ಬೆಂಗಳೂರಿಗೆ ಹೆಜ್ಜೆ ಇಡಲು ಯೋಜಿಸಿದೆ ಖ್ಯಾತ ಕಾರು ತಯಾರಕ ಟೆಸ್ಲಾ ಕಂಪನಿ
ಬೆಂಗಳೂರು, ಸೆಪ್ಟೆಂಬರ್ 21: ಜಗತ್ತಿನ ಖ್ಯಾತ ಕಾರು ತಯಾರಕ ಕಂಪನಿ ಟೆಸ್ಲಾ, ಸಿಲಿಕಾನ್ ಸಿಟಿಗೆ ಬೆಂಗಳೂರಿಗೆ ಕಾಲಿಡಲು ಯೋಜಿಸಿದೆ. ಒಂದೊಮ್ಮೆ ಮಾತುಕತೆ ಯಶಸ್ವಿ ಆಗಿದ್ದೇ ಆದಲ್ಲಿ ಅಮೆರಿಕಾದ ಹೊರಗೆ ಅಂದರೆ ಭಾರತದಲ್ಲಿ ಟೆಸ್ಲಾದ ಸಂಶೋಧನೆ ಮತ್ತು ಅಭಿವೃದ್ಧಿ (ಆರ್&ಡಿ) ಕೇಂದ್ರ ಹೊಂದಿದ ಎರಡನೇ ದೇಶ ಎಂಬ ಕೀರ್ತಿ ಭಾರತಕ್ಕೆ ಸಿಗಲಿದೆ.
ಐಟಿ ಸಿಟಿಯಲ್ಲಿ ಆರ್&ಡಿ ಕೇಂದ್ರವನ್ನು ಸ್ಥಾಪಿಸಲು ಕರ್ನಾಟಕ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದೆ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳು ಮುಂದಿನ ದಿನಗಳಲ್ಲಿ ಹೆಚ್ಚು ಕಂಡು ಬರುವುದರಿಂದ ಟೆಸ್ಲಾ ಭಾರತದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ತನ್ನ ಹೊಸ ನೆಲೆಯನ್ನು ಕಂಡುಕೊಳ್ಳುವ ಸಾಧ್ಯತೆ ಇದೆ.
ಅನಾಮಧೇಯ ಅಧಿಕಾರಿಯನ್ನು ಉಲ್ಲೇಖಿಸಿ ಎಕನಾಮಿಕ್ ಟೈಮ್ಸ್ ವರದಿಯ ಪ್ರಕಾರ, ಬೆಂಗಳೂರಿನಲ್ಲಿ ಆರ್ & ಡಿ ಸೌಲಭ್ಯಕ್ಕಾಗಿ ಟೆಸ್ಲಾ ಕರ್ನಾಟಕ ರಾಜ್ಯ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದೆ. "ಮೊದಲ ಪ್ರಸ್ತಾಪವು ಆರ್ & ಡಿ ಕೇಂದ್ರಕ್ಕಾಗಿ ಮತ್ತು ನಾವು ಈಗಾಗಲೇ ಕನಿಷ್ಠ ಎರಡು ಸುತ್ತಿನ ಚರ್ಚೆಗಳನ್ನು ನಡೆಸಿದ್ದೇವೆ" ಎಂದು ಅಧಿಕಾರಿ ಹೇಳಿದ್ದಾರೆ.

ಅಧಿಕೃತ ದೃಢೀಕರಣವು ರಾಜ್ಯ ಸರ್ಕಾರದಿಂದ ಅಥವಾ ಟೆಸ್ಲಾದಿಂದ ಬರಬೇಕಾಗಿದ್ದು, ಒಂದು ವೇಳೆ ಇದು ಸಾಧ್ಯವಾದಲ್ಲಿ ಭಾರತೀಯ ವಾಹನ ಉದ್ಯಮದಲ್ಲಿ ಸಂಪೂರ್ಣ ಸಂಚಲನವನ್ನು ಸೃಷ್ಟಿಸಲಿದೆ.
ಬೆಂಗಳೂರಿನಲ್ಲಿ ಈಗಾಗಲೇ ಜಗತ್ತಿನ ಖ್ಯಾತ ಕಾರು ಕಂಪನಿಗಳು ನೆಲೆಯೂರಿವೆ. ಡೈಮ್ಲರ್, ಬಾಷ್, ಮಹೀಂದ್ರಾ ಎಲೆಕ್ಟ್ರಿಕ್ ಇವೆ. ಓಲಾ, ಊಬರ್, ಸನ್ ಮೊಬಿಲಿಟಿ ಅಥರ್ ಎನರ್ಜಿಯಂತ ಸ್ಟಾರ್ಟ್ಅಪ್ಗಳು ಇವೆ.
ಭಾರತದಲ್ಲಿ ವಾಯು ಮಾಲಿನ್ಯ ಪ್ರಮಾಣ ತಗ್ಗಿಸಲು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಹೆಚ್ಚು ಪ್ರೋತ್ಸಾಹ ನೀಡಲಾಗುತ್ತಿದ್ದು, ಟೆಸ್ಲಾ ಆರ್ & ಡಿ ಕೇಂದ್ರದಿಂದ ದೊಡ್ಡ ಪ್ರಭಾವವನ್ನು ಪಡೆಯಬಹುದು.
Recommended Video
-
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ











Click it and Unblock the Notifications