ಸರ್ವರ್ ಸಮಸ್ಯೆ, ಎರಡು ದಿನದಿಂದ HDFC ಆಪ್ ಡೌನ್
ಬೆಂಗಳೂರು, ಡಿಸೆಂಬರ್ 03: ಎಚ್ ಡಿ ಎಫ್ ಸಿ ಬ್ಯಾಂಕ್ ಗ್ರಾಹಕರು ಸತತವಾಗಿ ಎರಡು ದಿನದಿಂದ ಬ್ಯಾಂಕಿನ ಮೊಬೈಲ್ ಅಪ್ಲಿಕೇಷನ್ ಬಳಸಲು ಆಗದೆ ಪರದಾಡಿದ್ದಾರೆ. ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಕಾಣಿಸಿಕೊಂಡ ಸಮಸ್ಯೆ ಇನ್ನೂ ಬಗೆಹರಿದಿಲ್ಲ.
ಬ್ಯಾಂಕಿನ ಸಿಬ್ಬಂದಿ ಈ ಬಗ್ಗೆ ಸರಿಯಾದ ಮಾಹಿತಿ, ಪ್ರತಿಕ್ರಿಯೆ ನೀಡದಿರುವುದು ಗ್ರಾಹಕರು ಆಕ್ರೋಶಗೊಳ್ಳುವಂತೆ ಮಾಡಿದ್ದು, ಸಾಮಾಜಿಕ ಜಾಲ ತಾಣಗಳಲ್ಲಿ ತಮ್ಮ ಸಿಟ್ಟನ್ನು ಹೊರ ಹಾಕಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಚ್ ಡಿ ಎಫ್ ಸಿ ವಕ್ತಾರರು, ''ಸರ್ವರ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಗ್ರಾಹಕರಿಗೆ ಲಾಗಿನ್ ಆಗಲು ಸಾಧ್ಯವಾಗಿಲ್ಲ, ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಆಪ್ ವರ್ಕ್ ಆಗಿಲ್ಲ. ಈ ಬಗ್ಗೆ ತಜ್ಞರು ರಿಪೇರಿ ಕಾರ್ಯದಲ್ಲಿ ತೊಡಗಿದ್ದು, ಸೇವೆಯನ್ನು ಶೀಘ್ರದಲ್ಲೇ ಪುನರ್ ಸ್ಥಾಪಿಸಲಾಗುವುದು. ಗ್ರಾಹಕರಿಗೆ ಈಗ ಆಗಿರುವ ತೊಂದರೆಗೆ ವಿಷಾದಿಸುತ್ತೇವೆ"ಎಂದಿದ್ದಾರೆ.
Due to a technical glitch, some of our customers have been having trouble logging into our NetBanking and MobileBanking App. Our experts are working on it on top priority, and we’re confident we’ll be able to restore services shortly. (1/2)
— HDFC Bank Cares (@HDFCBank_Cares) December 2, 2019
2019ನೇ ಸಾಲಿನ ಏಷ್ಯಾಮನಿಯ ಶ್ರೇಷ್ಠ ಬ್ಯಾಂಕ್ ಪ್ರಶಸ್ತಿ, ಶ್ರೇಷ್ಠ ಡಿಜಿಟಲ್ ಬ್ಯಾಂಕ್ ಪ್ರಶಸ್ತಿಯನ್ನು ಗಳಿಸಿರುವ ಎಚ್ ಡಿ ಎಫ್ ಸಿ ಸೇವೆ ಬಗ್ಗೆ ಗ್ರಾಹಕರು ಕಿಡಿಕಾರಿದ್ದಾರೆ.
ಸುಮಾರು 4.5 ಕೋಟಿ ಗ್ರಾಹಕರನ್ನು ಹೊಂದಿದೆ. ಸೋಮವಾರದಂದು ಅನೇಕ ಮಂದಿಗೆ ಸಂಬಳದಿನವಾಗಿದ್ದರಿಂದ ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಬಳಕೆ ಅಧಿಕವಾಗಿತ್ತು.
|
ಶ್ರೇಷ್ಠ ಡಿಜಿಟಲ್ ಬ್ಯಾಂಕ್ ಪ್ರಶಸ್ತಿ
2019ನೇ ಸಾಲಿನ ಏಷ್ಯಾಮನಿಯ ಶ್ರೇಷ್ಠ ಬ್ಯಾಂಕ್ ಪ್ರಶಸ್ತಿ, ಶ್ರೇಷ್ಠ ಡಿಜಿಟಲ್ ಬ್ಯಾಂಕ್ ಪ್ರಶಸ್ತಿಯನ್ನು ಗಳಿಸಿರುವ ಎಚ್ ಡಿ ಎಫ್ ಸಿ ಸೇವೆ ಬಗ್ಗೆ ಗ್ರಾಹಕರು ಕಿಡಿಕಾರಿದ್ದಾರೆ. ಆದರೆ, ತಾಂತ್ರಿಕ ಸಮಸ್ಯೆಯಿಂದ ಈ ರೀತಿಯಾಗಿದೆ. ಎಲ್ಲವೂ ಸರಿ ಹೋಗಲಿದೆ ಎಂದು ಪ್ರತಿಕ್ರಿಯಿಸಿದೆ
|
ಸಮಸ್ಯೆ ಹೇಳಿಕೊಂಡವರಿಗೆ ಒಂದೇ ಉತ್ತರ
ಸುಮಾರು 4.5 ಕೋಟಿ ಗ್ರಾಹಕರನ್ನು ಹೊಂದಿದೆ. ಸೋಮವಾರದಂದು ಅನೇಕ ಮಂದಿಗೆ ಸಂಬಳದಿನವಾಗಿದ್ದರಿಂದ ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಬಳಕೆ ಅಧಿಕವಾಗಿತ್ತು.
ಸಮಸ್ಯೆ ಹೇಳಿಕೊಂಡವರಿಗೆಲ್ಲ ಒಂದೇ ರೀತಿಯ ಉತ್ತರ ನೀಡಿದ ಎಚ್ ಡಿ ಎಫ್ ಸಿ ಬಗ್ಗೆ ಗ್ರಾಹಕರು ಗರಂ ಆಗಿದ್ದಾರೆ. ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆಗಳ ಮಹಾಪೂರವೇ ಹರಿದು ಬಂದಿದೆ.
|
ಎಚ್ ಡಿ ಎಫ್ ಸಿಗೆ ದಂಡ ವಿಧಿಸಬಾರದೇ?
ಎಚ್ ಡಿ ಎಫ್ ಸಿಗೆ ದಂಡ ವಿಧಿಸಬಾರದೇ? ಪ್ರತಿಯೊಂದಕ್ಕೂ ಶುಲ್ಕ ವಿಧಿಸುವ ಬ್ಯಾಂಕ್ ಈ ರೀತಿ ಗ್ರಾಹಕರಿಗೆ ತೊಂದರೆ ನೀಡುವುದು ಎಷ್ಟು ಸರಿ? ಈ ಬಗ್ಗೆ ಆರ್ ಬಿಐ ಏಕೆ ಕ್ರಮ ಜರುಗಿಸುವುದಿಲ್ಲ ಎಂದು ಅಮೋಲ್ ಎಂಬುವರು ಪ್ರಶ್ನಿಸಿದ್ದಾರೆ.
|
ಗ್ರಾಹಕರಿಗೆ ಮಾಹಿತಿ ನೀಡಬಾರದೇಕೆ?
ತಾಂತ್ರಿಕ ಸಮಸ್ಯೆ ಬಗ್ಗೆ ಗ್ರಾಹಕರಿಗೆ ಮಾಹಿತಿ ನೀಡಬಾರದೇಕೆ? ಗ್ರಾಹಕರಿಗೆ ಸರಿಯಾದ ಸೇವೆ ನೀಡುವುದನ್ನು ಬ್ಯಾಂಕ್ ಮರೆತ್ತಿದ್ದೆಯೇ? ಎಂದು ಪ್ರಶ್ನಿಸಿದ್ದಾರೆ. ಆದರೆ, ಎಚ್ ಡಿ ಎಫ್ ಸಿ ಕಡೆಯಿಂದ ಎಲ್ಲಕ್ಕೂ ಒಂದೇ ಬಗೆಯ ಉತ್ತರ ಬಂದಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications