ಅಪನಗದೀಕರಣದ ನಂತರ ತೆರಿಗೆದಾರರ ಸಂಖ್ಯೆ ಹೆಚ್ಚಳ
ನವದೆಹಲಿ, ಜನವರಿ 29 : 2016ರ ನವೆಂಬರ್ 8ರಂದು ಆದ ಅಪನಗದೀಕರಣದಿಂದ ಹಿಡಿದುಕೊಂಡು ಇಂದಿನವರೆಗೆ ಅಪನಗದೀಕರಣದ ಬಾಧ್ಯತೆಯ ಬಗ್ಗೆ ಟೀಕೆ ಟಿಪ್ಪಣೆಗಳು ಸಾಕಷ್ಟು ಹರಿದುಬಂದಿವೆ. ಕೇಂದ್ರ ಎಷ್ಟೇ ಸಮಜಾಯಿಷಿ ಕೊಟ್ಟರು ಒಪ್ಪಿಕೊಳ್ಳದಿರುವವರು ಇನ್ನೂ ಹಲವರಿದ್ದಾರೆ.
ಆದರೆ, ಸಾವಿರ ಮತ್ತು ಐನೂರು ರುಪಾಯಿ ಹಳೆಯ ನೋಟುಗಳನ್ನು ರದ್ದುಗೊಳಿಸಿ, ಆರ್ಥಿಕ ವ್ಯವಸ್ಥೆಯಲ್ಲಿ ಪಾರದರ್ಶಕತೆ ತಂದ ನಂತರ, ನಿಧಾನವಾಗಿಯಾದರೂ ದೇಶದಲ್ಲಿ ತೆರಿಗೆ ಕಟ್ಟುವವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ.
ಕೇಂದ್ರ ಬಜೆಟ್ಟಿಗೂ ಮುನ್ನ 2017-18ನೇ ಸಾಲಿನ ಆರ್ಥಿಕ ಸಮೀಕ್ಷೆಯ ವರದಿಯನ್ನು ಸಂಸತ್ತಿನಲ್ಲಿ ಕೇಂದ್ರ ಸರಕಾರ ಸೋಮವಾರ ಮಂಡಿಸಿದೆ. ಪ್ರಸಕ್ತ ವರ್ಷ ಜಿಡಿಪಿ 7ರಿಂದ 7.5ರವರೆಗೆ ವೃದ್ಧಿಯಾಗಲಿದೆ ಎಂದು ಸಮೀಕ್ಷೆ ತಿಳಿಸಿದ್ದು, ಫೆಬ್ರವರಿ 1ರಂದು ಮಂಡನೆಯಾಗಲಿರುವ ಬಜೆಟ್ಟಿನ ಬಗ್ಗೆ ಹಲವಾರು ಸೂಚನೆಗಳನ್ನು ಕೂಡ ನೀಡಿದೆ.

ಪ್ರತಿ ತಿಂಗಳಲ್ಲಿ ತೆರಿಗೆ ಕಟ್ಟುವವರ ಸಂಖ್ಯೆ ಶೇ.0.8ರಷ್ಟು (ವಾರ್ಷಿಕ ಶೇ.10ರಷ್ಟು) ಹೆಚ್ಚಿದೆ. 2017ರ ನವೆಂಬರ್ ತಿಂಗಳಲ್ಲಿ ಸರಾಸರಿಗಿಂತ ಶೇ. 31ರಷ್ಟು ತೆರಿಗೆ ಕಟ್ಟುವುದು ಹೆಚ್ಚಾಗಿದ್ದು, ಆರ್ಥಿಕವಾಗಿ ಬಾರೀ ಆಶಾಭಾವನೆ ಮೂಡಿಸಿದೆ ಎಂದು ಹಣಕಾಸು ಸಲಹೆಗಾರ ಅರವಿಂದ್ ಸುಬ್ರಮಣಿಯನ್ ಸಂತಸ ವ್ಯಕ್ತಪಡಿಸಿದ್ದಾರೆ.
ಅಪನಗದೀಕರಣ ಮತ್ತು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)ಯ ನಂತರ 18 ಲಕ್ಷದಷ್ಟು ಹೊಸ ತೆರಿಗೆದಾರರು ಶೇ.3ರಷ್ಟಿರುವ ತೆರಿಗೆದಾರರನ್ನು ಸೇರಿಕೊಂಡಿದ್ದಾರೆ. ನರೇಂದ್ರ ಮೋದಿಯವರು 2016ರ ನವೆಂಬರ್ 8ರಂದು, ಭ್ರಷ್ಟಾಚಾರ, ಕಾಳಧನ ಮತ್ತು ಭಯೋತ್ಪಾದನೆ ಮಟ್ಟ ಹಾಕುವ ಉದ್ದೇಶದಿಂದ ಸಾವಿರ ಮತ್ತು ಐನೂರು ನೋಟುಗಳನ್ನು ರದ್ದುಗೊಳಿಸಿದ್ದರು.
ಆರ್ಥಿಕತೆಯನ್ನು ಅತೀಹೆಚ್ಚು ಭಾರತೀಯರನ್ನು ತೆರಿಗೆಯ ಚೌಕಟ್ಟಿನೊಳಗೆ ತರುವ ಮತ್ತೊಂದು ಉದ್ದೇಶದಿಂದ ಅಪನಗದೀಕರಣ ಮತ್ತು ಜಿಎಸ್ಟಿ ದರಗಳನ್ನು ಬದಲಿಸಿ ಜಾರಿಗೆ ತರಬೇಕಾಯಿತು. ಪ್ರಸ್ತುತ 5.93 ಕೋಟಿ ರುಪಾಯಿ ಕೋಟಿ ತೆರಿಗೆದಾರರು ದೇಶದೊಳಗಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications