ಹೊಸ ವರ್ಷಕ್ಕೆ ಭಾರತದಲ್ಲಿ ಟೆಸ್ಲಾ ಕಾರುಗಳ ಮಾರಾಟ: ಕೇಂದ್ರ ಸಚಿವ ನಿತಿನ್ ಗಡ್ಕರಿ
ನವದೆಹಲಿ, ಡಿಸೆಂಬರ್ 28: ಜಗತ್ತಿನ ನಂಬರ್ ಒನ್ ಎಲೆಕ್ಟ್ರಿಕ್ ವಾಹನ ತಯಾರಕ ಎಲೋನ್ ಮಸ್ಕ್ರವರ ಟೆಸ್ಲಾ ಕಂಪನಿಯು 2021 ರ ಆರಂಭದಲ್ಲಿ ಭಾರತದಲ್ಲಿ ಕಾರುಗಳ ಮಾರಾಟವನ್ನು ಪ್ರಾರಂಭಿಸಲಿದೆ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಕೇಂದ್ರ ಸಚಿವರೂ ಆದ ನಿತಿನ್ ಗಡ್ಕರಿ ಟೆಸ್ಲಾ ಮುಂದಿನ ವರ್ಷದಲ್ಲಿ ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ ಎಂದು ಹೇಳಿದ್ದಾರೆ. ಇದಕ್ಕೂ ಮೊದಲು ಎಕನಾಮಿಕ್ ಟೈಮ್ಸ್ ಆಟೋ ವರದಿಯು ಟೆಸ್ಲಾ ತನ್ನ ಮೊದಲ ಕಾರನ್ನು ಜೂನ್ 2021 ರೊಳಗೆ ಭಾರತದಲ್ಲಿ ಬಿಡುಗಡೆ ಮಾಡಲಿದೆ ಎಂದು ತಿಳಿಸಿತ್ತು.
2021 ರಿಂದ ಟೆಸ್ಲಾ ತಮ್ಮ ಕಾರುಗಳನ್ನು ಭಾರತದಲ್ಲಿ ಮಾರಾಟ ಮಾಡುವುದನ್ನು ಪ್ರಾರಂಭಿಸುತ್ತದೆ ಮತ್ತು ನಂತರ ಕಂಪನಿಯು ಪಡೆಯುವ ಪ್ರತಿಕ್ರಿಯೆಯ ಆಧಾರದ ಮೇಲೆ ಭಾರತದಲ್ಲಿ ಉತ್ಪಾದನಾ ಮತ್ತು ಜೋಡಣೆ ಮಾರ್ಗಗಳನ್ನು ಸ್ಥಾಪಿಸಲು ಪರಿಗಣಿಸಲಾಗುವುದು ಎಂದು ನಿತಿನ್ ಗಡ್ಕರಿ ಹೇಳಿದರು.

ಭಾರತದಲ್ಲಿ ಟೆಸ್ಲಾ ಎಲೆಕ್ಟ್ರಿಕ್ ವಾಹನಗಳ ಅಭಿಮಾನಿಗಳು ಸಾಕಷ್ಟಿದ್ದು, ಅದನ್ನು ಖರೀದಿಸಲು ಎದುರು ನೋಡುತ್ತಿದ್ದಾರೆ. ಎಲೋನ್ ಮಸ್ಕ್ ಅವರ ಪ್ರಕಾರ, ಸ್ಥಳೀಯವಾಗಿ ನಿಯಮಗಳು ಇಷ್ಟು ದಿನ ಕಾರು ಬಿಡುಗಡೆಗೆ ವಿಳಂಬಗೊಳಿಸಿದೆ ಎಂದಿದ್ದಾರೆ.
ಟೆಸ್ಲಾ ಈ ಹಿಂದೆ 2016ರಲ್ಲಿ ಭಾರತದಲ್ಲಿ ತನ್ನ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಪ್ರಯತ್ನಿಸಿತು. ಆದರೆ ಎಲೆಕ್ಟ್ರಿಕ್ ವಾಹನಗಳ ನೀತಿಯ ಅನಿಶ್ಚಿತತೆಯಿಂದಾಗಿ ಕಂಪನಿಯು ಕಾರುಗಳ ಬಿಡುಗಡೆಯನ್ನು ಮುಂದೂಡಿತು. ಆದರೆ ಈಗ ಮತ್ತೆ ನಾಲ್ಕು ವರ್ಷಗಳ ನಂತರ ಕಂಪನಿಯು ತನ್ನ ಬುಕಿಂಗ್ ಪ್ರಾರಂಭಿಸಲಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications