TCS ಈಗ ವಿಶ್ವದ ಅತ್ಯಮೂಲ್ಯ ಐಟಿ ಕಂಪನಿ: ಅಕ್ಸೆಂಚರ್ ಹಿಂದಿಕ್ಕಿದ ದೇಶದ ಅತಿದೊಡ್ಡ ಸಾಫ್ಟ್ವೇರ್ ರಫ್ತುದಾರ
ದೇಶದ ಅತಿದೊಡ್ಡ ಐಟಿ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಹೊಸ ದಾಖಲೆಯನ್ನೇ ಬರೆದಿದೆ. ವಿಶ್ವದ ಮತ್ತೊಂದು ಅಗ್ರಮಾನ್ಯ ಸಾಫ್ಟ್ವೇರ್ ಕಂಪನಿ ಅಕ್ಸೆಂಚರ್ ಅನ್ನು ಸೋಲಿಸಿ ಮುಂದೆ ಸಾಗಿದೆ.
ಹೌದು, ದೇಶದ ಅತಿದೊಡ್ಡ ಸಾಫ್ಟ್ವೇರ್ ರಫ್ತುದಾರ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಗುರುವಾರ ತನ್ನ ಸಾಧನೆಗಳಲ್ಲಿ ಮತ್ತೊಂದು ಪ್ರಗತಿಯನ್ನು ಸಾಧಿಸಿದೆ. ಟಿಸಿಎಸ್ ಈಗ ವಿಶ್ವದ ಅಮೂಲ್ಯ ಐಟಿ ಕಂಪನಿಯಾಗಿದೆ. ಮಾರುಕಟ್ಟೆ ಕ್ಯಾಪ್ ವಿಷಯದಲ್ಲಿ ಇದು ಮೊದಲ ಬಾರಿಗೆ ಅಕ್ಸೆಂಚರ್ ಅನ್ನು ಹಿಂದಿಕ್ಕಿದೆ.
ಟಿಸಿಎಸ್ ಷೇರು ಬಿಎಸ್ಇಯಲ್ಲಿ ಗುರುವಾರ ಶೇ 3.19 ರಷ್ಟು ಏರಿಕೆಯಾಗಿ 2,825 ರೂ.ಗೆ ತಲುಪಿದೆ. ಇದರೊಂದಿಗೆ ಕಂಪನಿಯ ಮಾರುಕಟ್ಟೆ ಕ್ಯಾಪ್ 144.73 ಬಿಲಿಯನ್ ಅಂದರೆ 10.60 ಲಕ್ಷ ಕೋಟಿ ರೂ. ಆಗಿದೆ. ಅಕ್ಸೆಂಚರ್ ನಾಸ್ಡಾಕ್ನಲ್ಲಿ 143.4 ಬಿಲಿಯನ್ ಅಥವಾ 10.52 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಕ್ಯಾಪ್ ಹೊಂದಿದೆ ಮತ್ತು ಐಬಿಎಂ 118.2 ಬಿಲಿಯನ್ ಡಾಲರ್ ಅಥವಾ 8.67 ಲಕ್ಷ ಕೋಟಿ ರೂ. ಹೊಂದಿದೆ.

ಎರಡನೇ ತ್ರೈಮಾಸಿಕದಲ್ಲಿ, ನಿರೀಕ್ಷಿತ ಕಾರ್ಯಕ್ಷಮತೆಗಿಂತ ಉತ್ತಮವಾಗಿರುವುದರಿಂದ ಟಿಸಿಎಸ್ ಷೇರುಗಳು ಏರಿಕೆಯಾಗಿವೆ. ಅಲ್ಲದೆ, ಕಂಪನಿಯು 16,000 ಕೋಟಿ ರೂ.ಗಳ ಮರುಖರೀದಿ ಯೋಜನೆಯನ್ನು ಪ್ರಕಟಿಸಿದೆ. ಕಂಪನಿಯು ಪ್ರತಿ ಷೇರಿಗೆ 12 ರೂ.ಗಳ ಮಧ್ಯಂತರ ಲಾಭಾಂಶವನ್ನು ಸಹ ಪಾವತಿಸುತ್ತಿದೆ. ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಕಂಪನಿಯ ಆದಾಯವು ವರ್ಷದಿಂದ ವರ್ಷಕ್ಕೆ ಶೇ 3 ರಷ್ಟು ಏರಿಕೆ ಕಂಡು 40,135 ಕೋಟಿ ರೂ. ತಲುಪಿದೆ
ಇತ್ತೀಚೆಗೆ, ಟಿಸಿಎಸ್ ನೌಕರರ ವೇತನವನ್ನು ಹೆಚ್ಚಿಸುವುದಾಗಿ ಘೋಷಿಸಿತು. ಈ ವೇತನ ಹೆಚ್ಚಳ ಅಕ್ಟೋಬರ್ 1 ರಿಂದ ಜಾರಿಗೆ ಬರಲಿದೆ. ಟಿಸಿಎಸ್ನ ಈ ಕ್ರಮವು ಕಂಪನಿಯ ಚಿತ್ರಣವನ್ನು ಇನ್ನಷ್ಟು ಉತ್ತಮಗೊಳಿಸಿದೆ. ಟಿಸಿಎಸ್ ಪ್ರಕಾರ, 3.52 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಹೊಸ ತಂತ್ರಜ್ಞಾನದ ಬಗ್ಗೆ ತರಬೇತಿ ನೀಡಲಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications