಾಭದಾಯಕ ಆಗುವ ಮಾರ್ಗಗಳಲ್ಲಿ ಮಾತ್ರ ವಿಮಾನ ಹಾರಾಟ ನಡೆಸುವುದಕ್ಕೆ ಚಿಂತನೆ ಮಾಡಲಾಗುತ್ತಿದೆ.
ಹೆಚ್ಚುತ್ತಿರುವ ತೈಲ ಬೆಲೆ, ತೈಲದ ಮೇಲಿನ ತೆರಿಗೆ ಹೆಚ್ಚಳ, ದುರ್ಬಲ ರುಪಾಯಿ ಮೌಲ್ಯ, ಕಡಿಮೆ ಪ್ರಯಾಣ ದರ ಹಾಗೂ ದರ ಸ್ಪರ್ಧೆ ಇವೆಲ್ಲವೂ ಸೇರಿಕೊಂಡು ಜೆಟ್ ಏರ್ ವೇಸ್ ಗೆ ನಷ್ಟ ಅನುಭವಿಸುವಂತೆ ಮಾಡಿವೆ. ಅಂದಹಾಗೆ ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವುದು ವಿಮಾನಯಾನ ಕ್ಷೇತ್ರ. ಪ್ರತಿ ವರ್ಷ ಇಪ್ಪತ್ತು ಪರ್ಸೆಂಟ್ ಪ್ರಗತಿ ದಾಖಲಿಸುತ್ತಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications