ಟಾಟಾ ಸನ್ಸ್ ನಿರ್ದೇಶಕ ಸ್ಥಾನದಿಂದಲೂ ಸೈರಸ್ ಮಿಸ್ತ್ರಿ ಔಟ್!
ಇತ್ತೀಚೆಗಷ್ಟೇ ಟಾಟಾ ಸಮೂಹ ಸಂಸ್ಥೆಯ ಚೇರ್ಮನ್ ಹುದ್ದೆಯಿಂದ ಸೈರಸ್ ಮಿಸ್ತ್ರಿ ಅವರನ್ನು ಹೊರ ಹಾಕಿದ್ದ ಬೆನ್ನಲ್ಲಿಯೇ ಈಗ ನಿರ್ದೇಶಕ ಹುದ್ದೆಯಿಂದಲೂ ಅವರನ್ನು ಹೊರ ಹಾಕಲಾಗಿದೆ.
ಮುಂಬೈ, ಫೆಬ್ರವರಿ. 07 : ಸೈರಸ್ ಮಿಸ್ತ್ರಿ ಅವರನ್ನು ಈಗಾಗಲೇ ಟಾಟಾ ಸಮೂಹ ಸಂಸ್ಥೆ ಚೇರ್ಮನ್ ಸ್ಥಾನದಿಂದ ಹೊರ ಹಾಕಿದ್ದ ಬೆನ್ನಲ್ಲಿಯೇ ಈಗ ನಿರ್ದೇಶಕರ ಹುದ್ದೆಯಿಂದಲೂ ವಜಾ ಮಾಡಲಾಗಿದೆ.
ಸೋಮವಾರ ನಡೆದ ಟಾಟಾ ಸನ್ಸ್ನ ಸರ್ವ ಸದಸ್ಯರ ವಿಶೇಷ ಸಭೆಯಲ್ಲಿ (ಇಜಿಎಂ) ಭಾಗವಹಿಸಿದ್ದ ಷೇರುದಾರರು, ಮಿಸ್ತ್ರಿ ಅವರನ್ನು ನಿರ್ದೇಶಕ ಹುದ್ದೆಯಿಂದ ಹೊರ ಹಾಕುವ ನಿರ್ಣಯವನ್ನು ಬಹುಮತದಿಂದ ಬೆಂಬಲಿಸಿದರು. [ಟಾಟಾ ಬಂದ್ರು, ಮಿಸ್ತ್ರಿ ಹೋದ್ರು ಏನಿದರ ಗುಟ್ಟು?]
ಟಾಟಾ ಸನ್ಸ್ನಲ್ಲಿ ಶೇ 18.5 ರಷ್ಟು ಪಾಲು ಬಂಡವಾಳ ಹೊಂದಿರುವ ಶಪೂರ್ಜಿ ಪಲ್ಲೊಂಜಿ ಕುಟುಂಬದ ಪ್ರಾತಿನಿಧ ಹತ್ತು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ನಿರ್ದೇಶಕ ಮಂಡಳಿಯಲ್ಲಿ ಇಲ್ಲದಂತಾಗಿದೆ. [ಟಾಟಾ ಸಂಸ್ಥೆಗೆ ರತನ್ ರೀ ಎಂಟ್ರಿ, ಚೇರ್ಮನ್ ಮಿಸ್ತ್ರಿ ಔಟ್
ಪಲ್ಲೊಂಜಿ ನಿರ್ದೇಶಕ ಹುದ್ದೆಯಿಂದ ಕೆಳಗಿಳಿದ 2 ವರ್ಷದ ನಂತರ ಅವರ ಮಗ ಸೈರಸ್ 2006ರಲ್ಲಿ ನಿರ್ದೇಶಕರಾಗಿದ್ದರು. ಪಲ್ಲೊಂಜಿ ಕುಟುಂಬವು ಟಾಟಾ ಸನ್ಸ್ನಲ್ಲಿ 1965ರಿಂದಲೂ ಪಾಲು ಬಂಡವಾಳ ಹೊಂದಿದ್ದರೂ, ಮಿಸ್ತ್ರಿ ತಂದೆ ಪಲ್ಲೊಂಜಿ 1980ರಲ್ಲಷ್ಟೇ ನಿರ್ದೇಶಕ ಮಂಡಳಿಗೆ ಸೇರ್ಪಡೆಯಾಗಿದ್ದರು.
2016 ರ ಅಕ್ಟೋಬರ್ ನಲ್ಲಿ ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಸನ್ಸ್ ಚೇರ್ಮನ್ ಹುದ್ದೆಯಿಂದ ವಜಾಗೊಳಿಸಲಾಗಿತ್ತು. ಇವರ ಸ್ಥಾನಕ್ಕೆ ಮಧ್ಯಂತರ ಚೇರ್ಮನ್ ಆಗಿ ರತನ್ ಟಾಟಾ ಅವರು ರೀ ಎಂಟ್ರಿ ಕೊಟ್ಟಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications