ಟಿಸಿಎಸ್ ಉದ್ಯೋಗಿಗಳಿಗೆ ಬಂಪರ್ ಬೋನಸ್
ಮುಂಬೈ, ಏ. 17: ಟಿಸಿಎಸ್ ಉದ್ಯೋಗಿಗಳಿಗೆ ಕಂಪನಿ ಬಹುದೊಡ್ಡ ಬಂಪರ್ ನೀಡಿದೆ. ದೇಶದ ಅತಿದೊಡ್ಡ ಸಾಫ್ಟ್ವೇರ್ ಸೇವಾ ರಫ್ತು ಕಂಪನಿ ಟಾಟಾ ಕನ್ಸಲ್ಟನ್ಸಿ ಸರ್ವೀಸಸ್ 'ಟಿಸಿಎಸ್' ತನ್ನ ಸಿಬ್ಬಂದಿಗೆ ಬರೋಬ್ಬರಿ 2,628 ಕೋಟಿ ರು. ಬೋನಸ್ ನೀಡುತ್ತೇನೆ ಎಂದು ಘೋಷಣೆ ಮಾಡಿದೆ.
2004 ಆಗಸ್ಟ್ನಲ್ಲಿ ಆರಂಭಿಕ ಷೇರು ಮಾರಾಟ ನಡೆಸಿದ್ದ ಕಂಪನಿ, ದಶಮಾನೋತ್ಸವ ಹಿನ್ನೆಲೆಯಲ್ಲಿ ಅಂಗವಾಗಿ ಎಲ್ಲಾ ಉದ್ಯೋಗಿಗಳಿಗೆ ವಿಶೇಷ ರೀತಿಯ ಸಂಭಾವನೆ ರೂಪದಲ್ಲಿ ಲಾಭಾಂಶ ಹಂಚಿಕೆ ಮಾಡಲಾಗುತ್ತಿದೆ ಎಂದು ಕಂಪನಿ ಪ್ರಕಟಣೆ ತಿಳಿಸಿದೆ.[ಟಿಸಿಎಸ್ ಮ್ಯಾರಥಾನ್ ನಲ್ಲಿ ಪಾಲ್ಗೊಂಡ್ರೆ ಏನು ಲಾಭ?]

ಒಟ್ಟು 2,628 ಕೋಟಿ ರೂ. ಮೊತ್ತವನ್ನು ಬೋನಸ್ ಗೆಂದು ತೆಗೆದಿರಿಸಲಾಗಿದೆ. ಜಾಗತಿಕ ಮಟ್ಟದ ಕಂಪನಿಯ ಎಲ್ಲಾ ಉದ್ಯೋಗಿಗಳಿಗೆ ಇದು ಅನ್ವಯವಾಗಲಿದೆ. ಆದರೆ ಕನಿಷ್ಠ 1 ವರ್ಷ ಸೇವೆ ಸಲ್ಲಿಸಿದವರು ವಿಶೇಷ ಸಂಭಾವನೆಗೆ ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ.
ಕಳೆದ ವರ್ಷದ ಡಿಸೆಂಬರ್ ಅಂತ್ಯದ ದಾಖಲೆಯಂತೆ ಟಿಸಿಎಸ್ನ ನೌಕರ ಬಲ 3.18 ಲಕ್ಷದಷ್ಟಿದೆ. ಕಂಪನಿಯಲ್ಲಿ ಉದ್ಯೋಗಿ ಪ್ರತಿ ವರ್ಷ ಸಲ್ಲಿಸಿದ ಸೇವೆಗೆ ಸಮನಾಗಿ ಒಂದು ವಾರದ ಸಂಬಳವನ್ನು ವಿಶೇಷ ಸಂಭಾವನೆ ರೂಪದಲ್ಲಿ ನೀಡಲಾಗುವುದು ಎಂದು ಟಿಸಿಎಸ್ ಸಿಇಒ ಮತ್ತು ಎಂಡಿ ಎನ್. ಚಂದ್ರಶೇಖರನ್ ತಿಳಿಸಿದ್ದಾರೆ.[ಟಿಸಿಎಸ್ ರಹಸ್ಯ ಉದ್ಯೋಗಿಯಿಂದ 'ಎಕ್ಸಿಟ್ ಇಂಟರ್ ವ್ಯೂ' ಲೀಕ್]
2004 ಆಗಸ್ಟ್ನಲ್ಲಿ ಕಂಪನಿ ಮುಂಬಯಿ ಷೇರು ವಿನಿಮಯ ಕೇಂದ್ರ ಮತ್ತು ರಾಷ್ಟ್ರೀಯ ಷೇರುಪೇಟೆಯಲ್ಲಿ ವ್ಯಾಪಾರ ಆರಂಭಿಸಿದ್ದ ಸಂಸ್ಥೆ ಇದೀಗ ಜಾತಗತಿ ಮಟ್ಟದ ಹೂಡಿಕೆದಾರನಾಗಿ ಗುರುತಿಸಿಕೊಂಡಿದೆ.
ಟಿಸಿಎಸ್ ಕಂಪನಿಗೆ 5,773 ಕೋಟಿ ಲಾಭ
ಕೊನೆಗೊಂಡ ಹಣಕಾಸು ವರ್ಷದಲ್ಲಿ ಟಿಸಿಎಸ್ ಶೇ. 7.7ಲಾಭದೊಂದಿಗೆ 5,773 ಕೋಟಿ ರೂ. ಲಾಭ ಗಳಿಸಿದೆ. ಕಳೆದ ತ್ರೈ ಮಾಸಿಕದ ವಹಿಚಾಟಿನಲ್ಲಿ ಶೇ. 12.4 ಏರಿಕೆ ಸಾಧಿಸಿದೆ. ವರ್ಷದಿಂದ ವರ್ಷಕ್ಕೆ ಕಂಪನಿಯ ಷೇರು ವಹಿಚಾಟು ಏರಿಕೆಯಲ್ಲೇ ಸಾಗಿದ್ದು ಡಾಲರ್ ಲೆಕ್ಕದಲ್ಲಿ ಹೇಳುವುದಾದರೆ 3.900 ಸಾವಿರ ಡಾಲರ್ ಲಾಭ ಗಳಿಸಿದೆ ಎಂದು ಕಂಪನಿ ತಿಳಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications